ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಧಾನಸಭೆ ಚುನಾವಣೆ : ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಕ್ಕೆ ಕೊನೆ ;ಮಧ್ಯ ಮಾರಾಟಕ್ಕೂ ನಿಷೇಧ!

Twitter
Facebook
LinkedIn
WhatsApp
pngtree 25 years anniversary vector template design illustration png image 942231

ಬೆಂಗಳೂರು (ಮೇ.08): ಜಿದ್ದಾಜಿದ್ದಿನ ಕಣವಾಗಿರುವ ವಿಧಾನಸಭೆ ಚುನಾವಣೆಗೆ ಅಬ್ಬರದ ಬಹಿರಂಗ ಪ್ರಚಾರ ಸೋಮವಾರ ಸಂಜೆ 6ಗಂಟೆಗೆ ಮುಕ್ತಾಯವಾಗಲಿದ್ದು, ‘ನಿಶ್ಶಬ್ದ ಅವಧಿ’​ (ಸೈಲೆಂಟ್‌ ಪೀರಿಯಡ್‌) ಪ್ರಾರಂಭವಾಗಲಿದೆ. ಆದರೆ, ಅಂತಿಮ ಕ್ಷಣದವರೆಗೆ ಮತದಾರರ ಮನವೊಲಿಕೆ ಕಸರತ್ತು ಮುಂದುವರೆಯಲಿದೆ. 

ಅಭ್ಯರ್ಥಿಗಳು ಅಥವಾ ಅವರ ಪರವಾಗಿ ಮುಖಂಡರು, ಕಾರ್ಯಕರ್ತರು ಮತದಾರರ ಮನೆ ಮನೆಗೆ ತೆರಳಿ ಪ್ರಚಾರವನ್ನೂ ನಡೆಸಬಹುದು. ಚುನಾವಣಾ ಅಖಾಡದಲ್ಲಿ ಮತಬೇಟೆಯ ಅಬ್ಬರ ತೀವ್ರವಾಗಿದ್ದು, ಪ್ರಚಾರದ ಭರಾಟೆ ಸ್ತಬ್ದವಾಗಲಿದೆ.  ಮತದಾನ ಮುಕ್ತಾಯದ 48 ಗಂಟೆಗೂ ಮೊದಲು ಚುನಾವಣಾ ಬಹಿರಂಗ ಪ್ರಚಾರ ಅಂತ್ಯವಾಗುವ ಹಿನ್ನೆಲೆಯಲ್ಲಿ ಸೋಮವಾರ ಸಂಜೆ 6ಗಂಟೆಯೊಳಗೆ ಎಲ್ಲಾ ಕ್ಷೇತ್ರದಲ್ಲಿಯೂ ಬಹಿರಂಗ ಪ್ರಚಾರ, ಸಾರ್ವಜನಿಕ ಸಭೆಗಳು ಮುಕ್ತಾಯವಾಗಲಿವೆ. ನಿಶಬ್ದ ಅವಧಿ​ಯಲ್ಲಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. 

ಸ್ಟಾರ್‌ ಪ್ರಚಾರಕರು, ಮುಖಂಡರು ಕ್ಷೇತ್ರವನ್ನು ತೊರೆಯಬೇಕು. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಅಂತಿಮ ಮತಯಾಚನೆಯ ಕಸರತ್ತು ನಡೆಸಲಿದ್ದಾರೆ. ಸೋಮವಾರ ಸಂಜೆ 6 ಗಂಟೆಯ ಬಳಿಕ ಕ್ಷೇತ್ರದಲ್ಲಿ ಸಂಬಂಧಪಡದ ವ್ಯಕ್ತಿಗಳು ಕಂಡು ಬಂದರೆ ಚುನಾವಣಾ ಆಯೋಗದ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಿದ್ದಾರೆ. ಇದೇ ವೇಳೆ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗುತ್ತದೆ.

5 ಮಂದಿಗಿಂತ ಹೆಚ್ಚು ಮಂದಿ ಓಡಾಡುವಂತಿಲ್ಲ: ಸೋಮವಾರ ಸಂಜೆ 6 ಗಂಟೆಯ ಬಳಿಕ ನಿಶ್ಶಬ್ದ ಅವಧಿಯಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಗುಂಪು ಗುಂಪಾಗಿ ಓಡಾಡುವಂತಿಲ್ಲ. ಪ್ರತಿ ಕ್ಷೇತ್ರದಲ್ಲಿ ಐದು ಮಂದಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ ಮತ್ತು ಓಡಾಡುವಂತೆಯೂ ಇಲ್ಲ. ಐದು ಮಂದಿಗಿಂತ ಹೆಚ್ಚು ಜನ ಒಂದೆಡೆ ಕಂಡು ಬಂದರೆ ನೀತಿ ಸಂಹಿತೆ ಉಲ್ಲಂಘನೆಯಡಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದಿದೆ.

ಹೊರ ರಾಜ್ಯ ಪೊಲೀಸರ ನಿಯೋಜನೆ: ವಿಧಾನಸಭೆ ಚುನಾವಣೆ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಚುನಾವಣಾ ಕಾರ್ಯಕ್ಕೆ ಎಂಟು ಸಾವಿರಕ್ಕಿಂತ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಆಂಧ್ರಪ್ರದೇಶದಿಂದ ಒಂದು ಸಾವಿರ ಪೊಲೀಸರು ಮತ್ತು ಗೃಹ ರಕ್ಷಕ ದಳ ಸಿಬ್ಬಂದಿ ಒಂದು ಸಾವಿರ, ತೆಲಂಗಾಣದಿಂದ 516 ಪೊಲೀಸರು ಮತ್ತು 684 ಗೃಹರಕ್ಷಕ ದಳ ಸಿಬ್ಬಂದಿ, ಮಹಾರಾಷ್ಟ್ರದಿಂದ ಮೂರು ಸಾವಿರ ಗೃಹರಕ್ಷಕ ದಳ ಸಿಬ್ಬಂದಿ, ತಮಿಳುನಾಡಿನಿಂದ 500 ಪೊಲೀಸರು ಮತ್ತು ಒಂದು ಸಾವಿರ ಗೃಹರಕ್ಷಕ ದಳ, ಕೇರಳದಿಂದ 600 ಪೊಲೀಸರು ಮತ್ತು ಗೋವಾದಿಂದ 100 ಪೊಲೀಸರು ಮತ್ತು 100 ಗೃಹರಕ್ಷಕ ದಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist