ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಲಾಲ್ ಮುಕ್ತ ದೀಪಾವಳಿ ಅಭಿಯಾನಕ್ಕೆ ಮುತಾಲಿಕ್ ಕರೆ

Twitter
Facebook
LinkedIn
WhatsApp
ಹಲಾಲ್ ಮುಕ್ತ ದೀಪಾವಳಿ ಅಭಿಯಾನಕ್ಕೆ ಮುತಾಲಿಕ್ ಕರೆ

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಧರ್ಮ ದಂಗಲ್ ಆರಂಭಗೊಂಡಿದ್ದು, ಹಲಾಲ್ (Halal) ಮುಕ್ತ ದೀಪಾವಳಿ (Deepavali) ಎಂಬ ಅಭಿಯಾನಕ್ಕೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಕರೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲಾಲ್ ದೇಶದಲ್ಲಿ ಹಲ್ ಚಲ್ ಸೃಷ್ಟಿ ಮಾಡಿದೆ. ಹಲಾಲ್ ಮುಕ್ತ ದೀಪಾವಳಿಯನ್ನು ಈ ಬಾರಿ ಹಿಂದೂ ಸಮಾಜ ಮಾಡಬೇಕು. ಕಬ್ಬು, ಹೂ, ಹಣ್ಣು, ಪೂಜೆ ಸಾಮಗ್ರಿಗಳನ್ನು ಎಲ್ಲಾ ಹಿಂದೂ ವ್ಯಾಪಾರಿಗಳಿಂದ ಖರೀದಿ ಮಾಡಬೇಕು. ಮುಸ್ಲಿಂ ವ್ಯಾಪಾರಿಗಳಿಂದ ಹಲಾಲ್ ಸರ್ಟಿಫಿಕೇಟ್ ಸಾಮಗ್ರಿಗಳನ್ನು ಖರೀದಿಸಿದರೆ ಅಶಾಸ್ತ್ರವಾಗುತ್ತದೆ. ಇದು ನಮ್ಮ ಧರ್ಮಕ್ಕೆ ಅಪಮಾನ ಮಾಡಿದಂತೆ ಎಂದು ತಿಳಿಸಿದರು.

ದೇಶದ ವಿಧ್ವಂಸಕ ಕೃತ್ಯಗಳಿಗೆ ಈ ಹಲಾಲ್ ಹಣವನ್ನು ಬಳಸಲಾಗುತ್ತಿದೆ. ದೇಶದ್ರೋಹಿ ಪಿಎಫ್‍ಐಗೆ (PFI) ಮೂಲ ಆದಾಯ ಈ ಹಲಾಲ್ ಆಗಿದೆ. ಹಳೆ ಹುಬ್ಬಳ್ಳಿ ಗಲಭೆ, ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಾಟೆ, ಸಿಎಎ ಪ್ರತಿಭಟನೆಗೆ ಹಲಾಲ್‍ನಿಂದಲೇ ಹಣ ವರ್ಗಾವಣೆಯಾಗುತ್ತದೆ. ನಾವು ಖರೀದಿಸುವ ಹಲಾಲ್ ಸರ್ಟಿಫಿಕೇಟ್ ನೀಡುವ ಸಾಮಗ್ರಿಗಳನ್ನು ಖರೀದಿ ಮಾಡುವುದರಿಂದ ರಾಕ್ಷಸರು ಹುಟ್ಟುತ್ತಿದ್ದಾರೆ ಎಂದು ಕಿಡಿಕಾರಿದರು.

ಸರ್ಕಾರದ್ದು ದಪ್ಪ ಚರ್ಮ. ಅದಕ್ಕೆ ಬರೀ ಬಡಿಗೆಯಿಂದ ಹೊಡೆದರೆ ಸಾಲದು ಎಂದ ಅವರು, ದೇಶದಲ್ಲಿ ಮುಸ್ಲಿಮರಿಗೆ ನೀಡುತ್ತಿರುವ ಸೌಲಭ್ಯ ಹಿಂದೂಗಳಿಗೂ ಸಿಗುತ್ತಿಲ್ಲ. ಕೇವಲ ಅಲ್ಪಸಂಖ್ಯಾತರ ಮೀಸಲಾತಿ ಮಾತ್ರವಲ್ಲ ಎಲ್ಲಾ ಸೌಲಭ್ಯಗಳನ್ನು ವಾಪಸ್ಸು ಪಡೆಯಬೇಕು. ನಾನು ಶಾಸಕ ಅರವಿಂದ ಬೆಲ್ಲದ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಬೆಂಬಲಿಸುತ್ತೇನೆ ಎಂದು ಹೇಳಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ