ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ವಾತಂತ್ರ್ಯ ದಿನಾಚರಣೆ: ನೆಹರೂ ಐತಿಹಾಸಿಕ ಭಾಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡ ಕಾಂಗ್ರೆಸ್

Twitter
Facebook
LinkedIn
WhatsApp
 ಸ್ವಾತಂತ್ರ್ಯ ದಿನಾಚರಣೆ: ನೆಹರೂ ಐತಿಹಾಸಿಕ ಭಾಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡ ಕಾಂಗ್ರೆಸ್

ನವದೆಹಲಿ: ದೇಶಾದ್ಯಂತ 75 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದ್ದು, ಕಾಂಗ್ರೆಸ್ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪ್ರಸಿದ್ಧ, ಐತಿಹಾಸಿಕ ಸ್ವಾತಂತ್ರ್ಯ ದಿನದ ಭಾಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ.

ನೆಹರೂ ಬರೆದಿದ್ದ ಐತಿಹಾಸಿಕ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಡೇಟ್ ವಿತ್ ಡೆಸ್ಟಿನಿ (“date with destiny) ಎಂದು ನಮೂದಿಸಿದ್ದರು, ಆದರೆ ಅದನ್ನು ಹೇಳುವಾಗ ಟ್ರಿಸ್ಟ್ ವಿತ್ ಡೆಸ್ಟಿನಿ (“tryst with destiny”) ಎಂದು ಹೇಳಿದ್ದನ್ನು ಕಾಂಗ್ರೆಸ್ ಈ ಟ್ವೀಟ್ ಮೂಲಕ ನೆನಪಿಸಿಕೊಂಡಿದೆ.

ಕಾಂಗ್ರೆಸ್ ನ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ, ಜೈರಾಮ್ ರಮೇಶ್ ಅವರು ನೆಹರೂ ಅವರು 1947, ಆ.15 ರಂದು ಸಂವಿಧಾನ ಸಭೆಯ ಮಧ್ಯರಾತ್ರಿಯ ಸೆಷನ್ ನಲ್ಲಿ ಭಾಷಣ ಮಾಡುತ್ತಿರುವ ವಿಡೀಯೋವನ್ನೂ ಹಂಚಿಕೊಂಡಿದ್ದಾರೆ.

 

ಇದನ್ನೂ ಓದಿ: ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ನೆಹರೂ ಫೋಟೋ ಮಾಯ!: ಕಾಂಗ್ರೆಸ್ ತೀವ್ರ ಆಕ್ಷೇಪ, ಆಕ್ರೋಶ ಹೊರಹಾಕಿದ ನಾಯಕರು

75 ವರ್ಷಗಳ ಹಿಂದೆ ಮಧ್ಯರಾತ್ರಿಯ ನಂತರ ನೆಹರೂ ಅಮರವಾದ ಐತಿಹಾಸಿಕ Tryst with Destiny ಭಾಷಣ ಮಾಡಿದ್ದರು. 14.08.47 ರಂದು ಅವರು ಈ ಭಾಷಣದಕ್ಕೆ ಸಿದ್ಧಪಡಿಸಿದ್ದ ಕೈಬರಹದ ಕರಡಿನಲ್ಲಿ ಡೇಟ್ ವಿತ್ ಡೆಸ್ಟಿನಿ ಎಂಬ ಶಬ್ದವನ್ನು ಪ್ರಯೋಗಿಸಿದ್ದರು, ನಿಜವಾದ ಪ್ರತಿಭೆಯ ಕ್ಷಣದಲ್ಲಿ ಅವರು ಅದನ್ನು ಟ್ರಿಸ್ಟ್ ವಿತ್ ಡೆಸ್ಟಿನಿ ಎಂದು ಬದಲಾವಣೆ ಮಾಡಿದ್ದರು ಎಂದು ರಮೇಶ್ ಟ್ವಿಟರ್ ನಲ್ಲಿ ಬರೆದಿದ್ದಾರೆ.

ನಾವು ಹಲವು ವರ್ಷಗಳ ಹಿಂದೆ ಈ ದಿನಾಂಕವನ್ನು ನಿರೀಕ್ಷಿಸಿದ್ದೆವು (ಡೇಟ್ ವಿತ್ ಡೆಸ್ಟಿನಿ) ಈಗ ನಾವು ನಮ್ಮ ಪ್ರತಿಜ್ಞೆಯನ್ನು ಪುನಃ ಪೂರ್ಣ ಪ್ರಮಾಣದಲ್ಲಿ ಅಷ್ಟೇ ಅಲ್ಲದೇ ವ್ಯಾಪಕ ದೃಷ್ಟಿಯಲ್ಲಿ ಕೈಗೊಳ್ಳುವ ಸಮಯ ಬಂದಿದೆ. ಈ ತಡರಾತ್ರಿಯಲ್ಲಿ ಜಗತ್ತೇ ಮಲಗಿರುವಾಗ, ಭಾರತ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಂಡಿದೆ” ಎಂಬುದು ನೆಹರೂ ಭಾಷಣದ ಸಾರಾಂಶವಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ