ಬೆಂಗಳೂರು: ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ತಿಂಗಳಲ್ಲಿ ಒಂದು ದಿನ ಮಕ್ಕಳಿಗೆ ಸಿರಿಧಾನ್ಯ ಬಿಸಿಯೂಟ ನೀಡಲಾಗುವುದು ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಕುರಿತು ಸದನದಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ಹಾಲು ಮಹಾಮಂಡಲ ಸಹಯೋಗದಲ್ಲಿ ತಿಂಗಳಲ್ಲಿ ಒಂದು ದಿನ ಶಾಲಾ ಮಕ್ಕಳಿಗೆ ಸಿರಿಧಾನ್ಯದ ಬಿಸಿಯೂಟ ನೀಡಲು ನಿರ್ಧರಿಸಲಾಗಿದ್ದು, ಬಜೆಟ್ನಲ್ಲಿಇದಕ್ಕಾಗಿ 10 ಕೋಟಿ ರು. ಮೀಸಲಿಡಿಸಲಾಗಿದೆ ಎಂದರು.
ಇನ್ನು ಸಿರಿಧಾನ್ಯ ಕೃಷಿ ಪ್ರೋತ್ಸಾಹಕ್ಕೆ ರಾಜ್ಯ ಸರ್ಕಾರವು ಪ್ರೋತ್ಸಾಹಧನ ನೀಡುತ್ತಿದ್ದು, ಒಂದು ಹೆಕ್ಟೇರ್ಗೆ ಕನಿಷ್ಠ 10,000 ರೂ. ನಿಂದ 20,000 ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದಿದ್ದಾರೆ.
ರಾಜ್ಯದ ನಾಲ್ಕು ಭಾಗದಲ್ಲಿ ಸಿರಿಧಾನ್ಯ ಮೇಳ ಆಯೋಜಿಸಿ ರೈತರಿಗೆ ಸಿರಿಧಾನ್ಯ ಕೃಷಿ ಬಗ್ಗೆ ಜಾಗೃತಿ ಹಾಗೂ ಉತ್ತೇಜನ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?