ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ಲೋಪದ ನಂತರ ಓರ್ವ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 8 ಮಂದಿ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಸ್ವಾಗತಿಸಲು ಗೋರಕ್ ಪುರ ವಿಮಾನ ನಿಲ್ದಾಣಕ್ಕೆ ಯೋಗಿ ಆದಿತ್ಯನಾಥ್ ಶುಕ್ರವಾರ ತೆರಳುತ್ತಿರುವಾಗ ಭದ್ರತೆಯಲ್ಲಿ ಲೋಪ ಉಂಟಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದ್ದು, ಶನಿವಾರ ಎಂಟು ಪೊಲೀಸರನ್ನು ಗೋರಕ್ ಪುರ ಎಸ್ ಎಸ್ ಪಿ ವಿಪಿನ್ ತಾಡಾ ಅಮಾನತು ಮಾಡಿದ್ದಾರೆ.
ಶುಕ್ರವಾರ ಬೆಳಗ್ಗೆ 11-28 ಸುಮಾರಿನಲ್ಲಿ ಜೆ.ಪಿ. ನಡ್ಡಾ ಅವರನ್ನು ಬರಮಾಡಿಕೊಳ್ಳಲು ಸಿಎಂ ಗೋರಕ್ ಪುರ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಕುಶ್ಮಾಹಿ ರಸ್ತೆಯಿಂದ ಅನೇಕ ವಾಹನಗಳು ಸಿಎಂ ಎದುರಿಗೆ ಬಂದಿದ್ದವು. ಈ ಘಟನೆ ಸಂಬಂಧ ತನಿಖೆಗೆ ಆದೇಶಿಸಿದ್ದ ತಾಡಾ, ಲೋಪ ಕಂಡುಬಂದ ಹಿನ್ನೆಲೆಯಲ್ಲಿ 8 ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?