ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಲದ ಹೊರೆ ತಾಳಲಾರದೆ ಕುಟುಂಬ ಸಹಿತ ಕಾರಿನೊಳಗೆ ಬೆಂಕಿ ಹಚ್ಚಿಕೊಂಡ ಉದ್ಯಮಿ; ಪತ್ನಿ, ಪುತ್ರ ಚಿಂತಾಜನಕ!

Twitter
Facebook
LinkedIn
WhatsApp
ಸಾಲದ ಹೊರೆ ತಾಳಲಾರದೆ ಕುಟುಂಬ ಸಹಿತ ಕಾರಿನೊಳಗೆ ಬೆಂಕಿ ಹಚ್ಚಿಕೊಂಡ ಉದ್ಯಮಿ; ಪತ್ನಿ, ಪುತ್ರ ಚಿಂತಾಜನಕ!

ನಾಗ್ಪುರ್: ಸಾಲದ ಹೊರೆ ತಾಳಲಾರದೆ ಉದ್ಯಮಿ ಹಾಗೂ ತನ್ನ ಕುಟುಂಬದ ಸದಸ್ಯರೊಂದಿಗೆ ಕಾರಿನೊಳಗೆ ಬೆಂಕಿ ಹಚ್ಚಿಕೊಂಡಿರುವ ಘಟನೆ ನಾಗ್ಪುರ್ ನಲ್ಲಿ ನಡೆದಿದೆ. ಘಟನೆಯಲ್ಲಿ ಉದ್ಯಮಿ ಸಾವನ್ನಪ್ಪಿದ್ದು, ಪತ್ನಿ ಮತ್ತು ಮಗ ಬದುಕುಳಿದಿದ್ದು, ತೀವ್ರ ಸುಟ್ಟ ಗಾಯಗಳಿಂದ ಚಿಂತಾಜನಕ ಸ್ಥಿತಿಯಲ್ಲಿರುವುದಾಗಿ ವರದಿ ತಿಳಿಸಿದೆ.ಭೀಕರ ಘಟನೆಯ ವಿಡಿಯೋ ಜನರನ್ನು ಬೆಚ್ಚಿಬೀಳಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿರುವ ದೃಶ್ಯ ದಾಖಲಾಗಿದೆ.ರಾಮ್ ರಾಜ್ ಭಟ್ (58ವರ್ಷ) ಅವರು ಪತ್ನಿ ಮತ್ತು ಮಗನೊಂದಿಗೆ ಊಟದ ನೆಪದಲ್ಲಿ ಹೋಟೆಲ್ ಗೆ ಕರೆದೊಯ್ಯುತ್ತಿದ್ದರು. ಆದರೆ ಹೋಟೆಲ್ ತಲುಪುವ ಮುನ್ನವೇ ಮಾರ್ಗದಲ್ಲಿ ದಿಢೀರನೇ ಕಾರನ್ನು ನಿಲ್ಲಿಸಿ, ತನ್ನ ಹಾಗೂ ಪತ್ನಿ, ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ

ಗಂಭೀರವಾಗಿ ಸುಟ್ಟ ಗಾಯದಿಂದ ರಾಮ್ ರಾಜ್ ಭಟ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಆದರೆ ಪತ್ನಿ ಸಂಗೀತಾ ಭಟ್ (57ವರ್ಷ) ಮತ್ತು ಪುತ್ರ ನಂದನ್ (25ವರ್ಷ) ಕಾರಿನ ಡೋರ್ ತೆಗೆದು ಹೊರಗೆ ಹಾರಿದ್ದರು. ಇಬ್ಬರೂ ತೀವ್ರವಾಗಿ ಸುಟ್ಟು ಹೋಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವುದಾಗಿ ವರದಿ ಹೇಳಿದೆ.
ಸುಟ್ಟು ಹೋದ ಕಾರಿನೊಳಗೆ ಪ್ಲ್ಯಾಸ್ಟಿಕ್ ಬ್ಯಾಗ್ ಸಿಕ್ಕಿದ್ದು, ಅದರಲ್ಲಿರುವ ನೋಟ್ಸ್ ನಲ್ಲಿ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಉಲ್ಲೇಖಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ