ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೋಷಿಯಲ್‌ ಮೀಡಿಯಾ ಪೋಸ್ಟ್ ನಿರ್ಣಯ ಪ್ರಶ್ನಿಸಲು ಇನ್ನು ಮುಂದೆ ಅವಕಾಶ

Twitter
Facebook
LinkedIn
WhatsApp
ಸೋಷಿಯಲ್‌ ಮೀಡಿಯಾ ಪೋಸ್ಟ್ ನಿರ್ಣಯ ಪ್ರಶ್ನಿಸಲು ಇನ್ನು ಮುಂದೆ ಅವಕಾಶ

ನವದೆಹಲಿ: ಸಾಮಾಜಿಕ ಮಾಧ್ಯಮಗಳು ತಮ್ಮ ಬಳಕೆದಾರರ ವಿರುದ್ಧ ಏಕಪಕ್ಷೀಯ ನಿರ್ಣಯಗಳನ್ನು ಕೈಗೊಳ್ಳುವ ಪ್ರವೃತ್ತಿಗೆ ಇನ್ನು ಬ್ರೇಕ್‌ ಬೀಳಲಿದೆ. ಟ್ವೀಟರ್‌, ಫೇಸ್‌ಬುಕ್‌ನಂಥ ಸೋಷಿಯಲ್‌ ಮೀಡಿಯಾ ಕಂಪನಿಗಳು ಕೈಗೊಳ್ಳುವ ಕ್ರಮ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕೇಂದ್ರ ಸರ್ಕಾರದ ಮಟ್ಟದಲ್ಲೇ ಇನ್ನು ಸಮಿತಿಗಳು ರಚನೆ ಆಗಲಿದೆ.

ಈ ಕುರಿತು ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಕೇಂದ್ರ ಸರ್ಕಾರ (Central Government) ಶುಕ್ರವಾರ ಮಹತ್ವದ ತಿದ್ದುಪಡಿ ತಂದಿದೆ. ಬಳಕೆದಾರರ ದೂರುಗಳನ್ನು ಸ್ವೀಕರಿಸಿ, ಸಮಸ್ಯೆ ಪರಿಹರಿಸಲು ಇನ್ನು 3 ತಿಂಗಳಲ್ಲಿ 1 ಅಥವಾ ಒಂದಕ್ಕಿಂತ ಹೆಚ್ಚು ಮೇಲ್ಮನವಿ ಸಮಿತಿ ರಚನೆ ಮಾಡಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಈಗಾಗಲೇ ಟ್ವೀಟರ್‌(Twitter), ಫೇಸ್‌ಬುಕ್‌(Facebook), ಟೆಲಿಗ್ರಾಂನಂಥ (Telegram) ಸೋಷಿಯಲ್‌ ಮೀಡಿಯಾ (social media) ಕಂಪನಿಗಳು ತಮ್ಮ ಕಂಪನಿ ಮಟ್ಟದಲ್ಲಿ ಕುಂದುಕೊರತೆ ಅಧಿಕಾರಿಗಳನ್ನು ಸರ್ಕಾರದ ಆದೇಶಾನುಸಾರ ನೇಮಿಸಿಕೊಂಡಿವೆ. ಈ ಕುಂದುಕೊರತೆ ಅಧಿಕಾರಿಗಳಿಗೆ ಬಳಕೆದಾರರು ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳು, ಖಾತೆಗಳ ಅಮಾನತು, ಇತರ ವಿಷಯಗಳ ವಿರುದ್ಧ ಮನವಿ ಸಲ್ಲಿಸಬಹುದು. ಆದರೆ ಕುಂದುಕೊರತೆ ಅಧಿಕಾರಿ ಕೈಗೊಳ್ಳುವ ನಿರ್ಣಯ ಪ್ರಶ್ನಿಸಲು ಬಳಕೆದಾರರಿಗೆ ಅವಕಾಶ ಇರಲಿಲ್ಲ.

ಹೀಗಾಗಿ ಸೋಷಿಯಲ್‌ ಮೀಡಿಯಾ ಕಂಪನಿಗಳ ನಿರಂಕುಶತ್ವಕ್ಕೆ(tyranny) ಅಂತ್ಯ ಹಾಡಲು ಇನ್ನು ಸರ್ಕಾರದ ಮಟ್ಟದಲ್ಲಿ ಮೇಲ್ಮನವಿ ಸಮಿತಿಗಳು ರಚನೆ ಆಗಲಿವೆ. ಇವು ಸಾಮಾಜಿಕ ಮಾಧ್ಯಮ ವೇದಿಕೆಗಳ ಕುಂದುಕೊರತೆ ಅಧಿಕಾರಿ ಕೈಗೊಂಡ ನಿರ್ಧಾರವನ್ನು ಪ್ರಶ್ನಿಸಿ 30 ದಿನಗಳ ಒಳಗಾಗಿ ಜನರು ದೂರು ಸಲ್ಲಿಸಿದರೆ ಆ ಬಗ್ಗೆ ಮರುಪರಿಶೀಲನೆ ನಡೆಸಲಿವೆ. ಪ್ರತಿ ಸಮಿತಿಯಲ್ಲಿ ಒಬ್ಬ ಮುಖ್ಯಸ್ಥ ಹಾಗೂ 2 ಪೂರ್ಣಾವಧಿ ಸದಸ್ಯರು ಇರುತ್ತಾರೆ. ಇವರನ್ನು ಕೇಂದ್ರ ಸರ್ಕಾರವೇ ನೇಮಕ ಮಾಡಲಿದೆ. ಇವರಲ್ಲಿ ಒಬ್ಬ ವ್ಯಕ್ತಿ ಪದನಿಮಿತ್ತ ಸದಸ್ಯರಾಗಿದ್ದರೆ ಇನ್ನಿಬ್ಬರು ಸ್ವತಂತ್ರ ಸದಸ್ಯರಾಗಿರುತ್ತಾರೆ. ಸಮಿತಿಯು ಇಂತಹ ಅರ್ಜಿಗಳ ತ್ವರಿತವಾಗಿ ವಿಚಾರಣೆ ನಡೆಸಿ ಅರ್ಜಿ ದಾಖಲಿಸಿದ 30 ದಿನಗಳ ಒಳಗಾಗಿ ಅದನ್ನು ಇತ್ಯರ್ಥ ಪಡಿಸುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist