ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಣ ಕೊಡದಿದ್ರೆ ಗನ್‍ನಲ್ಲಿ ಶೂಟ್ ಮಾಡೋ ಬೆದರಿಕೆ- 100 ರೂ. ಕೊಡುವಂತೆ ಲಾರಿ ಚಾಲಕನಿಗೆ ಧಮ್ಕಿ ಹಾಕಿದ ಅಧಿಕಾರಿ!!

Twitter
Facebook
LinkedIn
WhatsApp
ಹಣ ಕೊಡದಿದ್ರೆ ಗನ್‍ನಲ್ಲಿ ಶೂಟ್ ಮಾಡೋ ಬೆದರಿಕೆ- 100 ರೂ. ಕೊಡುವಂತೆ ಲಾರಿ ಚಾಲಕನಿಗೆ ಧಮ್ಕಿ ಹಾಕಿದ ಅಧಿಕಾರಿ!!

ಚಾಮರಾಜನಗರ: ಸರ್ಕಾರಿ ಅಧಿಕಾರಿಗಳು ಕದ್ದುಮುಚ್ಚಿ ಲಂಚ ಪಡೆಯುವುದು ಕಾಮನ್ ಆಗಿದೆ. ಆದರೆ ಇಲ್ಲೊಬ್ಬ ಸರ್ಕಾರಿ ನೌಕರ ಬಹಿರಂಗವಾಗಿ ಲಂಚ ಕೇಳಿದ್ದು, ಅಲ್ಲದೇ ಲಂಚ ಕೊಡದೇ ಹೋದರೆ ಶೂಟ್ ಮಾಡುವುದಾಗಿ ಬೆದರಿಸಿರುವ ಘಟನೆ ನಡೆದಿದೆ. ಚೆಕ್‍ಪೋಸ್ಟ್ ಮುಖಾಂತರ ಓಡಾಡುವ ವಾಹನಗಳನ್ನು ಪರಿಶೀಲನೆ ನಡೆಸುವುದು. ವಾಹನಗಳಲ್ಲಿ ಅಕ್ರಮ ಸಾಗಾಟ ಕಂಡರೇ ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸುವುದು ಚೆಕ್‌ಪೋಸ್ಟ್‌ನಲ್ಲಿರುವ ಸಿಬ್ಬಂದಿ ಕೆಲಸವಾಗಿತ್ತು. ಆದರೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಕರ್ನಾಟಕ ಮತ್ತು ತಮಿಳುನಾಡು ಗಡಿ ಪಾಲಾರ್‌ನಲ್ಲಿ ಚೆಕ್‍ಪೋಸ್ಟ್‌ವೊಂದರಲ್ಲಿ ಕರ್ತವ್ಯ ನಿರ್ವಹಿಸುವ ಕೆಲವು ಸಿಬ್ಬಂದಿ ಇಲ್ಲಿ ಓಡಾಡುವ ವಾಹನಗಳನ್ನು ತಪಾಸಣೆ ಮಾಡುವುದು ಬಿಟ್ಟು ಲಂಚ ವಸೂಲಿ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಚೆಕ್‍ಪೋಸ್ಟ್ ಸಿಬ್ಬಂದಿಯೋರ್ವ ಲಂಚ ಕೇಳುವುದನ್ನು ಲಾರಿ ಚಾಲಕರೊಬ್ಬರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

ಪಾಲಾರ್ ಚೆಕ್‍ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೋಹನ್ ಎಂಬಾತ ಲಾರಿಗಳನ್ನು ಪರಿಶೀಲನೆ ಮಾಡುವ ನೆಪದಲ್ಲಿ ಚಾಲಕರಿಂದ ಹಣ ಕೇಳಿದ್ದಾನೆ. 30 ರೂಪಾಯಿ ನೀಡಿದರೂ, 100 ರೂಪಾಯಿ ಕೊಡುವಂತೆ ಒತ್ತಾಯ ಮಾಡಿದ್ದಾನೆ. ಈ ವೇಳೆ ಲಾರಿ ಚಾಲಕ ಹಾಗೂ ಮೋಹನ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಹಣ ಕೊಡದೇ ಹೋದಲ್ಲಿ ಸಿಬ್ಬಂದಿ ಮೋಹನ್ ಗನ್‍ನಿಂದ ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯಲಾಗಿದೆ. ಘಟನೆ ಸಂಬಂಧಿಸಿ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಸಂತೋಷ್‍ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮೋಹನ್‌ ಕಾವೇರಿ ವನ್ಯಜೀವಿ ವಿಭಾಗದ ಸಿಬ್ಬಂದಿ. ಪ್ರಭಾರಿಯಾಗಿ ಪಾಲಾರ್ ಚೆಕ್‍ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ. ವಿಷಯ ತಿಳಿದ ಕೂಡಲೇ ಆತನನ್ನು ಅಲ್ಲಿಂದ ತೆಗೆಯಲಾಗಿದೆ. ಮತ್ತು ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾವೇರಿ ವನ್ಯಜೀವಿ ವಿಭಾಗದ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು. ಸದ್ಯ ಲಂಚ ಕೇಳಿದ ಮೋಹನ್‍ನನ್ನು ಚೆಕ್‍ಪೋಸ್ಟ್ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ