ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂ ಬದಲಾವಣೆ ಗಾಸಿಪ್ ಗೆ ತೆರೆ : ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ.

Twitter
Facebook
LinkedIn
WhatsApp
ಸಿಎಂ ಬದಲಾವಣೆ ಗಾಸಿಪ್ ಗೆ ತೆರೆ : ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ.

ಬೆಂಗಳೂರು : ರಾಜ್ಯದಲ್ಲಿ ಕೊರೋನಾದಷ್ಟೇ ಚರ್ಚೆಯಾಗ್ತಿರೋ ಇನ್ನೊಂದು ವಿಚಾರ ಸಿಎಂ ಬದಲಾವಣೆ. ಹುಬ್ಬಳ್ಳಿ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬದಲಾವಣೆಗೆ ಅಂತಿಮ ಸ್ಪರ್ಶ‌ನೀಡಿ ಪರ್ಯಾಯ ನಾಯಕರ ಆಯ್ಕೆಯೂ ನಡೆಯಲಿದೆ ಎಂಬಷ್ಟರ ಮಟ್ಟಿಗೆ ಮಹತ್ವ ಪಡೆದುಕೊಂಡಿದ್ದ ಸಿಎಂ ಬದಲಾವಣೆ ಪಟಾಕಿ ಠುಸ್ ಎಂದಿದೆ. ಕಾರ್ಯಕಾರಿಣಿಗೂ ಮುನ್ನವೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಾಯಕತ್ವ  ಬದಲಾವಣೆಯ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ನಾಳೆಯಿಂದ ಎರಡು ದಿನಗಳ ಕಾಲ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ನಡೆಯಲಿದೆ. ಈ ಪಕ್ಷದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕತ್ವ ಬದಲಾಣೆಯ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಸಿಎಂ ಯಾರಾಗಬೇಕೆಂಬುದು ತೀರ್ಮಾನವಾಗಲಿದೆ ಎಂಬ ಮಾತುಗಳು ಬಿಜೆಪಿಯ ಪಡಶಾಲೆಯಲ್ಲೇ ಕೇಳಿಬಂದಿದ್ದವು.

ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಅನಾರೋಗ್ಯದ ವಿಚಾರ ಈ ಊಹಾಪೋಹಗಳಿಗೆ ಮತ್ತಷ್ಟು ಬಲ ತುಂಬಿತ್ತು. ಆದರೆ ಕಾರ್ಯಕಾರಿಣಿ ಅರಂಭಕ್ಕೂ ಮುನ್ನವೇ ಈ ಊಹಾಪೋಹ ಗಳಿಗೆ ತೆರೆ ಬಿದ್ದಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಬೊಮ್ಮಾಯಿಯವರನ್ನು ಮುಕ್ತ ಕಂಠದಿಂದ ಶ್ಲಾಘಿಸುವ ಮೂಲಕ ಸಿಎಂ ಬದಲಾವಣೆಯ ಪ್ರಹಸನಕ್ಕೆ ಅಂತ್ಯ ಹಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ ಬದಲಾವಣೆ ಊಹಾಪೋಹ. ಮುಂದಿನ ಚುನಾವಣೆಯನ್ನು ಬೊಮ್ಮಾಯಿ‌ ನೇತೃತ್ವದಲ್ಲೇ ಎದುರಿಸುತ್ತೇವೆ ಎಂದಿದ್ದಾರೆ. ಸಿಎಂ ಬೊಮ್ಮಾಯಿ ಕಾರ್ಯವೈಖರಿಗೆ ಫುಲ್ ಮಾರ್ಕ್ಸ್‌ನೀಡಿ ಬಹುಪರಾಕ್ ಎಂದ ಅರುಣ ಸಿಂಗ್, ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಿಎಂ ಆಗಿ‌ ಮುಂದುವರೆಯುತ್ತಾರೆ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋಗುತ್ತೇವೆ ಎಂದು ಪುನರುಚ್ಛಿಸಿದ್ದಾರೆ.
ಮಾತ್ರವಲ್ಲ ಯಡಿಯೂರಪ್ಪನವರು ಬದಲಾಗಲ್ಲ ಎಂದು ಬದಲಾಯಿಸಿದ ವಿಚಾರಕ್ಕೆ ಮಾತನಾಡಿದ ಅರುಣ ಸಿಂಗ್, ನಾವಾಗಿ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿಲ್ಲ. ಯಡಿಯೂರಪ್ಪನವರೇ ಯುವಕರಿಗೆ ಸ್ಥಾನ ಹಾಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ತಮ್ಮ ಜವಾಬ್ದಾರಿ ಬಿಟ್ಟು ಕೊಟ್ಟಿದ್ದಾರೆ ಎಂದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು