ನವದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮೊದಲ ಆರೋಪಿಯ ಬಂಧನವನ್ನ ಮಂಗಳವಾರ ಖಚಿತಪಡಿಸಿದ್ದಾರೆ. ಆರೋಪಿ ಮನ್ಪ್ರೀತ್ನನ್ನು ಉತ್ತರಾಖಂಡದಲ್ಲಿ ಬಂಧಿಸಲಾಗಿದೆ.
ಪಂಜಾಬ್ ಪೊಲೀಸರು ತನ್ನನ್ನು ನಕಲಿ ಎನ್ಕೌಂಟರ್ ನಲ್ಲಿ ಹತ್ಯೆ ಮಾಡುವ ಸಾಧ್ಯತೆ ಇದೆ ಎಂದಿರುವ ಬಿಷ್ಣೋಯ್, ತನ್ನನ್ನು ಪಂಜಾಬ್ ಪೊಲೀಸರಿಗೆ ಒಪ್ಪಿಸದಂತೆ ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾನೆ. ಹೈಕೋರ್ಟ್ ಇಂದು ಅರ್ಜಿಯ ವಿಚಾರಣೆ ನಡೆಸಲಿದೆ.
ಮೂಸೆವಾಲಾ ಹತ್ಯೆಯ ಹೊಣೆ ಹೊತ್ತಿರುವ ಕೆನಡಾ ಮೂಲದ ದರೋಡೆಕೋರ ಗೋಲ್ಡಿ ಬ್ರಾರ್, ಬಿಷ್ಣೋಯ್ ಅವರ ಆಪ್ತ ಸಹಾಯಕ. ಲಾರೆನ್ಸ್ ಬಿಷ್ಣೋಯ್ ದೆಹಲಿ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ನಾಯಕ. ಸಿಧು ಮೂಸ್ ವಾಲಾ ಹತ್ಯೆಯ ಹಿಂದೆ ಗ್ಯಾಂಗ್ ಪೈಪೋಟಿ ಇದೆ ಎಂದು ಪಂಜಾಬ್ ಪೊಲೀಸರು ಶಂಕಿಸಿದ್ದಾರೆ. ಗೋಲ್ಡಿ ಬ್ರಾರ್, ತಿಹಾರ್ ಜೈಲಿನಲ್ಲಿ ಯಾರೊಂದಿಗೆ ಸಂಪರ್ಕದಲ್ಲಿದ್ದ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.
ದೆಹಲಿ ಪೊಲೀಸರ ವಿಶೇಷ ಸೆಲ್ ನಿನ್ನೆ ತಿಹಾರ್ ಜೈಲಿನಲ್ಲಿ ಬಿಷ್ಣೋಯ್ ಯನ್ನು ವಿಚಾರಣೆ ನಡೆಸಿದ್ದು, ಅಲ್ಲಿ ಅವರನ್ನು ಹೈ-ಸೆಕ್ಯುರಿಟಿ ವಾರ್ಡ್ನಲ್ಲಿ ಇರಿಸಲಾಗಿದೆ. ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡ ಇದೀಗ ಪಂಜಾಬ್ಗೆ ತೆರಳಿದೆ. ಬಿಷ್ಣೋಯ್, ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಅಥವಾ MCOCA ಅಡಿಯಲ್ಲಿ ದೆಹಲಿಯ ತಿಹಾರ್ ಜೈಲು ಸೇರಿದ್ದಾನೆ. ಇಂತಹ ಪ್ರಕರಣದಲ್ಲಿ ಜಾಮೀನು ಸುಲಭವಾಗಿ ಸಿಗುವುದಿಲ್ಲ
ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?