ಸ್ಕಾರ್ಪಿಯೋ ಡಿವೈಡರ್ಗೆ ಡಿಕ್ಕಿ ಹೊಡೆದು ಟ್ರಕ್ಗೆ ಡಿಕ್ಕಿ; ಐವರು ವೈದ್ಯರ ದುರ್ಮರಣ

ಸ್ಕಾರ್ಪಿಯೋ ಡಿವೈಡರ್ಗೆ ಡಿಕ್ಕಿ ಹೊಡೆದು ಟ್ರಕ್ಗೆ ಡಿಕ್ಕಿ; ಐವರು ವೈದ್ಯರ ದುರ್ಮರಣ.
ಲಕ್ನೋ: ಸ್ಕಾರ್ಪಿಯೊ ಎಸ್ಯುವಿ (Scorpio SUV) ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯರು ಸಾವನ್ನಪ್ಪಿರುವ ಘಟನೆ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ ವೇನಲ್ಲಿ (Agra Lucknow Express Way) ನಡೆದಿದೆ.
ಮೃತಪಟ್ಟವರು ಉತ್ತರ ಪ್ರದೇಶದ (Uttar Pradesh) ವೈದ್ಯಕೀಯ ವಿಜ್ಞಾನ ವಿವಿಯಲ್ಲಿ ಸ್ನಾತಕೋತರ ತರಬೇತಿ ಪಡೆದ ವೈದ್ಯರು. ದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಮೃತರನ್ನು ಆಗ್ರಾ ಮೂಲದ ಡಾ. ಅನಿರುದ್ಧ್ ವರ್ಮಾ (29), ಭದೋಹಿಯ ಡಾ. ಸಂತೋಷ್ ಕುಮಾರ್ ಮೌರ್ಯ (46), ಕನೌಜ್ನ ಡಾ. ಅರುಣ್ ಕುಮಾರ್ (34) ಮತ್ತು ಬರೇಲಿಯ ಡಾ. ನಾರ್ದೇವ್ (35) ನಾಲ್ವರು ವೈದ್ಯರಾಗಿದ್ದು ಹಾಗೂ ಇನ್ನೋರ್ವನ್ನು ಲ್ಯಾಬ್ ಟೆಕ್ನಿಷಿಯನ್ ಡಾ. ಜೈವೀರ್ ಸಿಂಗ್ (38) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಅತಿವೇಗವಾಗಿ ಕಾರು ಚಾಲನೆ ಮಾಡುತ್ತಿದ್ದರಿಂದ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಕ್ಕದಲ್ಲಿದ್ದ ಟಕ್ರ್ಗೂ ಡಿಕ್ಕಿ ಹೊಡೆದಿದೆ ಎಂದು ತಿಳಿಸಿದ್ದಾರೆ.
ಮೃತಪಟ್ಟವರನ್ನು ಹೊರತುಪಡಿಸಿ ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಚಿಕಿತ್ಞೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದಂಪತಿ ಮೇಲೆ ಹರಿದ ಕೆಎಸ್ಆರ್ಟಿಸಿ ಬಸ್ – ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ಕೆಎಸ್ಆರ್ಟಿಸಿ ಬಸ್ (KSRTC Bus) ಹರಿದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಆದರ್ಶ ಚಿತ್ರಮಂದಿರದ ಬಳಿ ನಡೆದಿದೆ.
ಕೊಮ್ಮಸಂದ್ರ ಗ್ರಾಮದ 40 ವರ್ಷದ ವೆಂಕಟೇಶ್ ಹಾಗೂ ಪತ್ನಿ 34 ವರ್ಷದ ಸರಸತ್ವತಮ್ಮ ಮೃತರು. ಮೃತ ಸರಸ್ವತಮ್ಮ ಸ್ವಗ್ರಾಮದ ನಾರಾಯಣಹಳ್ಳಿಯಲ್ಲಿ ಇರುಮುಡಿ ಕಾರ್ಯಕ್ರಮ ನಿಮಿತ್ತ ದಂಪತಿ ಬೈಕ್ ಮೂಲಕ ತೆರಳುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ದಂಪತಿ ಕೆಳಗೆ ಬಿದ್ದಿದ್ದಾರೆ. ಹಿಂಬದಿಯಿಂದ ಬರುತ್ತಿದ್ದ ಬಸ್ ಇಬ್ಬರ ತಲೆ ಮೇಲೆ ಹರಿದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ (Chintamani Town Police Staion) ಪ್ರಕರಣ ದಾಖಲಾಗಿದೆ.