ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನಸಭೆ ಚುನಾವಣೆ ಹಿನ್ನೆಲೆ; ಕಾಂಗ್ರೆಸ್ ಟಿಕೆಟ್ ಅರ್ಜಿಯಿಂದ ದಾಖಲೆ ಹಣ ಸಂಗ್ರಹ

Twitter
Facebook
LinkedIn
WhatsApp
ವಿಧಾನಸಭೆ ಚುನಾವಣೆ ಹಿನ್ನೆಲೆ; ಕಾಂಗ್ರೆಸ್ ಟಿಕೆಟ್ ಅರ್ಜಿಯಿಂದ ದಾಖಲೆ ಹಣ ಸಂಗ್ರಹ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದು, 21.19 ಕೋಟಿ ಮೊತ್ತದ ಹಣ ಸಂಗ್ರಹ ಮಾಡುವ ಮೂಲಕ ಇನ್ನಿತರ ರಾಜಕೀಯ ಪಕ್ಷಗಳ ಹುಬ್ಬೇರಿಸಿದೆ.
ಕೆಪಿಸಿಸಿ ಮೂಲಗಳು ನೀಡಿರುವ ಮಾಹಿತಿ ಪ್ರಕಾರ ಒಟ್ಟು 1311 ಮಂದಿ ಆಕಾಂಕ್ಷಿಗಳು ಟಿಕೆಟ್ ಗಾಗಿ ಅರ್ಜಿ ಪಡೆದಿದ್ದು, ಆ ಪೈಕಿ 1230 ಅರ್ಜಿಗಳು ಸ್ವೀಕಾರವಾಗಿವೆ. ಇದರಲ್ಲಿ ಸಾಮಾನ್ಯ ವರ್ಗದ 889 ಅರ್ಜಿಗಳು, ಎಸ್ ಟಿ ಎಸ್ ಸಿ ವರ್ಗದಿಂದ 341 ಅರ್ಜಿಗಳನ್ನು ಭರ್ತಿ ಮಾಡಿ, ಡಿಡಿ ಪಡೆದು ಸಲ್ಲಿಸಲಾಗಿದ್ದು, 2023ರ ಚುನಾವಣೆಗಾಗಿ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಮಾರಾಟ ಮತ್ತು ಸ್ವೀಕಾರ ಮಾಡುವಲ್ಲಿ ದಾಖಲೆ ಮಾಡಿದೆ.

ಅರ್ಜಿ ಪಡೆದುಕೊಂಡು ಭರ್ತಿ ಮಾಡಿ ಹಿಂದಿರಿಗಿಸದೇ ಇರುವ 81 ಆಕಾಂಕ್ಷಿಗಳಿಗೆ ಸಮಾಯಾವಕಾಶ ನೀಡಲಾಗಿದೆ. 81 ಜನರು ಅರ್ಜಿ ಸಲ್ಲಿಸಿ ಠೇವಣಿ ಹಣ ಸಂದಾಯ ಮಾಡಿದರೆ ಇನ್ನು 1.6 ಕೋಟಿ ರೂಪಾಯಿ ಸಂಗ್ರಹವಾಗುವ ಸಾಧ್ಯತೆ ಇದೆ.
ಆಕಾಂಕ್ಷಿತ ಅಭ್ಯರ್ಥಿಗಳಿಂದ ಸಂಗ್ರಹಿಸಿದ ಹಣವನ್ನು ಕೆಪಿಸಿಸಿಯ ನೂತನ ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸಾಮಾನ್ಯ ಆಕಾಂಕ್ಷಿಗಳಿಗೆ 2 ಲಕ್ಷ ಎಸ್ ಸಿ ಎಸ್ ಟಿ 1ಲಕ್ಷ ಮೊತ್ತ ಸಾಮಾನ್ಯ ವರ್ಗದ ಆಕಾಂಕ್ಷಿ ಅಭ್ಯರ್ಥಿಗಳು ಅರ್ಜಿ ಮೊತ್ತ 5 ಸಾವಿರದ ಜೊತೆಗೆ ಎರಡು ಲಕ್ಷದ ಡಿಡಿ ಸಲ್ಲಿಕೆ ಮಾಡಬೇಕು. ಅದೇ ರೀತಿಯಲ್ಲಿ ಎಸ್ ಸಿ ಎಸ್ ಟಿ ಸಮುದಾಯದ ಆಕಾಂಕ್ಷಿಗಳಿಗೆ ಒಂದು ಲಕ್ಷ ರೂಪಾಯಿ ನಿಗದಿ ಪಡಿಸಲಾಗಿತ್ತು. ಈ ಮೂಲಕ ಸಾಮಾನ್ಯ ವರ್ಗದ ಆಕಾಂಕ್ಷಿಗಳಿಂದ 17.78 ಕೋಟಿ ಹಾಗೂ ಆಕಾಂಕ್ಷಿಗಳಿಂದ 3.41 ಕೋಟಿ ಮೊತ್ತ ಸಂಗ್ರಹವಾಗಿದೆ ಎಂದು ಕೆಪಿಸಿಸಿ ಮೂಲಗಳ ದೃಢಪಡಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ