ಫ್ಯಾನ್ಸಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವತಿಗೆ ಸಮೀಪದ ಹೊಟೇಲ್ ನಲ್ಲಿ ಕೆಲಸ ಮಾಡುವ ಯುವಕ ಫೋನ್ ನಂಬರ್ ಕೇಳಿ ಮೊಬೈಲ್ ಕಿತ್ತು ಅಸಭ್ಯವಾಗಿ ವರ್ತಿಸಿದ್ದಾನೆಂದು ಆರೋಪಿಸಿ ಆತನಿಗೆ ಧರ್ಮದೇಟು ನೀಡಿದ ಘಟನೆ ಮೇ 25 ರಂದು ಸುಳ್ಯ ದ ಹಳೇ ಗೇಟು ಎಂಬಲ್ಲಿ ನಡೆದಿದೆ.
ಹಳೆಗೇಟಿನ ಹೋಟೆಲೊಂದರಲ್ಲಿ ಕೆಲಸ ಮಾಡುವ ಪಳ್ಳಂಗೋಡು ಮೂಲದ ಯುವಕ ಏಟು ತಿಂದ ಆಸಾಮಿ. ಯುವತಿಯ ಪೋಷಕರು ಹಾಗೂ ಸ್ಥಳೀಯರು ಆತನಿಗೆ ಥಳಿಸಿದವರು.
ಈ ಬಗ್ಗೆ ಎರಡು ಕಡೆಯಿಂದ ಯಾವುದೇ ದೂರು ಬಾರದ ಹಿನ್ನಲೆಯಲ್ಲಿ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ.
ಅಂಗಡಿಯಲ್ಲಿ ಒಬ್ಬಳೆ ಇದ್ದ ವೇಳೆ ಖರೀದಿಯ ನೆಪದಲ್ಲಿ ಅಲ್ಲಿಗೆ ಬಂದ ಯುವಕ ಯುವತಿಯ ಫೋನ್ ನಂಬರ್ ಕೇಳಿದನೆನ್ನಲಾಗಿದೆ. ಈ ಸಂದರ್ಭ ಯುವತಿ ನಂಬರ್ ನೀಡಲು ನಿರಾಕರಿಸಿದ್ದಾರೆ. ಈ ವೇಳೆ ಆತ ಯುವತಿಯ ಕೈಯಿಂದ ಮೊಬೈಲ್ ಫೋನ್ ಕಿತ್ತುಕೊಂಡು ಅದರಿಂದ ತನ್ನ ಮೊಬೈಲಿಗೆ ಫೋನ್ ಮಾಡುವ ಸಂದರ್ಭ ಯುವತಿ ಮೊಬೈಲ್ ಎಳೆದುಕೊಂಡು ಸ್ಥಳೀಯರನ್ನು ಕರೆದಿದ್ದಾಳೆ ಎನ್ನಲಾಗಿದೆ. ಭಯಗೊಂಡ ಯುವಕ ಅಲ್ಲಿಂದ ಪರಾರಿಯಾಗಿದ್ದಾನೆ.
ನಂತರ ಯುವತಿ ಅವರ ಮನೆಯವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದ್ದು, ಯುವತಿಯ ಪೋಷಕರು ಮತ್ತು ಸ್ಥಳೀಯ ಯುವಕರು ಹೋಟೆಲ್ ಬಳಿಗೆ ತೆರಳಿ ಯುವಕನನ್ನು ಅಂಗಡಿಯಿಂದ ಹೊರಕ್ಕೆ ಕರೆದು ಧರ್ಮದೇಟು ನೀಡಿದರೆನ್ನಲಾಗಿದೆ. ಬಳಿಕ ಬಂದ ಹೋಟೆಲ್ ಮಾಲಕರು ಆ ಯುವಕನಿಗೆ ಒಂದೇಟು ಹೊಡೆದು ಆತನನ್ನು ಕೆಲಸದಿಂದ ವಜಾಗೊಳಿಸಿ ಕಳುಹಿಸಿರುವುದಾಗಿ ತಿಳಿದುಬಂದಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?