![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಮೈಸೂರು: ಜೀಪ್ ತೆಗೆದುಕೊಳ್ಳಲು ಸಹಕಾರ ಸಂಘದಿಂದ ಸಾಲ ಕೊಡಿಸಿ ಸಾಲದ ಕಂತು ಕಟ್ಟಲು ಹೇಳಿದ ತಾಯಿಯನ್ನು ಮಗ ಜೀಪ್ ಹರಿಸಿ ಕೊಂದಿರುವ ಘಟನೆ ಮೈಸೂರು ಜಿಲ್ಲೆ ಬೆಟ್ಟದಪುರ ಹೋಬಳಿಯ ಸೂಳೆಕೋಟೆ ಗ್ರಾಮದಲ್ಲಿ ನಡೆದಿದೆ.
ನಾಗಮ್ಮ ಮೃತ ದುರ್ದೈವಿ ಹಾಗೂ ಆರೋಪಿಯನ್ನು ಹೇಮರಾಜ್ ಎಂದು ಗುರುತಿಸಲಾಗಿದೆ
ಮಗನಿಗೆ ಜೀಪ್ ತೆಗೆದುಕೊಳ್ಳಲು ಆಕೆ ಸಹಕಾರ ಸಂಘದಿಂದ 70 ಸಾವಿರ ಸಾಲ ಪಡೆದುಕೊಂಡಿದ್ದರು, ಆದರೆ ಸಾಲದ ಹಣ ವಾಪಸ್ ಮಾಡದೇ ಇದ್ದಾಗ ಸಂಘದ ಇತರ ಸದಸ್ಯರು ನಾಗಮ್ಮನನ್ನು ಒತ್ತಾಯಿಸಿದ್ದಾರೆ. ಇದರಿಂದ ತಾಯಿ ಮಗನ ಬಳಿ ಸಾಲದ ಹಣ ಕಟ್ಟುವಂತೆ ತಿಳಿಸಿದ್ದು, ಇದರಿಂದ ಕೋಪಗೊಂಡ ಹೇಮರಾಜ್ ಬೆಳಗ್ಗೆ ಆಕೆಯೊಂದಿಗೆ ವಾಗ್ದಾದ ನಡೆಸಿದ್ದಾನೆ.
ಆಕೆ ಸಂಘಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದಾಗ ಮಗ ತಾಯಿಯ ಮೇಲೆ ವಾಹನ ಚಲಾಯಿಸಿದ್ದಾನೆ. ಕೂಡಲೇ ಗ್ರಾಮಸ್ಥರು ನಾಗಮ್ಮನನ್ನು ಆಸ್ಪತ್ರಗೆ ಕರೆದುಕೊಂಡು ಹೋದರು ಪ್ರಯೋಜನವಾಗಲಿಲ್ಲ, ಅದಾಗಲೇ ಆಕೆ ಉಸಿರು ನಿಲ್ಲಿಸಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಇನ್ನು ಈ ಕುರಿತಂತೆ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist