ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಂದಿ ಟೀಸರ್ ನಲ್ಲಿ ಕನ್ನಡ! ಶಾರೂಖ್ ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್’ ಟೀಸರ್ ಔಟ್

Twitter
Facebook
LinkedIn
WhatsApp
ಹಿಂದಿ ಟೀಸರ್ ನಲ್ಲಿ ಕನ್ನಡ! ಶಾರೂಖ್ ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್’ ಟೀಸರ್ ಔಟ್
 

ಮುಂಬೈ: ಕೆಜಿಎಫ್ -2 ಚಿತ್ರ ಭಾರತೀಯ ಚಿತ್ರರಂಗದಲ್ಲಿ ನಾನಾ ದಾಖಲೆಗಳನ್ನು ಬರೆಯುವುದರ ಜೊತೆಗೆ ಭಾರತೀಯ ಚಿತ್ರರಂಗದಲ್ಲಿ ಮಹತ್ವದ ತಿರುವು ನೀಡಿದೆ. ಸ್ಯಾಂಡಲ್ ವುಡ್ ಕೀರ್ತಿ ಪತಾಕೆಯನ್ನು ದೇಶ, ವಿದೇಶಗಳಲ್ಲಿ ರಾರಾಜಿಸುವಂತೆ ಮಾಡಿದೆ.

ಒಂದು ಕಾಲದಲ್ಲಿ ಕನ್ನಡ ಸಿನಿಮಾವೆಂದರೆ ಮೂಗು ಮುರಿಯುತ್ತಿದ್ದವರು ಈಗ ಕನ್ನಡ ಸಿನಿಮಾ, ಕಲಾವಿದರು, ತಂತ್ರಜ್ಞರ ಬಗ್ಗೆ ವಿಶೇಷ ಅಭಿಮಾನ, ಗೌರವ ಸಲ್ಲಿಸುವಂತೆ ಮಾಡಿದೆ. ಕೆಜಿಎಫ್-2 ಯಶಸ್ಸಿನಿಂದ ಆಕರ್ಷಿತರಾಗಿರುವ ಬಾಲಿವುಡ್ ಕೂಡಾ ಇದೀಗ ಪಂಚ ಭಾಷೆಗಳಲ್ಲಿ ಚಿತ್ರ ಬಿಡುಗಡೆ ಮಾಡುತ್ತಿದೆ. ಭಾರತೀಯ ಚಿತ್ರೋದ್ಯಮದಲ್ಲಿ ನಿಜಕ್ಕೂ ಇದೊಂದು ಮಹತ್ವದ ಬದಲಾವಣೆಯಾಗಿದೆ.

 

ಶಾರೂಖ್ ಖಾನ್ ಅಭಿನಯದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್’ ಟೀಸರ್  ಇಂದು ಬಿಡುಗಡೆಯಾಗಿದ್ದು, ಕನ್ನಡ ಭಾಷೆಗೂ ಸ್ಥಾನ ನೀಡಲಾಗಿದೆ. ಇದರಿಂದ ಕನ್ನಡಿಗರು ಪಿಧಾ ಆಗಿದ್ದಾರೆ. ಅಟ್ಲೀ ನಿರ್ದೇಶನದ, ಗೌರಿಖಾನ್ ನಿರ್ಮಿಸಿರುವ ಈ  ಚಿತ್ರದ ಟೀಸರ್ ನ್ನು ಶಾರೂಖ್ ಖಾನ್ ಇಂದು ತಮ್ಮ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಆಕ್ಷನ್ ಪ್ಯಾಕ್ಡ್ ಜವಾನ್ ಸಿನಿಮಾ ಜೂನ್ 2, 2023 ರಂದು ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡದಲ್ಲಿ ಬಿಡುಗಡೆಯಾಗಲಿದೆ ಎಂದು ಶಾರೂಖ್ ಖಾನ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ನ್ನು ಅಟ್ಲೀ ಸೇರಿದಂತೆ ಹಲವಾರು ಮಂದಿ ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ