ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಮಾಜಿಕ ಅಂತರ, ಸ್ವಚ್ಛತೆ, ಲಸಿಕೆಯ ಮೂಲಕ ಕರೋನವನ್ನು ಹೊಡೆದೋಡಿಸಬಹುದು: ವೇದವ್ಯಾಸ್ ಕಾಮತ್

Twitter
Facebook
LinkedIn
WhatsApp
ಸಾಮಾಜಿಕ ಅಂತರ, ಸ್ವಚ್ಛತೆ, ಲಸಿಕೆಯ ಮೂಲಕ ಕರೋನವನ್ನು ಹೊಡೆದೋಡಿಸಬಹುದು: ವೇದವ್ಯಾಸ್ ಕಾಮತ್

ಕೋವಿಡ್ ಸೋಂಕಿನಿಂದ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಾಮಾಜಿಕ ಅಂತರ, ಸ್ವಚ್ಛತೆ ಹಾಗೂ ಲಸಿಕೆ ಪಡೆಯುವ ಮೂಲಕ ರಕ್ಷಣೆ ಪಡೆಯಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು.

ಸಂಘ ನಿಕೇತನದಲ್ಲಿ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ವತಿಯಿಂದ ನಡೆದ ಮೊದಲ‌ ಹಂತದ ಉಚಿತ ಲಸಿಕೆ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಕಾಮತ್, ಅನೇಕ ಸೇವಾ ಸಂಸ್ಥೆಗಳು ಕೋವಿಡ್‌ ಸಂದರ್ಭದಲ್ಲಿ ಜನರಿಗೆ ಉಪಯುಕ್ತವಾಗುವ‌ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಸಾಮಾಜಿಕ ಜವಬ್ದಾರಿಯನ್ನು ನಿಭಾಯಿಸಿದೆ. ಆಹಾರ ವಿತರಣೆ, ಮಾಸ್ಕ್, ಸ್ಯಾನಿಟೈಸರ್ ವಿತರಣೆ, ಔಷಧಿಗಳ ವಿತರಣೆ ಸೇರಿದಂತೆ ಜನರಿಗೆ ಸಹಕಾರಿಯಾಗುವ ಕೆಲಸದಲ್ಲಿ ಸೇವಾ‌ ಸಂಸ್ಥೆಗಳು ತೊಡಗಿಸಿಕೊಂಡಿವೆ. ಆ ಸಾಲಿನಲ್ಲಿ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಕೆಲಸ ಶ್ಲಾಘನೀಯ ಎಂದರು.

ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಕಾರ್ಯದರ್ಶಿಗಳಾದ ರಘುವೀರ್ ಕಾಮತ್ ಮಾತನಾಡಿ, ಸಾಮಾಜಿಕ ಕಳಕಳಿಯುಳ್ಳ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಸದಸ್ಯರು ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತ ಲಸಿಕೆ ವಿತರಿಸುವ ಮೂಲಕ ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ. ಅವರ ಕಾರ್ಯಕ್ಕೆ ಯಶಸ್ಸು ದಕ್ಕಲಿ ಎಂದು ಹಾರೈಸಿದರು.

ಬಳಿಕ ಮಾತನಾಡಿದ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಅಧ್ಯಕ್ಷರಾದ ವರುಣ್ ರಾಜ್ ಅಂಬಟ್, ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಒದಗಿಸುವ ನಿಟ್ಟಿನಲ್ಲಿ ಹೆಲ್ಪಿಂಗ್ ಹ್ಯಾಂಡ್ಸ್ ಫೌಂಡೇಶನ್ ಸ್ಥಾಪಿಸಲಾಗಿತ್ತು. ಇಂದು ಸದಸ್ಯರ ಸಂಖ್ಯೆಯಲ್ಲಿಯೂ ಕೂಡ ಹೆಚ್ಚಳವಾಗಿದೆ. ಈ ಬಾರಿಯ ಲಾಕ್ ಡೌನ್ ಸಂದರ್ಭದಲ್ಲಿ ಜನರಿಗೆ ಊಟದ‌ ವ್ಯವಸ್ಥೆ ಸೇರಿದಂತೆ ಅನೇಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇವೆ. ಆ ನಿಟ್ಟಿನಲ್ಲಿ ಕೋವಿಡ್ ಲಸಿಕೆ ಖರೀದಿಸಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತವಾಗಿ ಹಂಚಲು ತೀರ್ಮಾನಿಸಲಾಗಿತ್ತು. ಇಂದು 210 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಸ್ಥಳೀಯ ಮನಪಾ ಸದಸ್ಯರಾದ ಸಂಧ್ಯಾ ಮೋಹನ್ ಆಚಾರ್, ಅಡ್ವಕೇಟ್ ರಂಜಿನಿ ಕಾಮತ್ ಹಾಗೂ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು