ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೌದಿ ಜೈಲಿನಿಂದ ಬಿಡುಗಡೆ, ಆ.18 ಕ್ಕೆ ಹುಟ್ಟೂರಿಗೆ ಹರೀಶ್‌ ಬಂಗೇರ.

Twitter
Facebook
LinkedIn
WhatsApp
ಸೌದಿ ಜೈಲಿನಿಂದ ಬಿಡುಗಡೆ, ಆ.18 ಕ್ಕೆ ಹುಟ್ಟೂರಿಗೆ ಹರೀಶ್‌ ಬಂಗೇರ.

ಕುಂದಾಪುರ : ಸೌದಿ ಅರೇಬಿಯಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಕೋಟೇಶ್ವರ ಬೀಜಾಡಿಯ ನಿವಾಸಿ ಹರೀಶ್‌ ಬಂಗೇರ ಬಿಡುಗಡೆಗೊಂಡಿದ್ದಾರೆ. ಇದೇ ಅಗಸ್ಟ್‌ 18ರಂದು ಅವರು ಹುಟ್ಟೂರಿಗೆ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಫೇಸ್‌ಬುಕ್‌ ನಲ್ಲಿ ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಅವಹೇಳನಕಾರಿ ಬರಹದ ಆರೋಪದಡಿಯಲ್ಲಿ ಬಂಧನಕ್ಕೆ ಒಳಗಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದ ನಿವಾಸಿ ಹರೀಶ್‌ ಬಂಗೇರ ಅವರು ಮೂರು ವರ್ಷಗಳ ಕಾಲ ಜೈಲಿನಲ್ಲಿದ್ದರು. ದುಬೈನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿ ಹರೀಶ್‌ ಬಂಗೇ ಮಂಗಳೂರಿನ ಸಿಎಎ ಗಲಭೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದರು. ನಂತರ ಬೆದರಿಕೆಯ ಹಿನ್ನೆಲೆಯ ವಿಡಿಯೋ ಜೊತೆಗೆ ತಮ್ಮ ಫೇಸ್‌ಬುಕ್‌ ಖಾತೆಯನ್ನೇ ಡಿಲೀಟ್‌ ಮಾಡಿದ್ದರು.

ಆದರೆ ಕಿಡಿಗೇಡಿಗಳು ಹರೀಶ್‌ ಬಂಗೇರ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆಯನ್ನು ತೆರೆದು ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆಅವಹೇಳನಕಾರಿ ಪೋಸ್ಟ್‌ ಮಾಡಿದ್ದಾರೆ. ಈ ಪೋಸ್ಟ್‌ ಸೌದಿಯಲ್ಲಿ ಸಾಕಷ್ಟು ವೈರಲ್‌ ಆಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಹರೀಶ್‌ ಬಂಗೇರ ಅವರನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಹರೀಶ್‌ ಬಂಗೇರ ಪತ್ನಿ, ತನ್ನ ಪತಿ ಹೆಸರಲ್ಲಿ ಫೇಕ್‌ ಫೇಸ್‌ಬುಕ್‌ ಖಾತೆ ತೆರೆದಿರುವ ಕುರಿತು ಉಡುಪಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ತನಿಖೆ ನಡೆಸಿದ ಎಸ್ಪಿ ನಿಶಾ ಜೇಮ್ಸ್‌ ಹಾಗೂ ಇಂದಿನ ಎಸ್ಪಿ ವಿಷ್ಣುವರ್ಧನ್‌ ಅವರು ಆರೋಪಿಗಳಾದ ಮೂಡಬಿದರೆಯ ಅಬ್ದುಲ್‌ ಹುಯೇಸ್‌ ಹಾಗೂ ಅಬ್ದುಲ್ ತುವೇಸ್‌ ಎಂಬವರನ್ನು ಬಂಧಿಸಿದ್ದರು. ‌ ಈ ಕಿಡಿಗೇಡಿಗಳು ನಡೆಸಿದ ಕೃತ್ಯಕ್ಕೆ ಅಮಾಯಕ ಹರೀಶ್ ಬಂಗೇರ ಸೌದಿಯಲ್ಲಿ ಮೂರು ವರ್ಷ ಕಳೆಯಬೇಕಾಗಿ ಬಂದಿದೆ.

ಉಡುಪಿಯಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿರುವುದು ದೃಢಪಟ್ಟ ಬೆನ್ನಲ್ಲೇ ಸೌದಿ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹರೀಶ್‌ ಬಂಗೇರ ಅಮಾಯಕ ಅನ್ನೋದು ಸೌದಿ ಪೊಲೀಸರಿಗೆ ಮನವರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹರೀಶ್‌ ಬಂಗೇಶ್‌ ಅವರನ್ನು ಬಿಡುಗಡೆ ಮಾಡಲಾಗಿದ್ದು, ಸೌದಿಯಲ್ಲಿರುವ ಅರೇಬಿಯಾ ಮಂಗಳೂರು ಅಸೋಸಿಯೇಷನ್‌ ಪ್ರಯಾಣದ ವೆಚ್ಚವನ್ನು ಭರಿಸಲು ಮುಂದೆ ಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು