ಬುಧವಾರ, ಜೂನ್ 26, 2024
ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ.!-ಅಯೋಧ್ಯೆಯಲ್ಲಿ ಮೊದಲ ಮಳೆಗೆ ಸೋರಿದ ರಾಮ ಮಂದಿರದ ಗರ್ಭಗುಡಿಯ ಮೇಲ್ಛಾವಣಿ..!-ನಂದಿನಿ ಹಾಲಿನ ದರ ಏರಿಕೆ; ಎಷ್ಟು ಹೆಚ್ಚಾಗಲಿದೆ ಇಲ್ಲಿದೆ ಮಾಹಿತಿ-T20 ವಿಶ್ವಕಪ್ 2024: ಐತಿಹಾಸಿಕ ಗೆಲುವಿನೊಂದಿಗೆ ಸೆಮಿಫೈನಲ್​ಗೇರಿದ ಅಫ್ಘಾನಿಸ್ತಾನ; ಆಸ್ಟ್ರೇಲಿಯಾ ಔಟ್!-Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಕೂಟರ್ನಲ್ಲಿ ದಂಪತಿ ಚಲಿಸುತ್ತಿದ್ದ ವೇಳೆ ಹಠಾತ್ತಾಗಿ ಬಿದ್ದ ಬ್ರಹತ್ ಮರ; ಪತಿ ಸಾವು - ಪತ್ನಿ ಗಂಭೀರ.!

Twitter
Facebook
LinkedIn
WhatsApp
ಸ್ಕೂಟರ್ನಲ್ಲಿ ದಂಪತಿ ಚಲಿಸುತ್ತಿದ್ದ ವೇಳೆ ಹಠಾತ್ತಾಗಿ ಬಿದ್ದ ಬ್ರಹತ್ ಮರ; ಪತಿ ಸಾವು - ಪತ್ನಿ ಗಂಭೀರ.!

ಹೈದರಾಬಾದ್‌: ಸಾವು ಹೇಗೆ, ಎಲ್ಲಿ ಬೇಕಾದರೂ, ಯಾವ ರೂಪದಲ್ಲೂ ನಮ್ಮ ಹಿಂದೆಯೇ ಇರಬಹುದು. ಕೆಲವೊಮ್ಮೇ ಊಹಿಸಲೂ ಆಗದಂತಹ ರೀತಿಯಲ್ಲಿ ಸಾವು ಸಂಭವಿಸುತ್ತದೆ. ಹೈದರಾಬಾದ್‌ನಲ್ಲೊಂದು ಅಂತಹದ್ದೇ ಒಂದು ಘಟನೆ ನಡೆದಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದ ದಂಪತಿ ಮೇಲೆ ಇದ್ದಕ್ಕಿದ್ದಂತೆ ಮರ(Tree Fallen)ವೊಂದು ಉರುಳಿ ಬಿದ್ದಿದ್ದು, ಸ್ಥಳದಲ್ಲೇ ಪತಿ ಕೊನೆಯುಸಿರೆಳೆದಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಈ ವಿಡಿಯೋ ಸಿಸಿಟಿವಿ ಕ್ಯಾಮೆರಾ(CCTV)ದಲ್ಲಿ ರೆಕಾರ್ಡ್‌ ಆಗಿದ್ದು, ಎಲ್ಲೆಡೆ ವೈರಲ್‌(Viral Video) ಆಗುತ್ತಿದೆ.

ವಿಡಿಯೋದಲ್ಲಿ ಏನಿದೆ?

ಹೈದರಾಬಾದ್‌ನ ಸಿಕಂದರಬಾದ್‌ನಲ್ಲಿ ಮಂಗಳವಾರ ಈ ದುರ್ಘಟನೆ ಸಂಭವಿಸಿದ್ದು, ಆಸ್ಪತ್ರೆಗೆಂದು ದಂಪತಿ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ. ಬೊಲ್ಲಾರಾಮ್‌ ಕಂಟೋನ್ಮೆಂಟ್‌ ಆಸ್ಪತ್ರೆಗೆ ಬರುತ್ತಿದ್ದ ಸ್ಕೂಟರ್‌ನಲ್ಲಿ ದಂಪತಿ ಬರುತ್ತಿದ್ದರು. ದಂಪತಿ ಆಸ್ಪತ್ರೆ ಗೇಟ್‌ ಒಳಗೆ ಪ್ರವೇಶಿಸುತ್ತಿದ್ದಂತೆ ಪಕ್ಕದಲ್ಲೇ ಇದ್ದ ದೈತ್ಯ ಮರವೊಂದು ಸ್ಕೂಟರ್‌ ಮೇಲೆ ಉರುಳಿಬಿದ್ದಿದೆ. ಅದೃಷ್ಟವಶಾತ್‌ ಮತ್ತೊಂದು ಬೈಕ್‌ ತಕ್ಷಣ ಬ್ರೇಕ್‌ ಹಾಕಿ ನಿಲ್ಲುತ್ತೆ. ಅದರಲ್ಲಿದ್ದ ಸವಾರ ಅಪಾಯದಿಂದ ಪಾರಾಗುತ್ತಾನೆ. ಇದಾದ ತಕ್ಷಣ ಸೆಕ್ಯೂಟಿ ಗಾರ್ಡ್‌ ಹಾಗೂ ಇತರರು ಓಡಿ ಹೋಗಿ ದಂಪತಿ ರಕ್ಷಣೆಗೆ ಮುಂದಾಗುತ್ತಾರೆ. ಅಷ್ಟರಲ್ಲಿ ಪತಿ ಕೊನೆಯುಸಿರೆಳೆದಿದ್ದರು. ತಲೆಗೆ ಏಟು ಬಿದ್ದು ನರಳುತ್ತಿದ್ದಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಡಿಎಂ ಖಂಡನೆ:

ಇನ್ನು ವಿಡಿಯೋ ವೈರಲ್‌ ಆಗುತ್ತಿದ್ದಂತೆ ತೆಲುಗು ದೇಶಂ ಪಕ್ಷದ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಸೋಲು ಖಚಿತ ಎಂಬುದು ಮನವರಿಕೆ ಅಗುತ್ತಿದ್ದಂತೆ YSRCP ಮುಖಂಡರು ಈ ರೀತಿ ದಾಂದಲೆ ಎಬ್ಬಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಉತ್ರ ನಾರಾ ಲೋಕೇಶ್‌ ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದು, YSRCP ಶಾಸಕ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಮತಯಂತ್ರವನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು. ಸೋಲಿನ ಭಯದಿಂದ ಹೀಗೆಲ್ಲ ವರ್ತಿಸುತ್ತಿದ್ದಾರೆ. ಜೂ.4ರಂದು ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಳೆದ ವರ್ಷ ಬೆಂಗಳೂರಿನಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ನಾಗವಾರದ ರಿಂಗ್ ರೋಡ್‌ನ ಎಚ್‌ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಾಯಿ, ಮಗಳ ಮೇಲೆಯೇ ಉರುಳಿ ಬಿದ್ದಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರಿಬ್ಬರೂ ಆಸ್ಪತ್ರೆಯಲ್ಲಿ ಪ್ರಾಣ ಕಳೆದುಕೊಂಡಿದ್ದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ