ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ :ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ!

Twitter
Facebook
LinkedIn
WhatsApp
NALIN KUMAR KATEEL 1 1200x900 1

ಮಂಗಳೂರು: ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ದ್ವೇಷದ ರಾಜಕಾರಣವನ್ನು ವಿರೋಧಿಸಿ ಪ್ರತಿಭಟಿಸುತ್ತೇವೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ‘ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ನ್ನೂ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲ, ಈ ಬಗ್ಗೆ ಕೂಡ ದುಃಖ ಇದೆ ಎಂದಿದ್ದಾರೆ.

ಮಂಗಳೂರಿನಲ್ಲಿ ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ‘ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಮಾಡುವ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲಿದೆ. ಐದು ಉಚಿತ ಯೋಜನೆಗಳನ್ನು 20 ದಿನಗಳಾದರೂ ಹಂಚಿಕೆ ಮಾಡಿಲ್ಲ. ಸರ್ಕಾರಿ ನೌಕರರು ಏಟು ತಿನ್ನುವ ಪರಿಸ್ಥಿತಿ ಬಂದಿದೆ. ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದವರಿಗೆ ಏಟು ಬೀಳುತ್ತಿದೆ. ಕಾಂಗ್ರೆಸ್ ವಿಜಯೋತ್ಸವದಲ್ಲೇ ಗಲಭೆ ಮಾಡಿದ್ದು, ದ್ವೇಷದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ಮಾಡಲಾಗಿದೆ. ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರ ಮೇಲೂ ಕೇಸ್ ಹಾಕಲಾಗಿದೆ. ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿಯನ್ನು ಕಟ್ಟಿಹಾಕುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಬಿಟ್ಟು ಹಲ್ಲೆ ಹತ್ಯೆ ಮಾಡುತ್ತಿದೆ. ಕಾಂಗ್ರೆಸ್ ನಲ್ಲಿ ತಾಕತ್ ಇದ್ರೆ, ಪಾಕ್ ಪರ ಜೈಕಾರ ಕೂಗಿದವರನ್ನು ಬಂಧಿಸಲಿ. ಪ್ರವೀಣ್ ನೆಟ್ಟಾರ್ ಪತ್ನಿಗೆ ನೀಡಿದ್ದ ಉದ್ಯೋಗ ವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ಅನುಕಂಪದ ಆಧಾರದ ಮೇಲೆ ಮತ್ತೆ ಉದ್ಯೋಗ ನೀಡಿ ಎಂದು ಸಿಎಂ ಸಿದ್ಧರಾಮಯ್ಯಗೆ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದು, ನೀವು ಉದ್ಯೋಗ ನೀಡದಿದ್ದರೂ ಕೇಂದ್ರದ ಎನ್ಎಂಪಿಟಿಯಲ್ಲಿ ಉದ್ಯೋಗ ನೀಡುತ್ತೇವೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist