ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಹೋದರರು, ಭಾವನ ಜತೆ ಸೇರಿ ಸ್ಕೆಚ್‌ ಹಾಕಿ ಪತಿಯನ್ನೇ ಹತೈಗೈದ ಪತ್ನಿ!

Twitter
Facebook
LinkedIn
WhatsApp
ಸಹೋದರರು, ಭಾವನ ಜತೆ ಸೇರಿ ಸ್ಕೆಚ್‌ ಹಾಕಿ ಪತಿಯನ್ನೇ ಹತೈಗೈದ ಪತ್ನಿ!

ಮೈಸೂರು: ಮನೆಯ ಬಳಿ ಬಂದ ಪತಿಯನ್ನು ಆತನ ಪತ್ನಿಯೇ ತನ್ನ ಸಹೋದರರು ಮತ್ತು ಭಾವನೊಂದಿಗೆ ಸೇರಿಕೊಂಡು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಭಾನುವಾರ ತಡರಾತ್ರಿ ಕೂರ್ಗಳ್ಳಿಯಲ್ಲಿ ನಡೆದಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಂಜನಗೂಡು ತಾಲ್ಲೂಕಿನ ಇಬ್ಜಾಲ ಗ್ರಾಮದ ಕೆಂಪಶೆಟ್ಟಿ (35) ಎಂಬವರೇ ಕೊಲೆಯಾದವರು. ಇವರ ಪತ್ನಿ ಶಶಿಕಲಾ, ಕೆಂಡಶೆಟ್ಟಿ, ನಾಗೇಂದ್ರ (ಶಶಿ ಸಹೋದರರು), ರಮೇಶ್ (ಶಶಿ ಭಾವ) ಎಂಬವರೇ ಆರೋಪಿಗಳು. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿರುವ ವಿಜಯನಗರ ಠಾಣೆ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ತಲೆಮ ರೆಸಿಕೊಂಡಿರುವ ನಾಗೇಂದ್ರ ಎಂಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

12 ವರ್ಷಗಳ ಹಿಂದೆ ಎಚ್.ಡಿ.ಕೋಟೆ ತಾಲ್ಲೂಕಿನ ಹೊಳೆಹುಂಡಿ ಗ್ರಾಮದ ಶಶಿಕಲಾ ಅವರನ್ನು ಕೆಂಪಶೆಟ್ಟಿ ಅವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮದುವೆಯಾದ ನಂತರ ತನ್ನ ಹೆಂಡತಿಯ ಊರಿನಲ್ಲಿಯೇ ಇದ್ದ ಈತ, 3 ವರ್ಷಗಳಿಂದ ತನ್ನ ಸಂಸಾರದೊಂದಿಗೆ ಮೈಸೂರಿನ ಕೂರ್ಗಳ್ಳಿಯಲ್ಲಿ ವಾಸವಿದ್ದು, ಕೂಲಿ ಕೆಲಸಕ್ಕೆ ಹೋಗುತ್ತಿದ್ದ. ಶಶಿಕಲಾ ಕೂಡ ಗಾರ್ಮೆಂಟ್ಸ್‌ವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದರು.
ಹೀಗಿರುವಾಗ ಕೆಂಪಶೆಟ್ಟಿಗೆ ತನ್ನ ಪತ್ನಿ ಶಶಿಕಲಾ ನಡತೆ ಮೇಲೆ ಅನುಮಾನ ಬಂದಿದ್ದು, ಈ ವಿಚಾರದಲ್ಲಿ ಆಗಾಗ ಇಬ್ಬರ ನಡುವೆ ಜಗಳವಾಗುತ್ತಿತ್ತು. ಇದೇ ಕಾರಣಕ್ಕೆ 2017 ಮೇ ತಿಂಗಳಿನಲ್ಲಿ ಶಶಿಕಲಾ ಹೊಳೆಹುಂಡಿಯ ತನ್ನ ತಾಯಿಯ ಮನೆಯಲ್ಲಿದ್ದಾಗ ಈತ ಮನೆಗೆ ಬೆಂಕಿ ಹಾಕಿಯೂ ಬಂದಿದ್ದ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದಾದ ಮೇಲೂ ಗೋಪಾಲಪುರದಲ್ಲಿ ಮತ್ತೊಮ್ಮೆ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಮೂರು ತಿಂಗಳ ಜೈಲುವಾಸವನ್ನು ಅನುಭವಿಸಿ ಜಾಮೀನನ ಮೇಲೆ ಹೊರ ಬಂದಿದ್ದ. ನಂತರ ಹೆಂಡತಿಯಿಂದ ಪ್ರತ್ಯೇಕವಾಗಿದ್ದರೂ, ಆಗಾಗ ಮನೆಯ ಬಳಿ ಹೋಗಿ ಗಲಾಟೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಶಶಿಕಲಾ, ಕೆಂಡಶೆಟ್ಟಿ, ನಾಗೇಂದ್ರ, ರಮೇಶ್ ಅವರು ಕೆಂಪಶೆಟ್ಟಿಯನ್ನು ಹತ್ಯೆ ಮಾಡಲು ಯೋಜನೆ ಹಾಕಿದ್ದರು.
ಕೆಂಪಶೆಟ್ಟಿಯೂ ಭಾನುವಾರ ರಾತ್ರಿ ಇಬ್ಜಾಲದಿಂದ ಬೈಕ್‌ನಲ್ಲಿ ಕೂರ್ಗಳ್ಳಿಯ ಶಶಿಕಲಾ ಮನೆಗೆ ಬಂದಿದ್ದು, ಅಲ್ಲಿಯೇ ತಡರಾತ್ರಿ ಈತನನ್ನು ನಾಲ್ವರು ಸೇರಿಕೊಂಡು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಕೆಂಪಶೆಟ್ಟಿಯ ಎಡಪಕ್ಕೆಗೆ, ಎದೆ ಭಾಗಕ್ಕೆ, ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ಗಲಾಟೆ ಕೇಳಿ ಬಂದ ಸಾರ್ವಜನಿಕರು ಆಂಬ್ಯುಲೆನ್ಸ್ ಕರೆಸಿ, ಕೆಂಪಶೆಟ್ಟಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಡಿಸಿಪಿ ಪ್ರದೀಪ್ ಗುಂಟಿ, ಎನ್.ಆರ್.ವಿಭಾಗದ ಎಸಿಪಿ ಶಿವಶಂಕರ್, ವಿಜಯನಗರ ಇನ್‌ಸ್ಪೆಕ್ಟರ್ ಬಾಲಕೃಷ್ಣ ಮತ್ತು ಇತರೆ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು