ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೇದಿಕೆಯಲ್ಲೇ ಅನಾರೋಗ್ಯಕ್ಕೆ ಒಳಗಾದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಅರ್ಧಕ್ಕೇ ನಿಂತ ಕಾರ್ಯಕ್ರಮ

Twitter
Facebook
LinkedIn
WhatsApp
ವೇದಿಕೆಯಲ್ಲೇ ಅನಾರೋಗ್ಯಕ್ಕೆ ಒಳಗಾದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಅರ್ಧಕ್ಕೇ ನಿಂತ ಕಾರ್ಯಕ್ರಮ

ಕೊಲ್ಕತ್ತಾ: ಉತ್ತರ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಇಂದು ಸಿಲಿಗುರಿಯಲ್ಲಿ 1,206 ಕೋಟಿ ರೂ. ಮೌಲ್ಯದ 3 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ವೇಳೆ ವೇದಿಕೆಯಲ್ಲೇ ತೀವ್ರ ಅಸ್ವಸ್ಥರಾದ ಸಚಿವ ನಿತಿನ್ ಗಡ್ಕರಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಯಿತು. ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಚಿಕಿತ್ಸೆ ಕೊಡಿಸಲು ಗ್ರೀನ್ ಕಾರಿಡಾರ್ ಮೂಲಕ ತಕ್ಷಣ ವೈದ್ಯರನ್ನು ಕರೆತರಲಾಯಿತು. ಇದೀಗ ಅವರು ಚೇತರಿಸಿಕೊಂಡಿದ್ದಾರೆ.

ಇಂದು ನಿತಿನ್ ಗಡ್ಕರಿ ಉತ್ತರ ಬಂಗಾಳದ ಸಿಲಿಗುರಿಯ ಶಿವ ಮಂದಿರದಿಂದ ಸೇವಕ್ ಕಂಟೋನ್ಮೆಂಟ್ ವರೆಗಿನ ಉದ್ದದ ರಸ್ತೆಯ ಶಂಕುಸ್ಥಾಪನೆ ನೆರವೇರಿಸಿದ್ದರು. ಡಾರ್ಜಿಲಿಂಗ್ ಜಂಕ್ಷನ್ ಬಳಿಯ ದಗಾಪುರ್ ಮೈದಾನದಲ್ಲಿ ಕಾರ್ಯಕ್ರಮ ನಡೆದಿತ್ತು. ಆ ವೇಳೆ ವೇದಿಕೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅಸ್ವಸ್ಥರಾಗಿದ್ದರಿಂದ ಕಾರ್ಯಕ್ರಮವನ್ನು ಅರ್ಧಕ್ಕೇ ನಿಲ್ಲಿಸಲಾಯಿತು. ತಕ್ಷಣ ಅವರನ್ನು ಗ್ರೀನ್ ರೂಂಗೆ ಕರೆದುಕೊಂಡು ಹೋದ ಸಿಬ್ಬಂದಿ ತುರ್ತು ಚಿಕಿತ್ಸೆ ಕೊಡಿಸಿದರು. ಅಲ್ಲಿ ಅವರ ಆರೋಗ್ಯ ಇನ್ನಷ್ಟು ಹದಗೆಟ್ಟಿದ್ದರಿಂದ ತಕ್ಷಣ ವೈದ್ಯರನ್ನು ಕರೆಸಲಾಯಿತು.

ಬಿಜೆಪಿ ಪಕ್ಷದ ಮೂಲಗಳ ಪ್ರಕಾರ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗಿದೆ. ವೈದ್ಯರ ಸಲಹೆಯಂತೆ ಸಲೈನ್ ಆರಂಭಿಸಲಾಗಿದೆ. ಗ್ರೀನ್ ರೂಂನಲ್ಲಿ ಸಚಿವರು ಪ್ರಥಮ ಚಿಕಿತ್ಸೆ ಪಡೆದರು. ಅದರ ನಂತರ ಹಸಿರು ಕಾರಿಡಾರ್ ಮೂಲಕ ಅವರನ್ನು ನೋಡಲು ಸಿಲಿಗುರಿಯ ವೈದ್ಯರನ್ನು ಕರೆಸಲಾಯಿತು. ಅವರು ನಿತಿನ್ ಚಿಕಿತ್ಸೆ ಪ್ರಾರಂಭಿಸಿದರು. ನಂತರ ಡಾರ್ಜಲಿಂಗ್‌ನ ಬಿಜೆಪಿ ಸಂಸದ ರಾಜು ಬಿಸ್ತಾ ಅವರು ನಿತಿನ್ ಗಡ್ಕರಿ ಅವರೊಂದಿಗೆ ಕಾರಿನಲ್ಲಿ ತಮ್ಮ ಮನೆಗೆ ತೆರಳಿದರು. ಕೇಂದ್ರ ಸಚಿವರ ಚಿಕಿತ್ಸೆಗೆ ಮತ್ತಿಗಾರದಲ್ಲಿರುವ ಅವರ ಮನೆಯಲ್ಲಿಯೇ ವ್ಯವಸ್ಥೆ ಮಾಡಲಾಯಿತು.

ಸಿಲಿಗುರಿಯಲ್ಲಿ ನಡೆದ ಸಮಾರಂಭದ ನಂತರ ನಿತಿನ್ ಗಡ್ಕರಿ ದಲ್ಖೋಲಾಗೆ ಹೋಗಬೇಕಿತ್ತು. ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ರದ್ದಾಗುವ ಸಾಧ್ಯತೆಯಿದೆ. ಇಂದು ಸಂಜೆ ಅವರು ನೇರವಾಗಿ ದೆಹಲಿಗೆ ಪ್ರಯಾಣ ಮಾಡುವ ಸಾಧ್ಯತೆಯಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ