ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ಗೆ ಡಿ.10ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ ನ.23ರಂದು ಬೆಳಿಗ್ಗೆ 11 ಗಂಟೆಗೆ ನಾಮ ಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ದ.ಕ, ಉಡುಪಿ ಕ್ಷೇತ್ರದಿಂದ ಹಿರಿಯ ಕಾಂಗ್ರೆಸ್ ಮುಖಂಡ ಹಾಗು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕೆಮ್ಮಾಜೆಯ ಬಂಟ-ಕೃಷಿ ಕುಟುಂಬದಲ್ಲಿ ಜನಿಸಿದ ಮಂಜುನಾಥ್ ಭಂಡಾರಿ ‘ಪಂಚಾಯತ್ ರಾಜ್’ ವಿಷಯದಲ್ಲಿ ಎಂಪಿಎಲ್ ಮತ್ತು ಪಿಎಚ್ಡಿ ಮಾಡಿದ್ದಾರೆ. ರಾಜಕೀಯ ಶಾಸ್ತ್ರದಲ್ಲಿ ಎಂಎ ಸ್ನಾತಕೋತ್ತರ ಪದವಿ ಪಡೆದಿರುವ ಮಂಜುನಾಥ್ ಭಂಡಾರಿ 1978ರಲ್ಲಿ ಇಂದಿರಾ ಗಾಂಧಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗ ವಿದ್ಯಾರ್ಥಿಯಾಗಿದ್ದಾಗಲೇ ರಾಜಕೀಯ ಪ್ರವೇಶ ಮಾಡಿದ್ದರು. ಬಳಿಕ ಚಿಕ್ಕಮಗಳೂರು ಜಿಲ್ಲಾ ಎನ್ಎಸ್ಯುಐ ಅಧ್ಯಕ್ಷರಾಗಿ, ಅಖಿಲ ಭಾರತ ಯುವ ಕಾಂಗ್ರೆಸ್ನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಉಪಾಧ್ಯಕ್ಷರಾಗಿ, ಎಐಸಿಸಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಅಮೇರಿಕಾದ ಪ್ರತಿಷ್ಠಿಯ ‘ಐಸನ್ ಹೂವರ್’ ಫೆಲೋಶಿಪ್ ಪಡೆದಿದ್ದರು. ಇಂದಿರಾ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜೀವ ವಿಕಾಸ ಕೇಂದ್ರ ಪ್ರಸ್ತಾವನೆ ಮುಂದಿರಿಸಿದ್ದರು. 2014ರಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?