ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಮೀರ ಮಿಥುನ್.

Twitter
Facebook
LinkedIn
WhatsApp
ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಮೀರ ಮಿಥುನ್.

ಚೆನ್ನೈ: ಸಿನಿಮಾ ಉದ್ಯಮದಲ್ಲಿನ ಎಲ್ಲಾ ತಪ್ಪು ಚಟುವಟಿಕೆಗಳಿಗೆ ಪರಿಶಿಷ್ಟ ಜಾತಿಯವರೇ ಕಾರಣ, ಅವರನ್ನು ಸಿನಿಮಾ ಇಂಡಸ್ಟ್ರಿಯಿಂದ ಹೊರಹಾಕಬೇಕು ಎಂದು ತಮಿಳು ನಟಿ, ತಮಿಳು ಬಿಗ್ ಬಾಸ್ ಸೀಸನ್ 3 ರಲ್ಲಿ ಭಾಗವಹಿಸಿದ್ದ ಮೀರಾ ಮಿಥುನ್ ಹೇಳಿದ್ದು, ಅವರ ವಿರುದ್ದ ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಟಿ ಮೀರಾ ಮಿಥುನ್‌ ಅವರು ಪರಿಶಿಷ್ಟ ಜಾತಿಯವರನ್ನು ನಿಂದಿಸಿ, ಅವಹೇಳನಕಾರಿ ಟೀಕೆಗಳನ್ನು ಮಾಡಿದ್ದಕ್ಕಾಗಿ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸಾಮಾಜಿಕವಾಗಿ ಜನಾಕ್ರೋಶ ವ್ಯಕ್ತವಾದ ಬಳಿಕ ಪೊಲೀಸರು ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.
ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಮೀರಾ ಮಿಥುನ್, “ಎಲ್ಲಾ ಪರಿಶಿಷ್ಟ ಸಮುದಾಯದ ಸದಸ್ಯರು ಕಾನೂನುಬಾಹಿರ ಚಟುವಟಿಕೆಗಳು ಮತ್ತು ಅಪರಾಧಗಳಲ್ಲಿ ತೊಡಗಿರುವ ಕಾರಣ ತೊಂದರೆ ಎದುರಿಸುತ್ತಾರೆ. ಯಾವುದೇ ಕಾರಣವಿಲ್ಲದೆ ಯಾರೂ ಅನಗತ್ಯವಾಗಿ ಕೆಟ್ಟದಾಗಿ ಮಾತನಾಡುವುದಿಲ್ಲ” ಎಂದಿದ್ದರು.

ಸಿನಿಮಾ ಉದ್ಯಮದಲ್ಲಿನ ಎಲ್ಲಾ ತಪ್ಪು ಚಟುವಟಿಕೆಗಳಿಗೆ ಪರಿಶಿಷ್ಟ ಜಾತಿಯ ನಿರ್ದೇಶಕರು ಮತ್ತು ಎಸ್ಸಿ ಸಮುದಾಯದ ಸದಸ್ಯರ ಕಾರಣ ಎಂದು ಮೀರಾ ಆರೋಪಿಸಿದ್ದಾರೆ.

“ಸಿನಿಮಾ ಉದ್ಯಮದಲ್ಲಿನ ಎಲ್ಲಾ ಪರಿಶಿಷ್ಟ ಜಾತಿಯ ಜನರನ್ನು, ನಿರ್ದೇಶಕರನ್ನು ಹೊರಹಾಕುವ ಸಮಯ ಇದು ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ. ಜೊತೆಗೆ ಎಸ್‌ಸಿ ಸಮುದಾಯದ ನಿರ್ದೇಶಕರು ತಮ್ಮ ಫೋಟೋವನ್ನು ಅವರ ಚಲನಚಿತ್ರದ ಫಸ್ಟ್ ಲುಕ್‌ಗಾಗಿ ಬಳಸಿದ್ದಾರೆ ಎಂದು ಮೀರಾ ಹೇಳಿಕೊಂಡಿದ್ದಾರೆ.

ಆಕೆಯ ಸಂದರ್ಶನದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕೆಯ ಹೇಳಿಕೆಯನ್ನು ಅನೇಕರು ಖಂಡಿಸಿದರು. ಆಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸರಿಗೆ ಒತ್ತಾಯಿಸಿದ್ದರು.

ವಿಡುದಲೈ ಸಿರುತೈಗಲ್ ಕಚ್ಚಿಯ ಉಪ ಪ್ರಧಾನ ಕಾರ್ಯದರ್ಶಿ ವನ್ನಿ ಅರಸು ಅವರ ದೂರಿನ ಆಧಾರದ ಮೇಲೆ, ಚೆನ್ನೈ ಪೊಲೀಸರು ಐಪಿಸಿಯ 153, 153 ಎ (1) (ಎ), 505 (1) (ಬಿ) ಸೇರಿದಂತೆ SC ಮತ್ತು ST (ದೌರ್ಜನ್ಯ ತಡೆ) ಕಾಯಿದೆಯ 7 ಸೆಕ್ಷನ್‌ಗಳ ಅಡಿಯಲ್ಲಿ ಮೀರಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸೈಬರ್ ಕ್ರೈಂ ವಿಭಾಗದ ಪೋಲಿಸರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೊದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪದರ್ಶಿ ಮತ್ತು ನಟಿ ಮೀರಾ ಮಿಥುನ್ ಅವರಿಗೆ ವಿಚಾರಣೆಗೆ ಬರುವಂತೆ ಬುಧವಾರ ನೋಟಿಸ್ ನೀಡಿದ್ದಾರೆ.
ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಪೊಲೀಸರು ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು