ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೂರ್ಯಕುಮಾರ್ ಸ್ಫೋಟಕ ಬ್ಯಾಟಿಂಗ್; ಟಿ20 ಸರಣಿ ವಶಪಡಿಸಿದ ಭಾರತ

Twitter
Facebook
LinkedIn
WhatsApp

ಹೈದರಾಬಾದ್‌ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಸರಣಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾಗೆದ್ದು 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ವಿರಾಟ್ ಕೊಹ್ಲಿ  ಮತ್ತು ಸೂರ್ಯಕುಮಾರ್ ಯಾದವ್ ಭಾರತ ತಂಡದ ಗೆಲುವಿನಲ್ಲಿ ಬ್ಯಾಟ್‌ನೊಂದಿಗೆ ಪ್ರಮುಖ ಪಾತ್ರ ವಹಿಸಿದರು. 

ಇದಕ್ಕೂ ಮುನ್ನ ಅಕ್ಷರ್ ಪಟೇಲ್ ತಮ್ಮ ಮಹತ್ವದ ಜವಾಬ್ದಾರಿಯನ್ನು ಚೆಂಡಿನ ಮೂಲಕ ನಿಭಾಯಿಸಿದ್ದರು. ಈ ಮೊದಲು ಭಾರತ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಆಸ್ಟ್ರೇಲಿಯಾ ನಿಗದಿತ ಓವರ್‌ನಲ್ಲಿ 7 ವಿಕೆಟ್‌ಗೆ 186 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ ಕೊನೆಯ ಓವರ್‌ನಲ್ಲಿ ಗೆಲುವಿನ ಗುರಿ ಸಾಧಿಸಿತು. ಹಾರ್ದಿಕ್ ಪಾಂಡ್ಯ ಅಂತಿಮವಾಗಿ ಗೆಲುವಿನ ಬೌಂಡರಿ ಬಾರಿಸಿ ಭಾರತಕ್ಕೆ 6 ವಿಕೆಟ್‌ಗಳ ಜಯ ತಂದುಕೊಟ್ಟರು.

ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಜೊತೆಯಾಟ ಟಾರ್ಗೆಟ್ ಚೇಸ್‌ಗ ನೆರವಾಯಿತು. ಕೊಹ್ಲಿ ಹಾಗೂ ಯಾದವ್ ಸ್ಫೋಟಕ ಬ್ಯಾಟಿಂಗ್ ಮೂಲಕ ಆಸ್ಟ್ರೇಲಿಯಾ ತಲೆನೋವು ಹಚ್ಚಿಸಿದರು. ಸೂರ್ಯಕುಮಾರ್ ಯಾದವ್ ಹಾಫ್ ಸೆಂಚುರಿ ಸಿಡಿಸಿ ಅಬ್ಬರಿಸಿದರು. ಸೂರ್ಯಕುಮಾರ್ ಯಾದವ್ 36 ಎಸೆತದಲ್ಲಿ 5 ಬೌಂಡರಿ ಹಾಗೂ  5 ಸಿಕ್ಸರ್ ಮೂಲಕ 69 ರನ್ ಸಿಡಿಸಿ ಔಟಾದರು. ಈ ಮೂಲಕ 104ರನ್‌ಗಳ ಜೊತೆಯಾಟಕ್ಕೆ ಬ್ರೇಕ್ ಬಿದ್ದಿತು.

ಸೂರ್ಯಕುಮಾರ್ ಸ್ಫೋಟಕ ಬ್ಯಾಟಿಂಗ್; ಟಿ20 ಸರಣಿ ವಶಪಡಿಸಿದ ಭಾರತ

ವಿರಾಟ್ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಹಾರ್ದಿಕ್ ಪಾಂಡ್ಯ ಜೊತೆ ಸೇರಿ ಕೊಹ್ಲಿ ಎಚ್ಚರಿಕೆಂದ ಬ್ಯಾಟ್ ಬೀಸಿದರು.ಕೊಹ್ಲಿ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. ಇದರೊಂದಿಗೆ ಟೀಂ ಇಂಡಿಯಾ ಗೆಲುವಿಗೆ ಅಂತಿಮ 18 ಎಸೆತದಲ್ಲಿ 32 ರನ್ ಅವಶ್ಯಕತೆ ಇತ್ತು. 18ನೇ ಓವರ್‌ನಲ್ಲಿ ಭಾರತ 11 ರನ್ ಸಿಡಿಸಿತು. 19ನೇ ಓವರ್‌ನಲ್ಲಿ ಹಾರ್ದಿಕ್ ಪಾಂಡ್ಯ ಸಿಕ್ಸರ್ ನೆರವಿನಿಂದ ಒಟ್ಟು 10 ರನ್ ಸಿಡಿಸಿತು. ಹೀಗಾಗಿ ಅಂತಿಮ 6 ಎಸೆತದಲ್ಲಿ ಭಾರತದ ಗೆಲುವಿಗೆ 11 ರನ್ ಅವಶ್ಯಕತೆ ಇತ್ತು. 

ಅಂತಿಮ ಓವರ್‌ನ ಮೊದಲ ಎಸೆತದಲ್ಲೇ ಕೊಹ್ಲಿ ಸಿಕ್ಸರ್ ಸಿಡಿಸಿದರು. ಆದರೆ ಮರು ಎಸೆತದಲ್ಲೇ ಕೊಹ್ಲಿ ವಿಕೆಟ್ ಪತನಗೊಂಡಿತು. ಇದು ಟೀಂ ಇಂಡಿಯಾದಲ್ಲಿ ಆತಂಕ ಸೃಷ್ಟಿಸಿತು. ಆದರೆ ಹಾರ್ದಿಕ್ ಪಾಂಡ್ಯ ಬೌಂಡರಿ ಸಿಡಿಸೋ ಮೂಲಕ ಪಂದ್ಯ ಫಿನೀಶ್ ಮಾಡಿದರು. ಭಾರತ 19.5 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಭಾರತ 6 ವಿಕೆಟ್ ಗೆಲುವು ದಾಖಲಿಸಿತು. ಇಷ್ಟೇ ಅಲ್ಲ 2-1 ಅಂತರದಿಂದ ಸರಣಿ ಗೆದ್ದುಕೊಂಡಿತು. 

ಆಸ್ಟ್ರೇಲಿಯಾ ನಿರ್ಣಾಯಕ ಪಂದ್ಯದಲ್ಲಿ ದಿಟ್ಟ ಹೋರಾಟ ನೀಡಿದೆ. ಟೀಂ ಇಂಡಿಯಾ ಸ್ಪಿನ್ ದಾಳಿ ಮೂಲಕ ಆಸ್ಟ್ರೇಲಿಯಾ ತಂಡವನ್ನು ಕಟ್ಟಿಹಾಕಲು ಪ್ರಯತ್ನ ಮಾಡಿತು. ಆರಂಭಿಕ ಹಂತದಲ್ಲಿ ಟೀಂ ಇಂಡಿಯಾ ಪ್ಲಾನ್ ವರ್ಕೌಟ್ ಆಯಿತು. ಕ್ಯಾಮರೂನ್ ಗ್ರೀನ್ ಹೋರಾಟ ಮುಂದುವರಿಸಿದರೆ, ನಾಯಕ ಆ್ಯರೋನ್ ಫಿಂಚ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್ ಅಬ್ಬರಿಸಲಿಲ್ಲ. ಗ್ರೀನ್ 52 ರನ್ ಕಾಣಿಕೆ ನೀಡಿದರು. ಜೋಶ್ ಇಂಗ್ಲಿಸ್ 24 ರನ್ ಸಿಡಿಸಿ ಔಟಾದರು. ಆದರೆ ಅಂತಿಮ ಹಂತದಲ್ಲಿ ಟಿಮ್ ಡೇವಿಡ್ ಹಾಗೂ ಡೇನಿಯ್ ಸ್ಯಾಮ್ಸ್ ಜೊತೆಯಾಟ ಪಂದ್ಯದ ಗತಿಯನ್ನು ಬದಲಿಸಿತು. ಡೇವಿಡ್ 27 ಎಸೆತದಲ್ಲಿ 54 ರನ್ ಸಿಡಿಸಿದರು. ಡೇನಿಯಲ್ ಸ್ಯಾಮ್ಸ್ ಅಜೇಯ 28 ರನ್ ಸಿಡಿಸಿದರು. ಈ ಮೂಲಕ ಆಸ್ಟ್ರೇಲಿಯಾ 7 ವಿಕೆಟ್ ನಷ್ಟಕ್ಕೆ 186 ರನ್ ಸಿಡಿಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ