ಅಹಮದಾಬಾದ್: ಕಾಂಗ್ರೆಸ್ ಪಕ್ಷದಲ್ಲಿ ಹೊಸ ಭರವಸೆ ಮೂಡಿಸಿದ್ದ ಯುವ ನೇತಾರ ಹಾರ್ದಿಕ್ ಪಟೇಲ್ (Hardik Patel) ಬುಧವಾರ (ಮೇ 18) ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೇಶದ ಗಮನ ಸೆಳೆದಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಶೀಘ್ರದಲ್ಲಿಯೆ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಪಾಟಿದಾರ್ ಸಮುದಾಯದ ಹಿರಿಯ ನಾಯಕ ಹಾರ್ದಿಕ್ ಪಟೇಲ್ ನಡೆ ಮಹತ್ವ ಪಡೆದುಕೊಂಡಿದೆ.
ರಾಜಸ್ಥಾನದ ಉದಯಪುರದಲ್ಲಿ ನಡೆದ ಮೂರು ದಿನಗಳ ಚಿಂತನ ಸಭೆಯಲ್ಲಿಯೂ ಹಾರ್ದಿಕ್ ಪಟೇಲ್ ಪಾಲ್ಗೊಂಡಿರಲಿಲ್ಲ. ಮೇ 15ರಂದು ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರಿಗೆ ರಾಜಕೀಯ ಸೇರ್ಪಡೆ ಕುರಿತು ಶೀಘ್ರ ನಿರ್ಧಾರ ತೆಗೆದುಕೊಳ್ಳುವಂತೆ ಹಾರ್ದಿಕ್ ಪಟೇಲ್ ವಿನಂತಿಸಿದ್ದರು.
ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಹೋರಾಡುತ್ತಿದ್ದ ಅಲ್ಪೇಶ್ ಕಠಾರಿಯಾ ಮತ್ತು ದಿನೇಶ್ ಬಂಭಾನಿಯಾ ಅವರೊಂದಿಗೆ ಹಾರ್ದಿಕ್ ಪಟೇಲ್ ಮೇ 15ರಂದು ನರೇಶ್ ಪಟೇಲ್ ಅವರನ್ನು ಭೇಟಿಯಾಗಿದ್ದರು. ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆಯಬಹುದು ಎಂಬ ಮಾತುಗಳು ಹಲವು ದಿನಗಳಿಂದ ಕೇಳಿ ಬರುತ್ತಿತ್ತು. ಗುಜರಾತ್ನ ಕಾಂಗ್ರೆಸ್ ನಾಯಕರು ತಮಗೆ ಸಹರಿಸುತ್ತಿಲ್ಲ. ಯುವಜನರ ಸಂಘಟನೆಗೆ ನೆರವಾಗುತ್ತಿಲ್ಲ ಎಂದು ಹಾರ್ದಿಕ್ ಪಟೇಲ್ ಈ ಮೊದಲು ಸಾರ್ವಜನಿಕವಾಗಿ ದೂರಿದ್ದರು.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?