ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶ್ರಮ ಇಲ್ಲದೆ ಫಲ ನಿರೀಕ್ಷೆ ಮಾಡಬೇಡಿ: ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Twitter
Facebook
LinkedIn
WhatsApp
ಅಧಿವೇಶನದ ವೇಳೆ ಇಡಿ ಸಮನ್ಸ್ ಜಾರಿ ರಾಜಕೀಯ ಸಂಚು ಎಂದ ಕೆಪಿಸಿಸಿ ಅಧ್ಯಕ್ಷ

ರೈತರ ಬೆಳೆಗಳನ್ನು ಯಾರೂ ಕೊಳ್ಳುವವರು ಇರಲಿಲ್ಲ. ಸರ್ಕಾರ ರೈತರ ನೆರವಿಗೆ ಬರದಿದ್ದಾಗ, ಅವರ ಬೆಳೆ ಖರೀದಿ ಮಾಡಿದ್ದಲ್ಲದೆ, ಊಟ, ಆಹಾರ ಪದಾರ್ಥ, ಆಕ್ಸಿಜನ್, ಆಂಬುಲೆನ್ಸ್ ಎಲ್ಲ ರೀತಿಯ ಸಹಾಯವನ್ನು ಪಕ್ಷದ ಕಾರ್ಯಕರ್ತರು, ಮುಖಂಡರು ಮಾಡಿದರು. ವಲಸೆ ಕಾರ್ಮಿಕರು ತಮ್ಮ ಊರಿಗೆ ಮರಳಲು ಮೂರುಪಟ್ಟು ಹಣ ವಸೂಲಿಗೆ ಸರ್ಕಾರ ಮುಂದಾದಾಗ ನಾವು ಹೋರಾಟಕ್ಕೆ ಮುಂದಾದೆವು. ತಕ್ಷಣ ಸಿದ್ದರಾಮಯ್ಯ ಅವರಿಗೆ ಹಾಗೂ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರಿಗೆ ಕರೆ ಮಾಡಿ ನಿರ್ಧಾರ ತಿಳಿಸಿ ಪಕ್ಷದ ವತಿಯಿಂದ 1 ಕೋಟಿ ಚೆಕ್ ಬರೆದು ತೆಗೆದುಕೊಂಡು ಹೋದೆ. ನಂತರ ಸರ್ಕಾರ ಬೇರೆ ದಾರಿ ಇಲ್ಲದೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿತು. ನಮ್ಮ ಹೋರಾಟ ದೇಶಕ್ಕೆ ಮಾದರಿ ಆಯಿತು. ನಮ್ಮ ಕಾರ್ಯಕ್ಕೆ ಬಿಜೆಪಿಯವರಿಗೆ ಉತ್ತರ ನೀಡಲು ಆಗುತ್ತಿಲ್ಲ.

ಬಿಜೆಪಿ ಸರ್ಕಾರ ಆಕ್ಸಿಜನ್ ಪೂರೈಸಲಾಗದೇ 37 ಜನ ಸತ್ತಾಗ, ಮಂತ್ರಿಗಳು ಕೇವಲ 3 ಮಂದಿ ಸತ್ತಿದ್ದಾರೆ ಎಂದು ತಿಳಿಸಿದರು. ನಂತರ ಈ ಮೃತರ ಕುಟುಂಬಕ್ಕೆ ತಲಾ 1 ಲಕ್ಷ ಪರಿಹಾರ ನೀಡಿದೆವು. ಕಾಂಗ್ರೆಸ್ ಜನರ ಸಂಕಷ್ಟಕ್ಕೆ ನಿಲ್ಲುತ್ತದೆ.

ರಾಹುಲ್ ಗಾಂಧಿ ಅವರು ದೇಶವನ್ನು ಒಗ್ಗೂಡಿಸಲು, ದೇಶದ ಐಕ್ಯತೆ ಕಾಪಾಡಲು ಭಾರತ ಜೋಡೋ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ನಾವು ಹಿಂದೆ ಚುನಾವಣೆಯಲ್ಲಿ ಸೋತಿರಬಹುದು. ನಾವೆಲ್ಲರೂ ಸೋತಿದ್ದರೂ ನಂತರ ಗೆದ್ದಿದ್ದೇವೆ. ಆದರೆ ನಮ್ಮ ಸಿದ್ಧಾಂತ, ಪಕ್ಷದ ನಿರ್ಧಾರವನ್ನು ನಾವು ಬಿಟ್ಟುಕೊಟ್ಟಿಲ್ಲ, ಬಿಟ್ಟುಕೊಡಬಾರದು.

ಕೆಪಿಸಿಸಿ ಚುನಾವಣೆ- ಪಕ್ಷದ ತೀರ್ಮಾನಕ್ಕೆ ಬದ್ಧ

ಈ ಪಾದಯಾತ್ರೆಯನ್ನು ಐದು ಅಂಶಗಳ ಮೇಲೆ ಮಾಡಲಾಗುತ್ತಿದೆ. ಸಮಾಜದಲ್ಲಿ ಸಾಮರಸ್ಯ ಮೂಡಿಸುವುದು, ಬೆಲೆ ಏರಿಕೆ ವಿರುದ್ಧ ಹೋರಾಡುವುದು, ನಿರುದ್ಯೋಗಿ ಯುವಕರ ಭವಿಷ್ಯ ರಕ್ಷಣೆ, ರಾಜ್ಯದಲ್ಲಿನ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಹಾಗೂ ರೈತರು ಮತ್ತು ಕಾರ್ಮಿಕರ ಭವಿಷ್ಯ ರಕ್ಷಿಸಲು ಈ ಪಾದಯಾತ್ರೆ ಮಾಡುತ್ತಿದ್ದೇವೆ.

ಬಿಜೆಪಿಯವರು ಕಳೆದ ಚುನಾವಣೆ ಸಮಯದಲ್ಲಿ ರಾಜ್ಯದ ಜನರಿಗೆ 600 ಭರವಸೆಗಳನ್ನು ನೀಡಿದ್ದು, ಅದರಲ್ಲಿ ಶೇ.90 ರಷ್ಟು ಈಡೇರಿಲ್ಲ. ಹೀಗಾಗಿ ನಾವು ದಿನನಿತ್ಯ ಒಂದೊಂದು ಪ್ರಶ್ನೆ ಕೇಳುತ್ತಿದ್ದು, ಅವರಿಂದ ಒಂದು ದಿನವೂ ಉತ್ತರ ನೀಡಲು ಆಗಿಲ್ಲ. ಅವರಿಗೆ ನುಡಿದಂತೆ ನಡೆಯಲು ಆಗಿಲ್ಲ. ಸರ್ಕಾರಿ ಹುದ್ದೆಗಳಿಗೆ ಒಂದೊಂದು ದರ ನಿಗದಿ ಮಾಡಿದ್ದಾರೆ. ಇದೆಲ್ಲವೂ ಮಾಧ್ಯಮಗಳಲ್ಲಿ ಬಂದಿರುವ ವರದಿಗಳಾಗಿವೆ. ರಾಜ್ಯದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿ ದಕ್ಷ ಆಡಳಿತ ನೀಡಬೇಕು.

ಬಿಜೆಪಿಯವರು ಕಾಂಗ್ರೆಸ್ ನ ಐದು ವರ್ಷದ ಆಡಳಿತದಲ್ಲಿನ ಅಕ್ರಮ ಬಯಲು ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಅವರು ತನಿಖೆ ಯಾಕೆ ಮಾಡಲಿಲ್ಲ? ಅವರು ಯಾವುದೇ ತನಿಖೆ ಬೇಕಾದರೂ ಮಾಡಲಿ. ನಾವು ತಪ್ಪು ಮಾಡಿದ್ದರೆ ನೇಣು ಹಾಕಲು ಹಗ್ಗವನ್ನು ನಾನೆ ಕೊಡಲು ಸಿದ್ಧ. ಬಿಜೆಪಿಯ ನಾಯಕ ನನನ್ನು ತಿಹಾರ್ ಜೈಲಿಗೆ ಹೋದವನು ಎಂದು ಹೇಳುತ್ತಾನೆ. ನನ್ನ ಮೇಲೆ ಯಾವ ಹಗರಣದ ಮೇಲೆ ಪ್ರಕರಣ ದಾಖಲಾಗಿದೆ? ನನ್ನ ವಿರುದ್ಧ ಯಾವುದೇ ಲಂಚ ಅಥವಾ ಮಂಚದ ಪ್ರಕರಣವಿಲ್ಲ.

ನಾನು ಹುಟ್ಟುತ್ತಾ ಕೃಷಿಕ, ವೃತ್ತಿಪರನಾಗಿ ವ್ಯಾಪಾರಸ್ಥ, ಆಯ್ಕೆಯಲ್ಲಿ ಶಿಕ್ಷಣ ಸಂಸ್ಥೆ ಮಾಲೀಕ, ಆಸಕ್ತಿಯಲ್ಲಿ ರಾಜಕಾರಣಿಯಾಗಿದ್ದು, ನಾನು ಎಂದಿಗೂ ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿಲ್ಲ. ಪಕ್ಷದ ಅಧ್ಯಕ್ಷನಾಗಿ ನಿಮಗೆ ಅಗೌರವ ತರುವ ಕೆಲಸ ಮಾಡುವುದಿಲ್ಲ. ಅಂತಹ ಕೆಲಸ ಮಾಡಿದ ದಿನ ನಾನು ಅಧಿಕಾರ ತ್ಯಜಿಸುತ್ತೇನೆ.

ಯಾರು ಏನು ಬೇಕಾದರೂ ಆಗಬಹುದು ಎಂಬುದಕ್ಕೆ ನಾನು ಒಂದು ಸಾಕ್ಷಿ. ನಿಮ್ಮೆಲ್ಲರ ಮೇಲೆ ನಂಬಿಕೆ ಇಟ್ಟು ಪಕ್ಷ ನಿಮಗೆ ಭಾರತ ಜೋಡೋ ಪಾದಯಾತ್ರೆ ಜವಾಬ್ದಾರಿ ನೀಡಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸಂಯೋಜಕರನ್ನು ನೇಮಿಸಲಾಗಿದೆ. ನೀವುಗಳು ಸಭೆ ಮಾಡಬೇಕು.

ಎಐಸಿಸಿ ಒಂದು ವಿಶೇಷ ತಂಡ ನೀಡಿದೆ. ನಾನು, ಹರಿಪ್ರಸಾದ್, ವೀರಪ್ಪ ಮೋಯ್ಲಿ ಸೇರಿದಂತೆ 16 ನಾಯಕರನ್ನು ಕರೆದು ಈ ತಂಡವನ್ನು ನೇಮಿಸಿರುವುದಾಗಿ ಸೂಚಿಸಿದ್ದಾರೆ. ಅವರು ನಿಮ್ಮ ಜತೆ ಗುರುತಿಸಿಕೊಳ್ಳುವುದಿಲ್ಲ. ನೀವು ನಾನು ಏನೆಲ್ಲಾ ಮಾಡುತ್ತಿದ್ದೇವೆ ಎಂದು ಆ ತಂಡ ಪರಿಶೀಲನೆ ಮಾಡುತ್ತಿದೆ. ನಾನು ಕೇವಲ ಸಭೆ ಸಮಾರಂಭಗಳಿಗೆ ಹೋಗುತ್ತಿದ್ದೇನೋ ಅಥವಾ ಪಕ್ಷ ಸಂಘಟನೆಗೆ ಹಳ್ಳಿ ಹಳ್ಳಿಗೆ ಹೋಗುತ್ತಿದ್ದೇನೋ ಎಂದು ಗಮನಿಸುತ್ತಿದ್ದಾರೆ. ಪ್ರತಿ ಕ್ಷೇತ್ರದ ಶಾಸಕರು, ಪರಾಜಿತ ಅಭ್ಯರ್ಥಿಗಳು, ಟಿಕೆಟ್ ಆಕಾಂಕ್ಷಿಗಳ ಕೆಲಸವನ್ನು ನೋಡುತ್ತಿದ್ದಾರೆ.

ನಮಗೆ ಪ್ರತಿ ಕ್ಷೇತ್ರವೂ ಮುಖ್ಯ. ಕೆಲವರು ನನ್ನ ಬಿಟ್ಟರೆ ನಮ್ಮ ಕ್ಷೇತ್ರದಲ್ಲಿ ಏನು ಮಾಡಲು ಸಾಧ್ಯ ಎಂದು ಭಾವಿಸಿದ್ದಾರೆ. ಅದು ಕೇವಲ ಭ್ರಮೆ. ಕೇರಳದಲ್ಲಿ ಸರಿಸುಮಾರು 13 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಹೀಗೆ ಪಕ್ಷದ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಪದಾಧಿಕಾರಿಗಳು ಹಾಗೂ ಸಂಯೋಜಕರಿಂದ ನಾನು ಖಾಸಗಿಯಾಗಿ ಪತ್ರವನ್ನು ಪಡೆದುಕೊಂಡು ಯಾರು ನಿಮ್ಮ ಕ್ಷೇತ್ರದಲ್ಲಿ ನಿಂತರೆ ಗೆಲ್ಲುತ್ತಾರೆ ಎಂದು ಅಭಿಪ್ರಾಯ ಕಲೆಹಾಕಿ ಅದನ್ನು ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಮುಂದೆ ಇಡುತ್ತೇನೆ.

ಬಿಜೆಪಿಯವರು ಸಮೀಕ್ಷೆ ಮಾಡಿದ್ದು, ಅವರ ಸೀಟುಗಳು 65 ಕ್ಕೆ ನಿಂತಿದೆ. ಹಾಗೆಂದು ನಾವು ಯಾಮಾರಬಾರದು. ನೀವು ಕೂಡ ಬೂತ್ ಮಟ್ಟದಲ್ಲಿ ಹೋಗಿ ಕೆಲಸ ಮಾಡಬೇಕು. ಈ ಪಾದಯಾತ್ರೆಗೆ ಮನೆ ಮನೆಗೂ ಹೋಗಿ ನಿಮ್ಮ ಮನೆ ಕಾರ್ಯಕ್ರಮಕ್ಕೆ ಆಹ್ವಾನಿಸುವ ರೀತಿ ಅವರನ್ನು ಕರೆಯಬೇಕು. ಪ್ರತಿ ಶಾಸಕರು 5 ಸಾವಿರ ಜನರನ್ನು ಕರೆತರಬೇಕು ಎಂದು ಸುರ್ಜೆವಾಲ ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ಕಾರ್ಯಕ್ರಮಕ್ಕೆ 1 ದಿನ 5 ಸಾವಿರ ಜನರನ್ನು ಕರೆ ತರಲು ಆಗಲಿಲ್ಲ ಎಂದರೆ ಅದನ್ನು ಸ್ವೀಕರಿಸಲು ಆಗಲ್ಲ. ಪ್ರತಿ ನಿತ್ಯ ಇಬ್ಬರು ಶಾಸಕರಿಗೆ ಅವಕಾಶ ನೀಡಲಾಗಿದೆ.

ರಾಹುಲ್ ಗಾಂಧಿ ಅವರು ಬೆಳಗ್ಗೆ 7 ಗಂಟೆಗೆ ಪಾದಯಾತ್ರೆ ಆರಂಭಿಸುತ್ತಾರೆ. ಮೂರು ರೀತಿಯ ಯಾತ್ರಿಗಳಿಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದು, 5 ಸಾವಿರ ಜನ ನೋಂದಣಿ ಮಾಡಿಕೊಂಡಿದ್ದಾರೆ. ಸ್ವಾತಂತ್ರ್ಯ ನಡಿಗೆ ಸಮಯದಲ್ಲಿ 1.36 ಲಕ್ಷ ಜನ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದರು. ಆ ನಡಿಗೆ ದೇಶಕ್ಕೆ ಕೊಡುಗೆಯಾಗಿತ್ತು. ಮತ್ತೆ ಆ ಕಾರ್ಯಕ್ರಮ ಮಾಡಲು ಸಾಧ್ಯವಿಲ್ಲ. 40 ಸಾವಿರ ಮಂದಿ ವಿದ್ಯಾರ್ಥಿಗಳೇ ಇದ್ದರು. ಯಾವ ಕ್ಷೇತ್ರದಿಂದ ಎಷ್ಟು ಜನ ಬಂದಿದ್ದರೂ ಎಂಬ ದಾಖಲೆಯೂ ಇದೆ. ಶಾಸಕರಿಲ್ಲದ ಕ್ಷೇತ್ರಗಳಿಂದ ಹೆಚ್ಚು ಯುವಕರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಕಾಂಗ್ರೆಸ್ ಪಕ್ಷದ ಬಗ್ಗೆ ಜನ ಆಶಾಭಾವನೆಯಿಂದ ಇದ್ದಾರೆ ಎಂಬುದಕ್ಕೆ ಇದು ಸಾಕ್ಷಿ.

ಯುವ ಕಾಂಗ್ರೆಸ್ ಗೆ ಯುವ ಧ್ವನಿ, ಉದ್ಯೋಗ ಸೃಷ್ಟಿ ಎಂದು ಕಾರ್ಯಕ್ರಮ ರೂಪಿಸಿದ್ದೇವೆ. ಅವರು ಮೊದಲ ಹಂತದಲ್ಲಿ 41 ಸಾವಿರ ನಿರುದ್ಯೋಗಿಗಳ ಹೆಸರು ನೋಂದಣಿ ಮಾಡಿದ್ದರು. ಈಗ ಆಪ್ ಮೂಲಕ ನೋಂದಣಿ ಮಾಡಿದಾಗ 6500 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಮಹಿಳೆಯರಿಗೂ ಅವಕಾಶ ಮಾಡಿಕೊಡಬೇಕಿದೆ. ರಾಜ್ಯದಲ್ಲಿ ಪ್ರಿಯಾಂಕ ಗಾಂಧಿ ಅವರು ಕೂಡ ಹೆಜ್ಜೆ ಹಾಕಲು ಬಯಸಿದ್ದಾರೆ. ಹೀಗಾಗಿ ಮಹಿಳೆಯರಿಗೆ ಪ್ರತ್ಯೆಕ ಕಾರ್ಯಕ್ರಮ ರೂಪಿಸಲಾಗುವುದು.

ಇನ್ನು 40% ಕಮಿಷನ್ ವಿಚಾರವಾಗಿ ಪ್ರತ್ಯೇಕ ಕಾರ್ಯಕ್ರಮ ರೂಪಿಸಿದ್ದೇವೆ. ಇದುವರೆಗೂ 2444 ಮಂದಿ ದೂರು ನೀಡಲು ನೋಂದಣಿ ಮಾಡಿದ್ದಾರೆ.

ನೀವು ನಿಮ್ಮ ಕ್ಷೇತ್ರಗಳಲ್ಲಿ ಹೋಗಿ ಜನರ ಮಧ್ಯೆ ಬೆರೆಯಬೇಕು. ಕೆಲವರು ಹೋಗಿಲ್ಲ. ನಿಮ್ಮ ಕೈಯಲ್ಲಿ ಆಗುವುದಿಲ್ಲ ಎಂದರೆ ತೊಂದರೆ ಇಲ್ಲ. ಕೆಲಸ ಮಾಡಲು ಉತ್ಸುಕರಾಗಿರುವವರು ಸಾಕಷ್ಟು ಜನರಿದ್ದಾರೆ. ಶ್ರಮ ಇಲ್ಲದೆ ಫಲ ನಿರೀಕ್ಷೆ ಮಾಡಬೇಡಿ. ನೀವು ನಿಮ್ಮ ಜಿಲ್ಲೆ ಮಟ್ಟದಲ್ಲಿ ಬೇರೆ ಬೇರೆ ಸಮಿತಿಗಳನ್ನು ಮಾಡಿಕೊಳ್ಳಿ. ನೀರು, ಊಟ, ವಾಹನ, ಸಭೆ ಆಯೋಜನೆ ಹೀಗೆ ಪ್ರತಿ ನಿತ್ಯದ ಜವಾಬ್ದಾರಿ ನೀಡಲಾಗುವುದು. ಪ್ರತಿ ನಿತ್ಯ ಕನಿಷ್ಠ 20 ಸಾವಿರ ಜನ ಹೆಜ್ಜೆ ಹಾಕಬೇಕು. ನಿಮ್ಮ ಕ್ಷೇತ್ರಗಳಲ್ಲಿನ ಸಾಂಸ್ಕೃತಿಕ ಕಲಾ ತಂಡಗಳಿದ್ದರೆ ಅವುಗಳನ್ನು ಕರೆತನ್ನಿ. ಎಲ್ಲ ಪದಾಧಿಕಾರಿಗಳ ಕೆಲಸವನ್ನು ಎಐಸಿಸಿ ಗಮನಿಸಲಿದೆ.

ರಾಹುಲ್ ಗಾಂಧಿ ಅವರು ರಾಜ್ಯದ ಮೇಲೆ ನಂಬಿಕೆ ಇಟ್ಟಿದ್ದು, ನಾವು ಮಾದರಿಯಾಗಿ ನಿಲ್ಲಬೇಕು. ನಾವು ಮಾಡಿದ ನಂತರ ಮಹಾರಾಷ್ಟ್ರದಿಂದ ಕಾಶ್ಮೀರದವರೆಗೆ ಎಲ್ಲ ರಾಜ್ಯಗಳು ನಮ್ಮ ಮಾದರಿ ಅಳವಡಿಸಿಕೊಳ್ಳುವಂತೆ ಆಗಬೇಕು.

ರಾಹುಲ್ ಗಾಂಧಿ ಅವರು ನಮಗಾಗಿ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಅಂತಹ ನಾಯಕನ ಕೆಳಗೆ ಕೆಲಸ ಮಾಡುತ್ತಿರುವುದು ನಮಗೆ ಹೆಮ್ಮೆ. ನಾವು ಪಕ್ಷ, ಸಂವಿಧಾನ, ರಾಷ್ಟ್ರಧ್ವಜ ರಕ್ಷಣೆ ಮಾಡಬೇಕಿದೆ.

ಅ. 2 ರಂದು ಗಾಂಧಿ ಜಯಂತಿಯಂದು ಬದನವಾಳು ಗ್ರಾಮದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಸರಾ ಹಬ್ಬದ ಸಮಯದಲ್ಲಿ 2 ದಿನ ಪಾದಯಾತ್ರೆಗೆ ವಿಶ್ರಾಂತಿ ನೀಡಲಾಗುವುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ