ಬುಧವಾರ, ಮೇ 1, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ, ಟೀಂ ಇಂಡಿಯಾ ಕೇವಲ 9 ರನ್‌ಗಳ ವಿರೋಚಿತ ಸೋಲು

Twitter
Facebook
LinkedIn
WhatsApp
ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ, ಟೀಂ ಇಂಡಿಯಾ ಕೇವಲ 9 ರನ್‌ಗಳ ವಿರೋಚಿತ ಸೋಲು

ಲಖನೌ(ಅ.06):  ಸೌತ್ ಆಫ್ರಿಕಾ ವಿರುದ್ದದ ಅಂತಿಮ ಟಿ20 ಪಂದ್ಯದಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ ಇದೀಗ ಮೊದಲ ಏಕದಿನ ಪಂದ್ಯದಲ್ಲೂ ಸೋಲಿನ ಕಹಿ ಅನುಭವಿಸಿದೆ. ಹಿರಿಯರಿಗೆ ವಿಶ್ರಾಂತಿ, ಹಲವರ ಅಲಭ್ಯತೆ ಟೀಂ ಇಂಡಿಯಾಗೆ ಬಹುವಾಗಿ ಕಾಡಿದೆ. ಸಂಜು ಸ್ಯಾಮ್ಸನ್ ದಿಟ್ಟ ಹೋರಾಟದಿಂದ ಟೀಂ ಇಂಡಿಯಾ ಕೊನೆ ಕ್ಷಣದಲ್ಲಿ ಸೋಲಿಗೆ ಶರಣಾಯಿತು. ಅಂತಿಮ 6 ಎಸೆತದಲ್ಲಿ ಭಾರತದ ಗೆಲುವಿಗೆ 30 ರನ್ ಅವಶ್ಯಕತೆ ಇತ್ತು. 1 ಸಿಕ್ಸರ್ ಹಾಗೂ 4 ಬೌಂಡರಿ ಸಿಡಿಸಿದರು. ಇದರೊಂದಿಗೆ ಟೀಂ ಇಂಡಿಯಾ ಕೇವಲ 9 ರನ್‌ಗಳ ವಿರೋಚಿತ ಸೋಲು ಕಂಡಿತು. ಯುವಕರನ್ನೊಳಗೊಂಡ ಶಿಖರ್ ಧವನ್ ಸೈನ್ಯ, ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸೋಲಿಗೆ ಗುರಿಯಾಗಿದೆ. ಟಿ20 ಸರಣಿ ಕೈಚೆಲ್ಲಿದ ಸೌತ್ ಆಫ್ರಿಕಾ ಇದೀಗ ಏಕದಿನದಲ್ಲಿ ಭರ್ಜರಿ ಶುಭಾರಂಭದೊಂದಿಗೆ ಟೀಂ ಇಂಡಿಯಾಗೆ ತಿರುಗೇಟು ನೀಡುವ ಸೂಚನೆ ನೀಡಿದೆ.

ಮಳೆಯಿಂದಾಗಿ ಪಂದ್ಯವನ್ನು 40 ಓವರ್‌ಗೆ ಕಡಿತಗೊಳಿಸಲಾಗಿತ್ತು. ಸೀಮಿತ ಓವರ್‌ನಲ್ಲಿ 250 ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ ನಿರೀಕ್ಷಿತ ಆರಂಭ ಪಡೆಯಲಿಲ್ಲ. ನಾಯಕ ಶಿಖರ್ ಧವನ್ ಹಾಗೂ ಶುಭಮನ್ ಗಿಲ್ ಹೋರಾಟ ಹೆಚ್ಚು ಹೊತ್ತು ಇರಲಿಲ್ಲ. ಶಿಖರ್ ಧವನ್ ಕೇವಲ 4 ರನ್ ಸಿಡಿಸಿ ಔಟಾದರೆ, ಗಿಲ್ 3 ರನ್ ಸಿಡಿಸಿ ನಿರ್ಗಮಿಸಿದರು. 8 ರನ್‌ಗಳಿಸುವಷ್ಟರಲ್ಲೇ ಟೀಂ ಇಂಡಿಯಾ ಪ್ರಮುಖ ಎರಡು ವಿಕೆಟ್ ಕಳೆದುಕೊಂಡಿತು.  ಏಕದಿನಕ್ಕೆ ಪದಾರ್ಪಣೆ ಮಾಡಿದ ರುತುರಾಜ್ ಗಾಯಕ್ವಾಡ್ 19 ರನ್ ಸಿಡಿಸಿ ನಿರ್ಗಮಿಸಿದರು.  ಇಶಾನ್ ಕಿಶನ್ ಹೋರಾಟ 20 ರನ್‌ಗೆ ಅಂತ್ಯವಾಯಿತು. 

ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ, ಟೀಂ ಇಂಡಿಯಾ ಕೇವಲ 9 ರನ್‌ಗಳ ವಿರೋಚಿತ ಸೋಲು

51 ರನ್‌ಗಳಿಸುವಷ್ಟರಲ್ಲೇ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ಶ್ರೇಯಸ್ ಅಯ್ಯರ್ ಹೋರಾಟದಿಂದ ಟೀಂ ಇಂಡಿಯಾ ಮತ್ತೆ ಟ್ರ್ಯಾಕ್‌ಗೆ ಮರಳಿತು. ಇತ್ತ ಸಂಜು ಸ್ಯಾಮ್ಸನ್ ಕೂಡ ಉತ್ತಮ ಸಾಥ್ ನೀಡಿದರು. ಅಯ್ಯರ್ ಹೋರಾಟದ ಮೂಲಕ ಅರ್ಧಶತಕ ಸಿಡಿಸಿ ಮಿಂಚಿದರು. 37 ಎಸೆತದಲ್ಲಿ ಅಯ್ಯರ್ 50 ರನ್ ಸಿಡಿಸಿ ಔಟಾದರು. 

ಸಂಜು ಸ್ಯಾಮ್ಸನ್ ಹಾಗೂ ಶಾರ್ದೂಲ್ ಠಾಕೂರ್ ಜೊತೆಯಾಟ ಟೀಂ ಇಂಡಿಯಾ ಕೈಹಿಡಿಯಿತು. ಸ್ಯಾಮ್ಸನ್ ಹೋರಾಟ ಮುಂದುವರಿಸಿದರೆ, ಠಾಕೂರ್ 33 ರನ್ ಸಿಡಿಸಿ ನಿರ್ಗಮಿಸಿದರು. ಇದರ ಬೆನ್ನಲ್ಲೇ ಕುಲ್ದೀಪ್ ಯಾದವ್ ಹಾಗೂ ಆವೇಶ್ ಖಾನ್ ವಿಕೆಟ್ ಪತನಗೊಂಡಿತು. ಆದರೆ ಸ್ಯಾಮನ್ಸ್ ಏಕಾಂಗಿ ಹೋರಾಟ ನೀಡಿದರು. ಅರ್ಧಶಥಕ ಸಿಡಿಸಿ ಗೆಲುವಿಗಾಗಿ ಇನ್ನಿಲ್ಲದ ಪ್ರಯತ್ನ ನಡೆಸಿದರು. ಭಾರತದ ಗೆಲುವಿಗೆ ಅಂತಿಮ 6 ಎಸೆತದಲ್ಲಿ 30 ರನ್ ಅವಶ್ಯಕತೆ ಇತ್ತು. ಕೇವಲ 2 ವಿಕೆಟ್ ಮಾತ್ರ ಉಳಿದಿತ್ತು. 

ಸಂಜು ಸ್ಯಾಮ್ಸನ್ ಮೊದಲ ಎಸೆತ ಸಿಕ್ಸರ್ ಸಿಡಿಸಿದರು. ಬಳಿಕ ಸತತ 2 ಬೌಂಡರಿ ಸಿಡಿಸಿದ ಸ್ಯಾಮ್ಸನ್, 4ನೇ ಎಸೆತದಲ್ಲಿ ರನ್ ಗಳಿಸಲು ಸಾಧ್ಯವಾಗಲಿಲ್ಲ. 5ನೇ ಎಸೆತದಲ್ಲಿ ಮತ್ತೊಂದು ಬೌಂಡರಿ ಸಿಡಿಸಿದರೆ, ಅಂತಿಮ ಎಸೆತದಲ್ಲಿ 1 ರನ್ ಸಿಡಿಸಿದರು. ಇದರೊಂದಿಗೆ ಅಂತಿಮ ಓವರ್‌ನಲ್ಲಿ 20 ರನ್ ಸಿಡಿಸಿದರು. ಈ ಮೂಲಕ ಸೌತ್ ಆಫ್ರಿಕಾ 9 ರನ್ ಗೆಲುವು ಕಂಡಿತು. ಸರಣಿಯಲ್ಲಿ 1-0 ಮುನ್ನಡೆ ಪಡೆಯಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ