ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬಸ್ ಮೇಲೆಯೇ ರಸ್ತೆ ಬದಿಯ ಮರವೊಂದು ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗುಂಡ್ಯ ರಸ್ತೆಯ ಅನಿಲ ಎಂಬಲ್ಲಿ ಜೂ.12 ರಂದು ನಡೆದಿದೆ. ಸುಬ್ರಹ್ಮಣ್ಯ ದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸರ್ಕಾರಿ ಬಸ್ ನ ಮೇಲೆ ಮರ ಬಿದ್ದಿದ್ದು ಅದೃಷ್ಟವಶಾತ್ ಪ್ರಯಾಣಿಕರು ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ.
ಈಗಾಗಲೇ ವಿಪರಿತ ಮಳೆಯೂ ಸುರಿಯುತ್ತಿದ್ದು ಈ ಮಳೆಗೆ ಅಪಾಯಕಾರಿಯಾಗಿರುವ ಮರಗಳು ಉರುಳಿದೆ ಎಂದು ಹೇಳಲಾಗುತ್ತಿದೆ.ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ:ಈ ರಸ್ತೆಯಲ್ಲಿ ಆಗಾಗ ರಸ್ತೆ ಬದಿಯ ಮರಗಳು ಬೀಳುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಳ್ಳಲಿಲ್ಲ, ಈಗಾಗಲೇ ಅಪಾಯಕಾರಿ ಮರಗಳೆಂದು ಗುರುತಿಸಿದ್ದರೂ ಅಂತಹ ಮರಗಳನ್ನು ತೆರವುಗೊಳಿಸಲು ಕಾನೂನಿನ ಕುಂಟು ನೆಪ ಹೇಳುತ್ತಿರುವ ಅರಣ್ಯ ಇಲಾಖಾ ಅಧಿಕಾರಿಗಳು ಅಪಾಯ ಸಂಭವಿಸಿದಾಗ ಸ್ಥಳಕ್ಕೆ ಭೇಟಿ ನೀಡುವ ಕೆಲಸ ಮಾತ್ರ ಮಾಡುತ್ತಾರೆ.
ಇನ್ನಾದರೂ ರಸ್ತೆ ಬದಿಯ ಮರ ತೆರವುಗೊಳಿಸುವಲ್ಲಿ ಅರಣ್ಯ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?