ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೇತುವೆ ಮೇಲೆ ಚಲಿಸುತ್ತಿದ್ದ ರೈಲಿಗೆ ಬೆಂಕಿ: ಜೀವ ಉಳಿಸಿಕೊಳ್ಳಲು ನದಿ ಹಾರಿದ ಪ್ರಯಾಣಿಕರು

Twitter
Facebook
LinkedIn
WhatsApp
ಸೇತುವೆ ಮೇಲೆ ಚಲಿಸುತ್ತಿದ್ದ ರೈಲಿಗೆ ಬೆಂಕಿ: ಜೀವ ಉಳಿಸಿಕೊಳ್ಳಲು ನದಿ ಹಾರಿದ ಪ್ರಯಾಣಿಕರು

ಮೆಸಾಚುಸೆಟ್ಸ್: ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಮೇಲೆ ಚಲಿಸುತ್ತಿದ್ದ ರೈಲಿಗೆ ಒಮ್ಮಿಂದೊಮ್ಮೆಲೆ ಬೆಂಕಿ ಬಿದ್ದಿದ್ದು, ಇದರಿಂದ ರೈಲಿನಲ್ಲಿದ್ದ ಪ್ರಯಾಣಿಕರು ಜೀವ ಉಳಿಸಿಕೊಳ್ಳಲು ನದಿಗೆ ಹಾರಿದ ಘಟನೆ ನಡೆದಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೆಸಾಚುಸೆಟ್ಸ್ ಬೇ ಸಾರಿಗೆ ಪ್ರಾಧಿಕಾರದ ಒಳ ಬರುವ ಆರೆಂಜ್ ಲೈನ್ ರೈಲು ಇನ್ನೇನು ಮಿಸ್ಟಿಕ್ ನದಿಯನ್ನು ದಾಟಿ ಸೋಮರ್‌ವಿಲ್ಲೆಯಲ್ಲಿರುವ ಅಸೆಂಬ್ಲಿ ನಿಲ್ದಾಣ ಸಮೀಪಿಸಬೇಕು ಎನ್ನುವಷ್ಟರಲ್ಲಿ ಸೇತುವೆ ಮೇಲೆಯೇ ರೈಲಿಗೆ ಬೆಂಕಿ ಹತ್ತಿಕೊಂಡು ಹೊತ್ತಿ ಉರಿಯಲಾರಂಭಿಸಿದೆ. ಈ ವೇಳೆ ಜೀವ ಉಳಿಸಿಕೊಳ್ಳಲು ಕೆಲ ಪ್ರಯಾಣಿಕರು ನದಿಗೆ ಹಾರಿದ್ದಾರೆ. ಅಮೆರಿಕಾದ ಬೋಸ್ಟನ್‌ನ ಉತ್ತರ ಭಾಗದಲ್ಲಿ ಈ ಘಟನೆ ನಡೆದಿದೆ.

ರೈಲಿನಲ್ಲಿದ್ದ ಪ್ರಯಾಣಿಕರು ಬಲವಂತವಾಗಿ ಕಿಟಕಿಯಿಂದ ನದಿಗೆ ಜಿಗಿದಿದ್ದಾರೆ. ನಂತರ ರೈಲಿನ ತಳದಲ್ಲಿದ್ದ ಲೋಹದ ಫಲಕವು ಸಡಿಲಗೊಂಡು ವಿದ್ಯುದೀಕರಣಗೊಂಡ ಮೂರನೇ ಹಳಿಯನ್ನು ಸ್ಪರ್ಶಿಸಿದ ಪರಿಣಾಮ ಈ ಬೆಂಕಿ ಅನಾಹುತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಈ ದುರಂತದಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ತಿಳಿದು ಬಂದಿದೆ. MBTA ಜನರಲ್ ಮ್ಯಾನೇಜರ್ ಸ್ಟೀವ್ ಪೋಫ್ಟಾಕ್ ಘಟನೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಾಥಮಿಕ ಮಾಹಿತಿ ಪ್ರಕಾರ 6 ಅಡಿ 1 ಇಂಚು ಇರುವೀ ಲೋಹದ ಫಲಕವನ್ನು ‘ಸಿಲ್’ ಎಂದು ಕರೆಯುತ್ತಾರೆ, ಅದು ರೈಲಿನ ತಳದ ಉದ್ದಕ್ಕೂ ಚಲಿಸುತ್ತದೆ. ಆದರೆ ಇದು ಸಡಿಲಗೊಂಡ ಪರಿಣಾಮ ವಿದ್ಯುತ್ ಪ್ರವಹಿಸುತ್ತಿದ್ದ ಹೈ-ವೋಲ್ಟೇಜ್ ಹಳಿಗೆ ಸ್ಪರ್ಶಿಸಿತ್ತು. ಪರಿಣಾಮ ಇದರಿಂದ ಕಿಡಿ ಹೊತ್ತಿಕೊಂಡು ಬೆಂಕಿ ಉಂಟಾಗಿದೆ ಎಂದು ಅವರು ಹೇಳಿದರು.

ಬೆಂಕಿಯಿಂದ ತಪ್ಪಿಸಿಕೊಳ್ಳುವ ಸಮಯದಲ್ಲಿ ರೈಲಿನ ಪ್ರಯಾಣಿಕರು ಬೋಗಿಯ ನಾಲ್ಕು ಕಿಟಕಿಗಳಿಂದ ಹೊರಗೆ ಹಾರಿದ್ದಾರೆ. ಈ ರೈಲಿನಲ್ಲಿದ್ದ ಸುಮಾರು 200 ಪ್ರಯಾಣಿಕರಲ್ಲಿ ಹೆಚ್ಚಿನವರು MBTA ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟರು ಎಂದು ಪೋಫ್ಟಾಕ್ ಹೇಳಿದರು. ಇನ್ನು ಈ ಸಂದರ್ಭದಲ್ಲಿ ನದಿಗೆ ಹಾರಿದ ಮಹಿಳೆ ವೈದ್ಯಕೀಯ ಚಿಕಿತ್ಸೆ ನಿರಾಕರಿಸಿದರು ಎಂದು ಅವರು ತಿಳಿಸಿದರು. ಅಲ್ಲದೇ ಈ ಘಟನೆ ನಡೆದ ಎರಡು ನಿಮಿಷಗಳಲ್ಲಿ ಮೂರನೇ ಹಳಿಗೆ ವಿದ್ಯುತ್ ಸ್ಥಗಿತಗೊಳಿಸಲಾಯಿತು ಎಂದು ಅವರು ಹೇಳಿದರು.3 ವರ್ಷ ಹಳೆಯ ಈ ರೈಲನ್ನು ಒಂದು ತಿಂಗಳ ಹಿಂದೆಯೇ ಪರಿಶೀಲಿಸಲಾಗಿತ್ತು, ಈ ವೇಳೆ ಸಡಿಲಗೊಂಡ ಫಲಕದ ಪರಿಶೀಲನೆಯೂ ನಡೆದಿದೆ. ಬೆಂಕಿ ಸಂಭವಿಸಿದ ನಂತರ ಸೇವೆಯಲ್ಲಿರುವ ಇತರ ಆರೆಂಜ್ ಲೈನ್ ಮೇಲೆ ಅದೇ ಫಲಕವನ್ನು ಪರಿಶೀಲಿಸಲಾಯಿತು ಮತ್ತು ಆ ವೇಳೆ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಪೋಫ್ಟಾಕ್ ಹೇಳಿದರು. ಘಟನೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ಅನಾಹುತದ ವಿಡಿಯೋ ವೈರಲ್ ಆಗುತ್ತಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ