ಸುಬ್ರಹ್ಮಣ್ಯ: ನಾಪತ್ತೆಯಾಗಿರುವ ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯೆ ಭಾರತಿ ಮೂಕಮಲೆ ಅವರ ನಾಪತ್ತೆ ಪ್ರಕರಣಕ್ಕೆ ತಿರುವು ದೊರೆತಿದೆ.
ನನ್ನನ್ನು ಯಾರೂ ಅಪಹರಿಸಿಲ್ಲ ನಾನು ಸ್ವ ಇಚ್ಛೆಯಿಂದ ಹೋಗಿದ್ದೇನೆ ಎದು ಭಾರತಿ ಹೇಳಿರುವ ವೀಡಿಯೋ ಇದೀಗ ವೈರಲ್ ಆಗಿದೆ.
ನಾನು ನಾನಾಗಿಯೇ ಬಂದಿದ್ದೇನೆ. ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಸ್ನೇಹಿತನನ್ನು ಮನೆಯ ಹತ್ತಿರ ಬರಲಿಕ್ಕೆ ಹೇಳಿದ್ದೆ. ಅವರು ನನ್ನನ್ನು ಕರೆದುಕೊಂಡು ಹೋಗಿದ್ದಾರೆ. 5 ವರ್ಷದಿಂದ ನಾನು ಲವ್ ಮಾಡ್ತಾ ಇದ್ದೆ. ನಮಗೆ ತೊಂದರೆ ಕೊಡಬೇಡಿ. ಹಾಗೇನಾದ್ರೂ ಮಾಡಿದ್ರೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಭಾರತಿ ಅವರು ವೀಡಿಯೋದಲ್ಲಿ ಮಾತನಾಡುವುದು ದಾಖಲಾಗಿದೆ.
ಭಾರತಿ ಅವರು ಅ. 29ರಂದು ಕಾಣೆಯಾಗಿರುವುದಾಗಿ ಪ್ರಕರಣ ದಾಖಲಾಗಿತ್ತು. ಭಾರತಿ ಅವರನ್ನು ಅಪಹರಣ ಮಾಡಲಾಗಿದೆ ಎಂಬ ಮಾತು ಕೇಳಿಬಂದಿತ್ತು. ಇದೀಗ ಎಲ್ಲ ಗೊಂದಲಗಳಿಗೆ ಒಂದು ಹಂತದ ತೆರೆ ಬಿದ್ದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?