ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್‌- 1.9 ಕೆಜಿ ಚಿನ್ನ, ಬೆಳ್ಳಿ, ಹಣ ಸುಲಿದ ಪ್ರಿಯಕರ!

Twitter
Facebook
LinkedIn
WhatsApp
ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್‌- 1.9 ಕೆಜಿ ಚಿನ್ನ, ಬೆಳ್ಳಿ, ಹಣ ಸುಲಿದ ಪ್ರಿಯಕರ!

ಬೆಂಗಳೂರು (ಆ.28): ತನ್ನೊಂದಿಗಿರುವ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಬ್ಲಾಕ್‌ಮೇಲ್‌ ಮಾಡಿ 1.9 ಕೆಜಿ ಚಿನ್ನ ಹಾಗೂ 5 ಕೆಜಿ ಬೆಳ್ಳಿ ವಸ್ತುಗಳನ್ನು ಸುಲಿಗೆ ಮಾಡಿದ ಆರೋಪದ ಮೇರೆಗೆ ಯುವಕನೊಬ್ಬನನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಮಿತ್‌ ಬಂಧಿತನಾಗಿದ್ದು, ಆರೋಪಿಯಿಂದ 300 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ನೆಲೆಸಿರುವ 18 ವರ್ಷದ ಬಾಲಕಿಗೆ ಬ್ಲಾಕ್‌ಮೇಲ್‌ ಮಾಡಿ 1.9 ಕೆಜಿ ಚಿನ್ನ ಹಾಗೂ 5 ಕೇಜಿ ಬೆಳ್ಳಿ ಮಾತ್ರವಲ್ಲದೆ ಹಣವನ್ನು ಸುಮಿತ್‌ ಪಡೆದಿದ್ದ. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರು ನೀಡಿದ್ದಳು

ಇತ್ತೀಚೆಗೆ ಆಕೆಯನ್ನು ಭೇಟಿಯಾಗಿ ನೀನು ಹಣ ಕೊಡದೆ ಹೋದರೆ ನನ್ನ ಮೊಬೈಲ್‌ನಲ್ಲಿರುವ ತೆಗೆದಿರುವ ಫೋಟೋಗಳನ್ನು ಆಶ್ಲೀಲ ರೀತಿ ಎಡಿಟ್‌ ಮಾಡಿ ನಿಮ್ಮ ತಂದೆಗೆ ತೋರಿಸುತ್ತೇನೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಸಹ ಹರಿಬಿಡುತ್ತೇನೆ ಎಂದು ಸಂತ್ರಸ್ತೆಗೆ ಆತ ಬೆದರಿಸಿದ್ದ.

ಬ್ಲಾಕ್‌ಮೇಲ್‌ಗೆ ಹೆದರಿ ಆಕೆ, ಮೊದ ಮೊದಲು ಮನೆಯಲ್ಲಿ ತಂದೆಗೆ ತಿಳಿಯದಂತೆ .2,500 ರಿಂದ 10 ಸಾವಿರ ರವರೆಗೆ ಕೊಟ್ಟಿದ್ದಳು. ಪದೇ ಪದೇ ಆತ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಕೆಲ ದಿನಗಳ ಹಿಂದೆ ಮಾತನಾಡುವ ನೆಪದಲ್ಲಿ ಸಂತ್ರಸ್ತೆಯನ್ನು ಆರೋಪಿ ಕರೆಸಿಕೊಂಡಿದ್ದ. ಆಗ ಕುಡಿಯಲು ನೀರಿನ ಬಾಟಲ್‌ ಕೊಟ್ಟಿದ್ದ ಆತ, ‘ನೀರು ಕುಡಿದ ಬಳಿಕ ಅದರಲ್ಲಿ ಡ್ರಗ್‌್ಸ ಮಿಶ್ರಣ ಮಾಡಲಾಗಿತ್ತು.

ಮನೆಯಲ್ಲಿರುವ ಬಂಗಾರ ತಂದು ಕೊಡದೆ ಹೋದರೆ ಆಶ್ಲೀಲ ವಿಡಿಯೋ  ಸಾರ್ವಜನಿಕವಾಗಿ ಪ್ರದರ್ಶಿಸುತ್ತೇನೆ ಎಂದು ಬೆದರಿಸಿದ್ದ. ಈ ಮಾತಿಗೆ ಭೀತಿಗೊಂಡ ಆಕೆ, ಮನೆಯಲ್ಲಿದ್ದ 1.900 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವಸ್ತುಗಳನ್ನು ತೆಗೆದುಕೊಂಡು ಹೋಗಿ ಆರೋಪಿಗೆ ಕೊಟ್ಟಿದ್ದಳು ಎಂದು ದೂರಿನಲ್ಲಿ ಹೇಳಲಾಗಿದೆ.

ಕೆಲ ದಿನಗಳ ಹಿಂದೆ ಮನೆಯಲ್ಲಿದ್ದ ಚಿನ್ನಕ್ಕೆ ವಿಮೆ ನವೀಕರಣ ಮಾಡಿಸುವ ಮಾಡಿಸುವ ಸಲುವಾಗಿ ಸಂತ್ರಸ್ತೆಯ ತಂದೆ, ಮನೆಯಲ್ಲಿದ್ದ ಬಂಗಾರವನ್ನು ತೆಗೆದುಕೊಳ್ಳಲು ಹೋಗಿದ್ದಾರೆ. ಆದರೆ ಆ ವೇಳೆ ಬಾಕ್ಸ್‌ಗಳಲ್ಲಿ ಚಿನ್ನ ಕಾಣದೆ ಗಾಬರಿಗೊಂಡಿದ್ದಾರೆ. ಆಗ ಮಗಳನ್ನು ವಿಚಾರಿಸಿದಾಗ ಸುಲಿಗೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ