ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬಿಡುಗಡೆಯಾಯ್ತು ‘ಸಲಾರ್’ ಚಿತ್ರದ ಪೋಸ್ಟರ್

Twitter
Facebook
LinkedIn
WhatsApp
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬಿಡುಗಡೆಯಾಯ್ತು ‘ಸಲಾರ್’ ಚಿತ್ರದ ಪೋಸ್ಟರ್

ಇಡೀ ದೇಶವೇ ಮೆಚ್ಚಿ ಹೆಮ್ಮೆಪಟ್ಟಂತಹ ‘ಕೆಜಿಎಫ್’ 1 ಮತ್ತು ‘ಕೆಜಿಎಫ್2’ ಚಿತ್ರಗಳ ನಿರ್ಮಾಪಕರಾದ ಹೊಂಬಾಳೆ ಫಿಲಂಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ ಮೊದಲ ಬಾರತೀಯ ಚಿತ್ರವಾದ ಪ್ರಭಾಸ್ ಅಭಿನಯದ ‘ಸಲಾರ್’ನ ಪೋಸ್ಟರ್, ಸೋಮವಾರ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬಿಡುಗಡೆಯಾಗಿದೆ.

ಹೊಂಬಾಳೆ ಫಿಲಂಸ್ನಡಿ ವಿಜಯಕುಮಾರ್ ಕಿರಗಂದೂರು ನಿರ್ಮಿಸಿ, ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ ‘ಸಲಾರ್’ ಚಿತ್ರವು 2023ರ ಸೆಪ್ಟೆಂಬರ್ 28ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. 400 ಕೋಟಿ ರೂ.ಗಳಿಗೂ ಮೀರಿದ ಅತೀ ದುಬಾರಿ ವೆಚ್ಚದ ಮತ್ತು ಅತೀ ನಿರೀಕ್ಷೆಯ ಈ ಚಿತ್ರವು ಈಗಾಗಲೇ ತನ್ನ ಹೈವೋಲ್ಟೇಜ್ ಆಕ್ಷನ್ ದೃಶ್ಯಗಳಿಂದ ಸಾಕಷ್ಟು ಸುದ್ದಿ ಮಾಡುತ್ತಿದೆ. ಈ ಹಿಂದೆ ಬಿಡುಗಡೆಯಾದ ಚಿತ್ರದ ಕೆಲವು ಪೋಸ್ಟರ್ಗಳು ಈಗಾಗಲೇ ಜನರ ಮನ ಗೆದ್ದಿದೆ. ಇದೀಗ ಚಿತ್ರತಂಡವು ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ.

‘ಸಲಾರ್’ ಒಂದು ಪಕ್ಕಾ ಆಕ್ಷನ್ ಮತ್ತು ಸಾಹಸಮಯ ಚಿತ್ರವಾಗಿದ್ದು ಭಾರತವಲ್ಲದೆ, ಯೂರೋಪ್, ಆಫ್ರಿಕಾ ಮುಂತಾದ ಕಡೆ ಚಿತ್ರೀಕರಣವಾಗಲಿದೆ. ಈ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು, ಈಗಾಗಲೇ ಮೊದಲ ಭಾಗದ ಚಿತ್ರೀಕರಣ ಸಂಪೂರ್ಣವಾಗಿದೆ. ಚಿತ್ರತಂಡವು ಸದ್ಯದಲ್ಲೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದು, ಈ ಚಿತ್ರದ ಗ್ರಾಫಿಕ್ಸ್ ಕೆಲಸದ ಜವಾಬ್ದಾರಿಯನ್ನು ವಿದೇಶದ ಪ್ರತಿಷ್ಠಿತ ಸ್ಟುಡಿಯೋಗೆ ನೀಡಲಾಗಿದ್ದು. ಭಾರತದಲ್ಲಿ ಇದುವರೆಗೂ ಯಾವ ಚಿತ್ರದಲ್ಲೂ ನೋಡದಂತಹ ಅತ್ಯುನ್ನತ ವಿಎಫ್ಎಕ್ಸ್ ಕೆಲಸವನ್ನು ಈ ಚಿತ್ರದಲ್ಲಿ ನೋಡಬಹುದು ಎಂದು ಹೇಳಲಾಗಿದೆ.

‘ಕೆಜಿಎಫ್ 2’ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಪ್ರಶಾಂತ್ ನೀಲ್, ಈಗ ಭಾರತದಲ್ಲೇ ಅತ್ಯಂತ ಬೇಡಿಕೆಯ ನಿರ್ದೇಶಕ ಎಂದರೆ ತಪ್ಪಾಗಲಾರದು. ಇಂಥ ಜನಪ್ರಿಯ ಮತ್ತು ಯಶಸ್ವಿ ನಿರ್ದೇಶಕರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರವು ಐದು ಭಾಷೆಗಳಲ್ಲಿ ಮೂಡಿ ಬರುತ್ತಿರುವ ಭಾರತೀಯ ಚಿತ್ರವಾಗಿದೆ. ಪ್ರಭಾಸ್ಗೆ ನಾಯಕಿಯಾಗಿ ಶ್ರುತಿ ಹಾಸನ್ ಅಭಿನಯಿಸಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದ ಪ್ರತಿಭಾವಂತ ಕಲಾವಿದರ ದಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ