ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೈದ್ಯರ ನಿರ್ಲಕ್ಷ್ಯ ಆರೋಪ ; ಆಸ್ಪತ್ರೆಯಲ್ಲಿ ಹೊಟ್ಟೆಯಲ್ಲೇ ಮಗು ಸಹಿತ ಗರ್ಭಿಣಿ ಸಾವು!

Twitter
Facebook
LinkedIn
WhatsApp
ms 040523 samarth 4

ಯಾದಗಿರಿ: ಹೊಟ್ಟೆಯಲ್ಲೇ ಮಗು ಸಹಿತ ಗರ್ಭಿಣಿ ಸಾವಿಗೀಡಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಹೆರಿಗೆ ಮಾಡಿಕೊಳ್ಳದೇ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆಂದು ಮೃತ ಮಹಿಳೆ ಕುಟುಂಬಸ್ಥರು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.

ಯಾದಗಿರಿಯ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಈ ಘಟನೆ ವರದಿಯಾಗಿದೆ. ಗೂಡೂರು ಗ್ರಾಮದ ಸಂಗೀತಾ (20) ಮೃತ ಗರ್ಭಿಣಿ. 3ನೇ ತಾರೀಖು ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಪ್ರತೀ ತಿಂಗಳು ಆರೋಗ್ಯ ತಪಾಸಣೆ ಮಾಡಿಸಿದ್ದರಿಂದ ಆರೋಗ್ಯವಾಗಿದ್ದರು. ದಿನ ತುಂಬಿದ್ದರಿಂದ ಯಾವುದೇ ಸಮಸ್ಯೆ ಇಲ್ಲ, ನಾರ್ಮಲ್ ಹೆರಿಗೆ ಮಾಡುವುದಾಗಿ ವೈದ್ಯರು ಹೇಳಿದ್ದರು. ಆಸ್ಪತ್ರೆಗೆ ದಾಖಲಾಗಿದ್ದರೂ ಸ್ಕ್ಯಾನ್ ಮಾಡದೇ ನಿರ್ಲಕ್ಷ್ಯ ವಹಿಸಿದ್ದರು ಎಂದು ಕುಟುಂಬದವರು ದೂರಿದ್ದಾರೆ. 

ಇಡೀ ದಿನ ಆರೋಗ್ಯವಾಗಿ, ಆ್ಯಕ್ಟೀವ್ ಆಗಿ ಸಂಗೀತಾ ಇದ್ದಳು. ಆದರೆ ಸಂಜೆ ಏಕಾಏಕೀ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿ, ಆಸ್ಪತ್ರೆ ಮುಂದೆ ಅಂಬುಲೆನ್ಸ್‌ನಲ್ಲೇ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.

ಯಾದಗಿರಿ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ