ತಿರುವನಂತಪುರಂ: ವೇದಿಕೆ ಮೇಲೆ ಹಾಡು ಹೇಳುವ ವೇಳೆ ಕುಸಿದು ಬಿದ್ದು ಮಲಯಾಳಂ ಗಾಯಕ ಎಡವ ಬಶೀರ್(87) ಸಾವನ್ನಪ್ಪಿದ್ದಾರೆ.
ಕೇರಳದಲ್ಲಿ ನಡೆಯುವ ಆರ್ಕೆಸ್ಟ್ರಾಗಳಲ್ಲಿ ಹಾಡು ಹಾಡುವ ಮೂಲಕ ಎಡವ ಬಶೀರ್ ಹೆಚ್ಚು ಜನಪ್ರಿಯರಾಗಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಬ್ಲೂ ಡೈಮಂಡ್ಸ್ ಆರ್ಕೆಸ್ಟ್ರಾದ ಗೋಲ್ಡನ್ ಜುಬಿಲಿ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ 1978ರಲ್ಲಿ ಬಿಡುಗಡೆಯಾದ ಹಿಂದಿ ಚಲನಚಿತ್ರ ಟೂಟ್ ಟಾಯ್ಸ್ನ ಪ್ರಸಿದ್ಧ ಭಾರತೀಯ ಗಾಯಕ ಕೆಜೆ ಯೇಸುದಾಸ್ ಅವರ ಮಾನ ಹೋ ತುಮ್ ಬೇಹದ್ ಹಸೀನ್… ಹಾಡನ್ನು ಹಾಡುವಾಗ ಎಡವ ಬಶೀರ್ ಕುಸಿದುಬಿದ್ದಿದ್ದಾರೆ.
ಹಾಡು ಹಾಡುತ್ತಾ ವೇದಿಕೆ ಮೇಲೆ ಕುಳಿತುಕೊಳ್ಳಲು ಪ್ರಯತ್ನಿಸಿದ ಅವರು ಇದ್ದಕ್ಕಿದಂತೆ ಕೆಳಗೆ ಕುಸಿದು ಬಿದ್ದಿದ್ದಾರೆ. ಜೊತೆಗೆ ಅವರ ಕೈಯಲ್ಲಿದ್ದ ಮೈಕ್ ಕೂಡ ಕೆಳಗೆ ಬಿದ್ದಿದೆ. ನಂತರ ಕೂಡಲೇ ವೇದಿಕೆಯತ್ತ ಜನರು ಆಗಮಿಸಿ, ಬಶೀರ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಬಶೀರ್ ಅವರು ಸ್ವಾತಿ ತಿರುನಾಳ್ ಮ್ಯೂಸಿಕ್ ಅಕಾಡೆಮಿಯಿಂದ ಗಾನಬೂಷಣಂ (ಸಂಗೀತದಲ್ಲಿ ಶೈಕ್ಷಣಿಕ ಪದವಿ) ಪೂರ್ಣಗೊಳಿಸಿದರು. 1972 ರಲ್ಲಿ ಅವರು ಕೊಲ್ಲಂ ಸಂಗೀತಾಲಯ ಗಾನಮೇಳ ತಂಡವನ್ನು ರಚಿಸಿದ್ದರು. ಅಲ್ಲಿಂದ ಅವರ ವೇದಿಕೆ ಕಾರ್ಯಕ್ರಮಗಳು ಪ್ರಾರಂಭವಾಗಿ ತಮ್ಮ 78ನೇ ವಯಸ್ಸಿನವರೆಗೂ ಹಾಡುತ್ತಾ ಬಂದಿದ್ದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?