ಜೈಪುರ: ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಸರಾಯ್ ಮೊಹಲ್ಲಾದಲ್ಲಿ 300 ವರ್ಷ ಪ್ರಾಚೀನ ಶಿವನ ದೇವಾಲಯವನ್ನು (Shiva Temple) ಕೆಡವಲಾಗಿದೆ. ಈ ಘಟನೆಯ ವಿಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕ ಅಮಿತ್ ಮಾಳವಿಯಾ (Amit Malviya) ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರೌಲಿ ಮತ್ತು ಜಹಾಂಗೀರಪುರಿಯಲ್ಲಿ ಕಣ್ಣೀರು ಸುರಿಸಿ ಹಿಂದೂಗಳ ನಂಬಿಕೆಗೆ ಧಕ್ಕೆ ತರುತ್ತಿರುವುದು ಕಾಂಗ್ರೆಸ್ನ ಜಾತ್ಯತೀತತೆಯಾಗಿದೆ ಎಂದು ಕಿಡಿ ಕಾರಿದ್ದಾರೆ. ನಗರ ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿ (ಇಒ), ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಮತ್ತು ಪುರಸಭೆಯ ರಾಜಗಢ ಶಾಸಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ದೂರು ದಾಖಲಿಸಲಾಗಿದೆ.
ಈ ಘಟನೆಯ ಬಗ್ಗೆ ಟ್ವೀಟ್ನಲ್ಲಿ ಟೀಕಿಸಿರುವ ಅಮಿತ್ ಮಾಳವಿಯಾ, ಏಪ್ರಿಲ್ 18ರಂದು ಯಾವುದೇ ಸೂಚನೆ ನೀಡದೆ, ಆಡಳಿತವು ರಾಜಸ್ಥಾನದ ರಾಜ್ಗಢ ಪಟ್ಟಣದಲ್ಲಿ 85 ಹಿಂದೂಗಳ ಮನೆಗಳು ಮತ್ತು ಅಂಗಡಿಗಳನ್ನು ಜೆಸಿಬಿಯಿಂದ ಧ್ವಂಸ ಮಾಡಿದೆ ಎಂದು ಆರೋಪಿಸಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?