ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಲ ಕೊಟ್ಟು ವಸೂಲಿ ಮಾಡಲಾಗದೇ ಬ್ಯಾಂಕ್ ಮ್ಯಾನೇಜರ್ ನೇಣಿಗೆ ಶರಣು

Twitter
Facebook
LinkedIn
WhatsApp
ಸಾಲ ಕೊಟ್ಟು ವಸೂಲಿ ಮಾಡಲಾಗದೇ ಬ್ಯಾಂಕ್ ಮ್ಯಾನೇಜರ್ ನೇಣಿಗೆ ಶರಣು

ಪುದುಚೇರಿ/ಕಾಕಿನಾಡ್: ಇದುವರೆಗೆ ಸಾಲ ಮಾಡಿ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ಕೇಳಿರಬಹುದು. ಆದರೆ ಇಲ್ಲೊಂದು ಕಡೆ ಕೊಟ್ಟ ಸಾಲವನ್ನು ವಾಪಸ್ ಮರು ಪಾವತಿ ಮಾಡಲಾಗದೆ ಬ್ಯಾಂಕ್ ಮ್ಯಾನೇಜರ್ ಓರ್ವರು ನೇಣಿಗೆ ಶರಣಾಗಿದ್ದಾರೆ. ಪುದುಚೇರಿಯಲ್ಲಿ ಈ ಅವಘಡ ಸಂಭವಿಸಿದೆ. ಹೀಗೆ ಸಾವಿಗೆ ಶರಣಾದ ಬ್ಯಾಂಕ್ ಮ್ಯಾನೇಜರ್‌ನನ್ನು ಸಾಯಿರತ್ನ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಇವರು ಆಂಧ್ರಪ್ರದೇಶದ ಕಾಕಿನಾಡು ಜಿಲ್ಲೆಯ ಪಿಥಪುರಂ ಜಿಲ್ಲೆಯ ನಿವಾಸಿ ಎಂದು ಪೊಲೀಸರು ಹೇಳಿದ್ದಾರೆ.

ಶ್ರೀಕಾಂತ್ (Sayiratna Srikanth) ಪುದುಚೇರಿಯ (Puducherry) ಯನಂನಲ್ಲಿ ಯುಕೋ ಬ್ಯಾಂಕ್‌ನ ಶಾಖಾ ಮ್ಯಾನೇಜರ್ (bank manager) ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಿರಿಯ ಅಧಿಕಾರಿಗಳು ನೀಡಿದ ಟಾರ್ಗೆಟ್ ರೀಚ್ ಆಗಲು ಇವರು ಅನೇಕರಿಗೆ ಬ್ಯಾಂಕ್‌ನಿಂದ ಸಾಲ (loans) ನೀಡಿದ್ದರು. ಸಾಲ ನೀಡಿದ ಬಳಿಕ ಸಾಲ ಮರು ಪಾವತಿ ಮಾಡಲು ಜನರಿಗೆ ಕೇಳುವಂತೆ ಮೇಲಾಧಿಕಾರಿಗಳು ಇವರಿಗೆ ಒತ್ತಡ ಹೇರಿದ್ದರು ಎನ್ನಲಾಗಿದೆ.

ಆದರೆ, ಮೇಲಾಧಿಕಾರಿಗಳ ಒತ್ತಡಕ್ಕೆ ಮಣಿದು ಸಾಲ ವಸೂಲಿ (Loan Recovery) ಮಾಡಲು ಸಾಧ್ಯವಾಗದೆ ಇದ್ದಾಗ ತಾವೇ ಸಾಲ ಪಡೆದು ವಸೂಲಾತಿಯನ್ನು ಸ್ವಲ್ಪ ಮಟ್ಟಿಗೆ ಇತ್ಯರ್ಥಪಡಿಸಲು ಯತ್ನಿಸಿದ್ದರು. ಇತ್ತ ಈತ ತೆಗೆದುಕೊಂಡ ವೈಯಕ್ತಿಕ ಸಾಲಗಳ ಬಡ್ಡಿದರವೂ ಗಗನಕ್ಕೇರುತ್ತಿತ್ತು. ಇದರಿಂದ ತನಗೆ ಬರುತ್ತಿದ್ದ ಸಂಬಳದಲ್ಲಿ ಕನಿಷ್ಠ ತನ್ನ ಹಾಗೂ ಕುಟುಂಬದ ಹೊಟ್ಟೆ ತುಂಬಿಸಿಕೊಳ್ಳಲು ಕೂಡ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಹಣಕಾಸಿನ ಅಸಮತೋಲನ ಸಂಪೂರ್ಣ ಬದುಕನ್ನೇ ಅಡಿಮೇಲು ಮಾಡಿತ್ತು. ಇದರೊಂದಿಗೆ ಇತ್ತ ಕೊಟ್ಟ ಸಾಲವೂ ವಾಪಸ್ ಬಾರದೇ ಅತ್ತ ಅಧಿಕಾರಿಗಳ ಒತ್ತಡವೂ ಹೆಚ್ಚಿದ ಹಿನ್ನೆಲೆಯಲ್ಲಿ ಮಾನಸಿಕ ಒತ್ತಡ ತಡೆದುಕೊಳ್ಳಲಾಗದೇ ಶ್ರೀಕಾಂತ್ ಖಿನ್ನತೆಗೆ (depression) ಒಳಗಾಗಿದ್ದರು. ಪರಿಣಾಮ ಪತ್ನಿ ಗಾಯತ್ರಿ ಹಾಗೂ ಪುಟ್ಟ ಮಕ್ಕಳನ್ನು ಬಿಟ್ಟು ನೇಣಿಗೆ ಶರಣಾಗಿದ್ದಾರೆ. ಈ ಪುಟ್ಟ ಕುಟುಂಬ ಯಾನಂನ ಗೋಪಾಲ್‌ ನಗರದಲ್ಲಿ (Gopal Nagar) ನೆಲೆಸಿತ್ತು.

ಈ ಹಿಂದೆ ಶ್ರೀಕಾಂತ್ ಮಚಲಿಪಟ್ಟಣ ಬ್ರಾಂಚ್‌ನ (Machilipatnam branch) ಮ್ಯಾನೇಜರ್ ಆಗಿ ಮೂರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ಆ ಸಮಯದಲ್ಲಿ ಅವರು ತಮ್ಮ ಗ್ರಾಹಕರಿಗೆ ಬ್ಯಾಂಕ್‌ನ ಮೇಲಾಧಿಕಾರಿಗಳ ನಿರ್ದೇಶನದಂತೆ ಸಾಲ ನೀಡಿದ್ದರು ಎನ್ನಲಾಗಿದೆ. ಆದರೆ ಸಾಲ ಪಡೆದವರು ವಾಪಸ್ ಬ್ಯಾಂಕ್‌ಗೆ ಹಿಂದಿರುಗಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ವೈಯಕ್ತಿಕವಾಗಿ ತಮ್ಮ ಹೆಸರಿನಲ್ಲಿ 60 ಲಕ್ಷ ರೂ ಸಾಲ ಮಾಡಿ ಆ ಸಾಲವನ್ನು ಪಾವತಿಸಿದ್ದರು ಎನ್ನಲಾಗಿದೆ. ಇದಾದ ನಂತರ ಅವರು ಯಾನಂ ಬ್ರಾಂಚ್‌ಗೆ ವರ್ಗಾವಣೆಯಾಗಿ ಬಂದಿದ್ದು, ಇಲ್ಲಿಗೆ ಬಂದ ಮೇಲೆ ಅವರಿಗೆ ಅಲ್ಲಿ ಸಾಲ ಮರುಪಾವತಿ ಮಾಡದ ವ್ಯಕ್ತಿ ಇಲ್ಲೂ 37 ಲಕ್ಷ ರೂ ಸಾಲ ಮಾಡಿರುವುದು ತಿಳಿದು ಬಂದಿದೆ. ಇದು ಶ್ರೀಕಾಂತ್‌ಗೆ ಮಾನಸಿಕ ಆಘಾತ ನೀಡಿದೆ.

ಈ ಹಿಂದೆ ಶ್ರೀಕಾಂತ್ ಮಚಲಿಪಟ್ಟಣ ಬ್ರಾಂಚ್‌ನ (Machilipatnam branch) ಮ್ಯಾನೇಜರ್ ಆಗಿ ಮೂರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ಆ ಸಮಯದಲ್ಲಿ ಅವರು ತಮ್ಮ ಗ್ರಾಹಕರಿಗೆ ಬ್ಯಾಂಕ್‌ನ ಮೇಲಾಧಿಕಾರಿಗಳ ನಿರ್ದೇಶನದಂತೆ ಸಾಲ ನೀಡಿದ್ದರು ಎನ್ನಲಾಗಿದೆ. ಆದರೆ ಸಾಲ ಪಡೆದವರು ವಾಪಸ್ ಬ್ಯಾಂಕ್‌ಗೆ ಹಿಂದಿರುಗಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ವೈಯಕ್ತಿಕವಾಗಿ ತಮ್ಮ ಹೆಸರಿನಲ್ಲಿ 60 ಲಕ್ಷ ರೂ ಸಾಲ ಮಾಡಿ ಆ ಸಾಲವನ್ನು ಪಾವತಿಸಿದ್ದರು ಎನ್ನಲಾಗಿದೆ. ಇದಾದ ನಂತರ ಅವರು ಯಾನಂ ಬ್ರಾಂಚ್‌ಗೆ ವರ್ಗಾವಣೆಯಾಗಿ ಬಂದಿದ್ದು, ಇಲ್ಲಿಗೆ ಬಂದ ಮೇಲೆ ಅವರಿಗೆ ಅಲ್ಲಿ ಸಾಲ ಮರುಪಾವತಿ ಮಾಡದ ವ್ಯಕ್ತಿ ಇಲ್ಲೂ 37 ಲಕ್ಷ ರೂ ಸಾಲ ಮಾಡಿರುವುದು ತಿಳಿದು ಬಂದಿದೆ. ಇದು ಶ್ರೀಕಾಂತ್‌ಗೆ ಮಾನಸಿಕ ಆಘಾತ ನೀಡಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ