ಬಾಲಿವುಡ್ ನಟಿ ಕಂಗನಾ ರಣಾವತ್ ಸದ್ಯ ಎಮರ್ಜನ್ಸಿ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾವನ್ನು ಅವರೇ ನಿರ್ದೇಶಿಸಿ, ನಟಿಸುತ್ತಿರುವುದರಿಂದ ಸಾಕಷ್ಟು ಜವಾಬ್ದಾರಿಗಳನ್ನೂ ಅವರು ತಗೆದುಕೊಂಡಿದ್ದಾರೆ. ಇದು ಇಂದಿರಾ ಗಾಂಧಿ ಅವರ ಹೇರಿದ್ದ ತುರ್ತುಪರಿಸ್ಥಿತಿಯ ಕುರಿತಾಗಿ ಮಾಡುತ್ತಿರುವ ಸಿನಿಮಾವಾಗಿದ್ದರಿಂದ ಸಂಸತ್ ಭವನ್ನು ಶೂಟಿಂಗ್ ಗೆ ಕೊಡುವಂತೆ ಅವರು ಕೇಳಿಕೊಂಡಿದ್ದಾರೆ.
ಸಿನಿಮಾ ಆದಷ್ಟು ನೈಜವಾಗಿಯೇ ಮೂಡಿ ಬರುಬೇಕು ಎನ್ನುವುದು ಅವರ ಕನಸು. ಇಂದಿರಾ ಗಾಂಧಿ ಕಾಲದಲ್ಲಿ ಸಂಸತ್ ನಲ್ಲಿ ನಡೆದ ಘಟನೆಗಳನ್ನು ದೃಶ್ಯವಾಗಿಸುವ ಆಸೆ ಅವರದ್ದು ಹಾಗಾಗಿಯೇ ಸಂಸತ್ ಭವನವನ್ನು ಅವರು ಶೂಟಿಂಗ್ ಮಾಡಲು ಕೇಳಿದ್ದಾರೆ. ಮತ್ತು ತಾವು ಯಾವೆಲ್ಲ ಭಾಗದಲ್ಲಿ ಚಿತ್ರೀಕರಣ ಮಾಡುವ ಪ್ಲ್ಯಾನ್ ಹೊಂದಲಾಗಿದೆ ಎನ್ನುವ ವಿವರವನ್ನೂ ಅವರು ಕೇಳುಹಿಸಿದ್ದಾರಂತೆ.
ನಿಯಮಗಳ ಪ್ರಕಾರ ಸರಕಾರಿ ಸ್ವಾಮ್ಯದ ಟಿವಿಗಳ ಕ್ಯಾಮೆರಾಗಳನ್ನು ಮಾತ್ರ ಒಳಗೆ ಬಿಡಲಾಗುತ್ತದೆ. ಅಲ್ಲದೇ, ಶೂಟಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ. ಈ ವೇಳೆಯಲ್ಲಿ ಕಂಗನಾ ಬೇಡಿಕೆಯನ್ನು ಸರಕಾರ ನಿರಾಕರಿಸುವ ಸಾಧ್ಯತೆಯೇ ಹೆಚ್ಚಿದೆ. ಬಿಜೆಪಿ ಪರ ಮತ್ತು ಮೋದಿ ಪರ ಕಂಗನಾ ಹಲವಾರು ಬಾರಿ ಮಾತನಾಡಿದ್ದಾರೆ. ಹಾಗಾಗಿ ಕಂಗನಾಗಾಗಿ ನಿಯಮ ಬದಲಿಸಿ, ಅನುಮತಿ ಕೊಡಲಾಗುತ್ತಾ ಎನ್ನುವ ಚರ್ಚೆ ಕೂಡ ನಡೆದಿದೆ. ಈವರೆಗೂ ಸಂಸತ್ ಒಳಗೆ ಸಿನಿಮಾಗಾಗಿ ಶೂಟಿಂಗ್ ಮಾಡಲು ಅನುಮತಿ ಕೊಟ್ಟಿಲ್ಲವಾದ್ದರಿಂದ ಕಂಗನಾ ಆಸೆ ನಿರಾಸೆ ಆಗುವ ಸಾಧ್ಯತೆಯೇ ಹೆಚ್ಚಾಗಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?