ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿವಾದದ ನಡುವೆಯೂ `ಉರಿಗೌಡ – ನಂಜೇಗೌಡ’ ಚಿತ್ರೀಕರಣಕ್ಕೆ ಮುಹೂರ್ತ ಫಿಕ್ಸ್!

Twitter
Facebook
LinkedIn
WhatsApp
ವಿವಾದದ ನಡುವೆಯೂ `ಉರಿಗೌಡ – ನಂಜೇಗೌಡ’ ಚಿತ್ರೀಕರಣಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು: ಮಂಡ್ಯದ ಒಕ್ಕಲಿಗ ಕಲಿಗಳು ಎಂದು ಬಿಂಬಿಸಲಾಗುತ್ತಿರುವ `ಉರಿಗೌಡ, ನಂಜೇಗೌಡ’ (Urigowda, Nanjegowda) ಹೆಸರಿನಲ್ಲಿ ಸಿನಿಮಾವೊಂದು (Cinema) ಮೂಡಿ ಬರುತ್ತಿದ್ದು, ಮೇ 18ರಂದು ಚಿತ್ರೀಕರಣಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ.

ಚಿತ್ರಕ್ಕೆ `ಉರಿಗೌಡ-ನಂಜೇಗೌಡ’ (1750-1799 ಐತಿಹಾಸಿಕ ಘಟನೆಗಳನ್ನು ಆಧರಿಸಿದ ಸತ್ಯಕಥೆ) ಎಂಬ ಶೀರ್ಷಿಕೆಯನ್ನಿಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಮುನಿರತ್ನ (Munirathna) ಚಿತ್ರದ ಪೋಸ್ಟರ್ ಸಹ ಹಂಚಿಕೊಂಡಿದ್ದಾರೆ.

ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ ‘ಉರೀಗೌಡ ನಂಜೇಗೌಡ’ ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಡಾ.ಸಿ.ಎನ್ ಅಶ್ವಥ್ ನಾರಾಯಣ್ (CN Ashwath Narayan) ಅವರ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್.ಎಸ್.ಗೌಡ (RS Gowda) ನಿರ್ದೇಶನ ಮಾಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಕುರುಕ್ಷೇತ್ರ ಸೇರಿದಂತೆ ಹಲವು ಭಾರೀ ಬಜೆಟ್ ಸಿನಿಮಾಗಳನ್ನ ನಿರ್ಮಾಣ ಮಾಡಿರುವ ಮುನಿರತ್ನ, ಈ ಬಾರಿ ವಿವಾದಿತ ವ್ಯಕ್ತಿಗಳ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಸದ್ಯ ಯಾವ ರೀತಿ ಈ ಚಿತ್ರ ಮೂಡಿಬರಲಿದೆ ಎಂಬುದು ಕುತೂಹಲವಾಗಿದೆ.

https://twitter.com/MunirathnaMLA/status/1637111111840567297?ref_src=twsrc%5Etfw%7Ctwcamp%5Etweetembed%7Ctwterm%5E1637111111840567297%7Ctwgr%5E1c1d3b4fa66383632fcf6034a08b7769423381f7%7Ctwcon%5Es1_&ref_url=https%3A%2F%2Fpublictv.in%2Furigowda-nanjegowda-filming-starts-on-march-18th-munirathna-tweet%2F

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ