ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಕೇಶ್ ಜೈಲ್ ಸೆಲ್ ಮೇಲೆ ಅಧಿಕಾರಿಗಳು ರೇಡ್! ಒಂದೂವರೆ ಲಕ್ಷದ ಶೂ, 80 ಸಾವಿರ ಬೆಲೆಯ ಜೀನ್ಸ್ ಪ್ಯಾಂಟ್ ಸೀಝ್!

Twitter
Facebook
LinkedIn
WhatsApp
WhatsApp Image 2023 02 23 at 9.04.34 PM

200 ಕೋಟಿ ರೂಪಾಯಿ ವಂಚನೆ ಆರೋಪವನ್ನು ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ಜೈಲ್ ಸೆಲ್ ಮೇಲೆ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಈ ದಾಳಿಯಲ್ಲಿ ಹಲವಾರು ಲಕ್ಷುರಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

1.5 ಲಕ್ಷದ ಚಪ್ಪಲಿ, 80 ಸಾವಿರ ಬೆಲೆ ಬಾಳುವ ಮೂರು ಜೀನ್ಸ್ ಸೇರಿ ಹಲವು ವಸ್ತುಗಳನ್ನು ಸೀಜ್ ಮಾಡಲಾಗಿದೆ. ಇದೀಗ ಮಂಡೋಲಿ ಜೈಲ್ ಸೆಲ್​ನಲ್ಲಿ ನಡೆದ ದಾಳಿಯ ಸಿಸಿಟಿವಿ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು ಎಲ್ಲರೂ ಶೇರ್ ಮಾಡುತ್ತಿದ್ದಾರೆ. ವಿಡಿಯೋದಲ್ಲಿ ಅಧಿಕಾರಿಗಳ ತಂಡ ಹಾಗೂ ಜೈಲು ಪ್ರಾಧಿಕಾರ ಸುಕೇಶ್​ನನ್ನು ಸೆಲ್ ಒಳಗೆ ಕರೆತರುವುದನ್ನು ಕಾಣಬಹುದು. ನಂತರ ಆತ ಕಣ್ಣೊರೆಸುವುದನ್ನು ಕಾಣಬಹುದು. ಈ ರೇಡ್ ನಡೆದಾಗ ಸೆಲ್ ಒಳಗೆ ಸುಕೇಶ್ ಮಾತ್ರ ಇದ್ದ. ಗುರುವಾರ ವೈರಲ್ ಆಗಿರುವ ಈ ವಿಡಿಯೋದಲ್ಲಿ ಸುಕೇಶ್ ಜೋರಾಗಿ ಅಳುವುದನ್ನು ಕೂಡಾ ಕಾಣಬಹುದು.

ಕಾನೂನು ಕಾರ್ಯದರ್ಶಿ ಎಂದು ಹೇಳಿಕೊಂಡು ಮಾಜಿ ರೆಲಿಗೇರ್ ಪ್ರವರ್ತಕ ಮಲ್ವಿಂದರ್ ಸಿಂಗ್ ಅವರ ಪತ್ನಿಯನ್ನು ಸುಕೇಶ್ ವಂಚಿಸಿದ್ದ. ಹಣ ವರ್ಗಾವಣೆ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಅವರನ್ನು ಫೆಬ್ರವರಿ 16 ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.ಫೆಡರಲ್ ತನಿಖಾ ಸಂಸ್ಥೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದರ್ ಮಲಿಕ್ ಅವರಲ್ಲಿ ಆರೋಪಿಯನ್ನು 14 ದಿನಗಳ ಕಸ್ಟಡಿಗೆ ಕೋರಿತ್ತು. ಚಂದ್ರಶೇಖರ್ ಅವರನ್ನು ಇಡಿ ಬಂಧಿಸಿರುವ ಮೂರನೇ ಅಕ್ರಮ ಹಣ ವರ್ಗಾವಣೆ ಪ್ರಕರಣ ಇದಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ