ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಶಿಕಲಾ ಜೊಲ್ಲೆ ಮನೆ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ!

Twitter
Facebook
LinkedIn
WhatsApp
ಶಶಿಕಲಾ ಜೊಲ್ಲೆ ಮನೆ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ!

ಗರ್ಭಿಣಿಯರು ಮತ್ತು ಮಕ್ಕಳಲ್ಲಿ ಪೌಷ್ಠಿಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯದಲ್ಲಿ ಮಾತೃಪೂರ್ಣ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯ ಮೂಲಕ ಗರ್ಭಿಣಿ ಮತ್ತು ಮಕ್ಕಳಿಗೆ ಶಿಶುವಿಹಾರಗಳ ಮೂಲಕ ಮೊಟ್ಟೆಯನ್ನು ವಿತರಿಸಲಾಗುತ್ತಿದೆ. ಅದಕ್ಕಾಗಿ ಮೊಟ್ಟೆ ಖರೀದಿ ಮಾಡಲು ಟೆಂಡರ್‌ ಕರೆದಿದ್ದು, ಟೆಂಡರ್‌ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಮತ್ತು ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ ಲಂಚ ಪಡೆದಿದ್ದಾರೆ ಎಂದು ಖಾಸಗಿ ವಾಹಿನಿ ನ್ಯೂಸ್‌ ಫಸ್ಟ್ ರಹಸ್ಯ ಕಾರ್ಯಚರಣೆ ನಡೆಸಿದ್ದು, ವಿಡಿಯೋ ಬಿಡುಗಡೆ ಮಾಡಿದೆ.
ನ್ಯೂಸ್‌ ಫಸ್ಟ್ ಮಾಡಿದ ವರದಿಯಲ್ಲಿ ಈ ಮುಂಚೆ ನೇರವಾಗಿ ಅಂಗನವಾಡಿ ಕೇಂದ್ರಗಳು ಮೊಟ್ಟೆ ಖರೀದಿ ಮಾಡುತ್ತಿದ್ದವು. ಆದರೆ ಈಗ ಕೇಂದ್ರೀಕೃತವಾಗಿ ಮೊಟ್ಟೆ ಪೂರೈಕೆಗೆ ಟೆಂಡರ್ ಕರೆದಿದ್ದೇವೆ. ನಿಮಗೆ ಟೆಂಡರ್ ಸಿಗುವಂತೆ ಮಾಡುತ್ತೇವೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಅದೇ ರೀತಿಯಲ್ಲಿ ಸಚಿವೆಯ ಸಂಪರ್ಕ ಕೊಟ್ಟ ಶಾಸಕ ಪರಣ್ಣ ಮುನವಳ್ಳಿ “ಟೆಂಡರ್ ನಿಮಗೆ ಆಗಬೇಕಾದರೆ ಪ್ರತಿ ತಿಂಗಳು ಸಚಿವರಿಗೆ ಒಂದು ಕೋಟಿ ಮತ್ತು ತನಗೆ 30 ಲಕ್ಷ ಹಣ ನೀಡಬೇಕು” ಎಂದು ಬೇಡಿಕೆಯಿಟ್ಟಿರುವುದು ಸಹ ರಹಸ್ಯ ಕಾರ್ಯಾಚರಣೆಯಲ್ಲಿ ದಾಖಲಾಗಿದೆ.
ಟೆಂಡರ್‌ಗಾಗಿ ಸಚಿವೆಯ ಸೂಚನೆಯಂತೆ ಚಿಕ್ಕೋಡಿಯ ಸಂಜಯ್ ಅರಗಿ ಎಂಬುವವರು 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರೆ ಎಂದು ನ್ಯೂಸ್‌ಫಸ್ಟ್ ತಂಡ ತಿಳಿಸಿದೆ. ಪಾರದರ್ಶಕವಾಗಿ ಮತ್ತು ಪಕ್ಷಪಾತರಹಿತವಾಗಿ ಟೆಂಡರ್ ನಡೆಸಬೇಕಾದ ಸಚಿವರು, ಲಂಚ ಪಡೆದು ಅಕ್ರಮವಾಗಿ ಟೆಂಟರ್ ಕೊಡಲು ಮುಂದಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದು ಮಕ್ಕಳಿಗೆ, ಗರ್ಭಿಣಿಯರಿಗೆ ತಲುಪಬೇಕಾದ ಹಣದ ವ್ಯವಸ್ಥಿತ ಲೂಟಿಯಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವರ ಭ್ರಷ್ಟಾಚಾರವನ್ನ ಖಂಡಿಸಿ, ಬೆಂಗಳೂರಿನ ಜೆ.ಸಿ ನಗರ ರಸ್ತೆಯಲ್ಲಿರುವ ಶಶಿಕಲಾ ಜೊಲ್ಲೆಯವರ ಅಧಿಕೃತ ಮುಂದೆ ಜಮಾಯಿಸಿದ NSUI ಕಾರ್ಯಕರ್ತರು, ನಿವಾಸಕ್ಕೆ ಮೊಟ್ಟೆಗಳನ್ನು ಎಸೆದು ಪ್ರತಿಭಟನೆ ನಡೆಸಿದ್ದಾರೆ.
ಭ್ರಷ್ಟಾಚಾರ ನಡೆಸಿರುವ ಸಚಿವರು ಈ ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಒಂದೆಡೆ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಣ ನೀಡದೆ ಸ್ಥಗಿತಗೊಳಿಸುವ ಹುನ್ನಾರ ನಡೆಸುತ್ತಿರುವ ಬಿಜೆಪಿ ಸರ್ಕಾರ, ಇನ್ನೊಂದೆಡೆ ಅದೇ ಕಾರ್ಯಕ್ರಮಗಳನ್ನು ತಮ್ಮ ಜೇಬು ತುಂಬಿಕೊಳ್ಳಲು ದುರ್ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮಾತೃಪೂರ್ಣ’ ಯೋಜನೆಯಡಿ ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಮೊಟ್ಟೆಗಳ ಖರೀದಿಯಲ್ಲಿ ಲಂಚ ಪಡೆದಿರುವ ಹಗರಣದಲ್ಲಿ ಭಾಗಿಯಾಗಿರುವ ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ
ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸಬೇಕು. ಲಂಚದ ಹಣಕ್ಕೆ ಬಿಜೆಪಿ ನಾಯಕರು ಜೊಲ್ಲು ಸುರಿಸುತ್ತಿರುವವರು ಎಂದು ಲೋಕಕ್ಕೆ ಗೊತ್ತಿದೆ. ಆದರೆ ಇವರು ಸಣ್ಣಮಕ್ಕಳು ಮತ್ತು ಗರ್ಭಿಣಿಯರ ತಟ್ಟೆಗೂ ಕೈಹಾಕುವ ಮಟ್ಟಕ್ಕೆ ಇಳಿದಿರುವುದು ನ್ಯೂಸ್‌ಫಸ್ಟ್ ನನಡೆಸಿರುವ ಕುಟುಕು ಕಾರ್ಯಾಚರಣೆಯಿಂದ ಬಯಲಾಗಿದೆ” ಎಂದಿದ್ದಾರೆ.
ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ: ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ
ಖಾಸಗಿ ವಾಹಿನಿಯ ಮೂಲಕ ರಹಸ್ಯ ಕಾರ್ಯಾಚರಣೆ ನಡೆಸಿ ನನ್ನನ್ನು ಆರೋಪಿತಳನ್ನಾಗಿ ಮಾಡುವ ಪ್ರಯತ್ನ ನಡೆಸುತ್ತಿರುವುದು ದುರದೃಷ್ಟಕರ. ಖಾಸಗಿ ವಾಹಿನಿಯಲ್ಲಿ ಹೇಳುತ್ತಿರುವ ಹಾಗೆ ಮೊಟ್ಟೆ ಖರೀದಿಗೆ ಇದುವರೆಗೂ ಯಾವದೇ ಟೆಂಡರ್ ಕರೆದಿಲ್ಲ. ಅಲ್ಲದೇ ಟೆಂಡರ್ ನೀಡಲು ನಾನು ವಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು