ಶನಿವಾರ, ಜೂನ್ 29, 2024
ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!-ಉಜಿರೆ: ಭೀಕರ ರಸ್ತೆ ಅಪಘಾತ ; ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ ಮೃತ್ಯು..!-11-21% ಟಾರಿಪ್ ಹೆಚ್ಚಿಸಿದ ಏರ್ಟೆಲ್; ಜುಲೈ 3 ರಿಂದ ಯಾವ ಪ್ಲಾನ್ ಗೆ ಹೇಗಿದೆ ದರ.?-ಕಾರ್ಕಳ: ಬಸ್ ಚಲಾವಣೆ ವೇಳೆ ಅಸ್ವಸ್ಥಗೊಂಡ ಚಾಲಕ; ಹಿಮ್ಮುಖವಾಗಿ ಬಸ್ ಚಲಿಸಿ 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು.!-ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್; ಕಾಂಗ್ರೆಸ್ ಗಂಭೀರ ಆರೋಪ-ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ,13 ಮಂದಿ ದುರ್ಮರಣ-T20 World Cup: ಆಂಗ್ಲರ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಫೈನಲ್​ಗೇರಿದ ಭಾರತ.-ಬೆಳ್ತಂಗಡಿ: ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಸಾವು; ದಕ್ಷಿಣ ಕನ್ನಡದಲ್ಲಿ 2 ದಿನದಲ್ಲಿ 7 ಮಂದಿ ದುರ್ಮರಣ.!-ಕರಾವಳಿಯಾದ್ಯಂತ ಭಾರಿ ಮಳೆ ಹಿನ್ನೆಲೆ ನಾಳೆ ಜೂನ್ 28 ಶುಕ್ರವಾರದಂದು ಶಾಲಾ ಕಾಲೇಜಿಗೆ ರಜೆ ಘೋಷಣೆ..!-ಸಿದ್ದರಾಮಯ್ಯರವರ ಎದುರೆ CM ಸ್ಥಾನವನ್ನು ಡಿಕೆಶಿ ಗೆ ಬಿಟ್ಟುಬಿಡುವಂತೆ ಸ್ವಾಮೀಜಿ ಹೇಳಿಕೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ವಾತಿ ಮಾಲಿವಾಲ್ ಗೆ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಗೆ ಜಾಮೀನು!

Twitter
Facebook
LinkedIn
WhatsApp
2023 1largeimg 1762189367

ದೆಹಲಿ: ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ ಗೆ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಂತದಲ್ಲಿ ಆರೋಪಿಯನ್ನು ಅಕಾಲಿಕ ವಿಚಾರಣೆಗೆ ಗುರಿ ಮಾಡುವುದು ಸೂಕ್ತವಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
 
ಗುರುವಾರದಂದು ಏಮ್ಸ್ ನ ಹೊರ ಭಾಗದಲ್ಲಿ ರಾತ್ರಿ 3 ಗಂಟೆಯಲ್ಲಿ ಕುಡಿತ ಅಮಲಿನಲ್ಲಿದ್ದ ಚಾಲಕನೋರ್ವ ತಮ್ಮನ್ನು 10-15 ಮೀಟರ್ ನಷ್ಟು ದೂರಕ್ಕೆ ಎಳೆದೊಯ್ದಿದ್ದ. ಇದಕ್ಕೂ ಮುನ್ನ ನನ್ನ ಕೈ ಕಾರಿನ ಕಿಟಕಿಗೆ ಸಿಲುಕಿಕೊಂಡಿತ್ತು ಎಂದು ಡಿಸಿಡಬ್ಲ್ಯು ಸ್ವಾತಿ ಮಾಲಿವಾಲ್ ಆರೋಪಿಸಿದ್ದರು. 

ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಹರೀಶ್ ಚಂದ್ರ ಎಂದು ಗುರುತಿಸಲಾಗಿದ್ದು, ಆತನನ್ನು ದೆಹಲಿ ಪೊಲೀಸರು ಬಂಧಿಸಿದ್ದರು ಈ ವರೆಗೂ ಆತ ನ್ಯಾಯಾಂಗ ಬಂಧನದಲ್ಲಿದ್ದ. 

ಬಂಧನಕ್ಕೊಳಗಾಗಿರುವ ಆರೋಪಿಯ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳೂ ಜಾಮೀನು ನೀಡಬಹುದಾದ ಆರೋಪಗಳಾಗಿವೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದ್ದು ಜಾಮೀನು ಮಂಜೂರು ಮಾಡಿದೆ.
 
ಆರೋಪಿಯನ್ನು ಜೈಲಿನಲ್ಲಿಡುವುದರಿಂದ ಯಾವುದೇ ಉದ್ದೇಶವೂ ಈಡೇರುವುದಿಲ್ಲ ಎಂದು ಕೋರ್ಟ್ ಹೇಳಿದ್ದು,  50,000 ರೂಪಾಯಿ ಶೂರಿಟಿ ಬಾಂಡ್ ನ್ನು ಸಲ್ಲಿಸಲು ಹರೀಶ್ ಚಂದ್ರಗೆ ಸೂಚಿಸಿದೆ. 

ಅಗತ್ಯವಿದ್ದಾಗ ವಿಚಾರಣೆಗೆ ಹಾಜರಾಗುವುದು, ಮತ್ತೆ ಇಂಥಹದ್ದೇ ಪ್ರಕರಣದಲ್ಲಿ ಭಾಗಿಯಾಗದೇ ಇರುವುದು, ಸಾಕ್ಷ್ಯ ನಾಶ ಮಾಡದೇ ಇರುವುದು, ಆರೋಪಿಯ ಮೇಲೆ ಒತ್ತಡ ಹೇರದೇ ಇರುವುದು ಮೊದಲಾದ ಷರತ್ತುಗಳನ್ನು ಕೋರ್ಟ್ ವಿಧಿಸಿದೆ. 

ಆರೋಪದ ತೀವ್ರತೆ ಗಂಭೀರವಾದದ್ದು ಎಂಬುದರಲ್ಲಿ ಎರಡು ಮಾತಿಲ್ಲ ಹಾಗೂ ಈ ಹಂತದಲ್ಲಿ ಜಾಮೀನು ಅರ್ಜಿಯನ್ನು ಪರಿಗಣಿಸುವುದೂ ಸೂಕ್ತವಾಗಿದ್ದು, ಆರೋಪದ ತೀವ್ರತೆಯೊಂದೇ ಜಾಮೀನು ನೀಡಲು ಪರಿಗಣಿಸುವುದಲ್ಲ ಎಂದು ಕೋರ್ಟ್ ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ