ಶಿವಮೊಗ್ಗ: 22 ವರ್ಷದ ಮಹಾತಾಯಿಯೊಬ್ಬರು ಮುದ್ದಾದ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಸೇರಿಯನ್ ಮೂಲಕ ಎರಡು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಆಲ್ಮಾಸ್ ಬಾನು ಮತ್ತು ಮಕ್ಕಳು ಆರೋಗ್ಯದಿಂದ ಇರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ಭದ್ರಾವತಿ ತಾಲೂಕ್ ತಡಸಾ ಗ್ರಾಮದ ಆಲ್ಮಾಸ್ ಬಾನು ಇಂದು ಬೆಳಗ್ಗೆ ಹೆರಿಗೆ ನೋವಿನಿಂದ ಸರ್ಜಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದಾರೆ.ನಾಲ್ವರು ಮಕ್ಕಳ ಪೈಕಿ ಒಂದೊಂದು ಮಗು 1.1 ಕೆಜಿ , 1.2 ಕೆಜಿ, 1.3 ಕೆಜಿ 1.8 ಕೆಜಿ ತೂಕ ಹೊಂದಿವೆ. ಆದರೆ, ನಾಲ್ಕೂ ಮಕ್ಕಳಿಗೂ ಸ್ವಲ್ಪ ಪ್ರಮಾಣದ ಉಸಿರಾಟದ ಸಮಸ್ಯೆಯಿದೆ. ಹಾಗಾಗಿ 2 ಮಕ್ಕಳಿಗೆ ಸಿ ಪ್ಯಾಪ್ ಅಳವಡಿಸಲಾಗಿದೆ.ಇನ್ನೆರಡು ಮಕ್ಕಳಿಗೆ ಕೃತಕ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?