ದೆಹಲಿ: ದೇಶದ ಕೆಲವು ಭಾಗಗಳಲ್ಲಿ ಕೊವಿಡ್ ( Covid 19 ) ಪ್ರಕರಣಗಳು ಏರಿಕೆಯಾಗುತ್ತಿದ್ದಂತೆ ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನಗಳಲ್ಲಿ ಮಾಸ್ಕ್ ಧರಿಸುವುದು ( Mask ) ಕಡ್ಡಾಯ ಮಾಡಲಾಗಿದೆ.
ನಿಗಾ ಮತ್ತು ಎಚ್ಚರಿಕೆಗಳನ್ನು ಹೆಚ್ಚಿಸುವಂತೆ ವಿಮಾನ ನಿಲ್ದಾಣ ಆಪರೇಟರ್ ಗಳಿಗೆ ಹೇಳಲಾಗಿದೆ. ಮಾಸ್ಕ್ ಧರಿಸಲು ನಿರಾಕರಿಸುವ ಪ್ರಯಾಣಿಕರಿಗೆ ದಂಡ ಅಥವಾ ಅಂಥಾ ವ್ಯಕ್ತಿಗಳನ್ನು ಭದ್ರತಾ ಏಜೆನ್ಸಿಗಳಿಗೆ ಒಪ್ಪಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಸಿಎ ಆದೇಶದಲ್ಲಿ ಹೇಳಿದೆ.
ಕೊವಿಡ್ ಸಾಂಕ್ರಾಮಿಕ ಇನ್ನೂ ಹೋಗಿಲ್ಲ, ಹಾಗಾಗಿ ಕೊವಿಡ್ ಪ್ರೋಟೊಕಾಲ್ ಗಳನ್ನು ತಪ್ಪದೇ ಪಾಲಿಸಬೇಕು. ಇದನ್ನು ಪಾಲಿಸದೇ ಇದ್ದವರ ವಿರುದ್ಧ ಆರೋಗ್ಯ ಸಚಿವಾಲಯ ಅಥವಾ ಡಿಜಿಸಿಎ ಮಾರ್ಗಸೂಚಿ ಪ್ರಕಾರ ಕ್ರಮ ಕೈಗೊಳ್ಳಬಹುದು ಎಂದು ಜೂನ್ 3ರಂದು ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿತ್ತು.
ನಿಯಮ ಪಾಲಿಸದೇ ಇರುವ ಪ್ರಯಾಣಿಕರನ್ನು ಹೊರದಬ್ಬಬಹುದು, “ನೊ-ಫ್ಲೈ” ಪಟ್ಟಿಗೆ ಸೇರಿಸಬಹುದು ಅಥವಾ ಮುಂದಿನ ಕ್ರಮಕ್ಕಾಗಿ ಭದ್ರತಾ ಏಜೆನ್ಸಿಗಳಿಗೆ ಹಸ್ತಾಂತರಿಸಬಹುದು ಎಂದು ನ್ಯಾಯಾಲಯವು ಹೇಳಿದೆ. “ನಮ್ಮ ದೃಷ್ಟಿಯಲ್ಲಿ ಈ ರೀತಿ ಆದೇಶವನ್ನು ನೀಡುವುದು ಸರಿಯಾದ ಹೆಜ್ಜೆಯಾಗಿದೆ, ಏಕೆಂದರೆ ಸಾಂಕ್ರಾಮಿಕ ರೋಗವು ಕಡಿಮೆಯಾಗಿಲ್ಲ ಮತ್ತು ಅದು ಮತ್ತೆ ಮತ್ತೆ ಬರುತ್ತಿದೆ ಎಂದು ನ್ಯಾಯಾಲಯ ಹೇಳಿದೆ.
ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?