ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಂದೂ, ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಷಡ್ಯಂತ್ರ – ತನಿಖೆ ನಡೆಸಿ ಉಗ್ರ ಶಿಕ್ಷೆಯಾಗಬೇಕು: ಶೋಭಾ ಕರಂದ್ಲಾಜೆ

Twitter
Facebook
LinkedIn
WhatsApp
ಹಿಂದೂ, ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಷಡ್ಯಂತ್ರ – ತನಿಖೆ ನಡೆಸಿ ಉಗ್ರ ಶಿಕ್ಷೆಯಾಗಬೇಕು: ಶೋಭಾ ಕರಂದ್ಲಾಜೆ

ನವದೆಹಲಿ: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿಂದೂ ಮತ್ತು ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಉದ್ದೇಶವಾಗಿದೆ. ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ. ಈ ಬಗ್ಗೆ ತನಿಖೆ ಆಗಬೇಕು, ಉಗ್ರ ಶಿಕ್ಷೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರದ ಪ್ರಮಾಣಿಕ ಕಾರ್ಯಕರ್ತ. ಕೋಳಿ ಅಂಗಡಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದ ಪ್ರವೀಣ್‍ನನ್ನು ಕೊಲೆ ಮಾಡಿದ್ದಾರೆ. ಮಸೂದ್ ಹತ್ಯೆಗೆ ಹೊಂದಾಣಿಕೆ ಮಾಡುತ್ತಿದ್ದಾರೆ. ಮಸೂದ್, ಪ್ರವೀಣ್‍ಗೆ ಗೊತ್ತಿರಲಿಲ್ಲ. ಮಸೂದ್ ಹತ್ಯೆ ಮಾಡಿದವರು ವೈಯಕ್ತಿಕ ಜಗಳ ಮಾಡಿಕೊಂಡಿದ್ದರು. ಪಾನಮತ್ತರಾಗಿದ್ದರು. ಹಾಗಾಗಿ ಹತ್ಯೆ ನಡೆದಿತ್ತು. ಆದರೆ ಪ್ರವೀಣ್ ಪ್ರಕರಣ ಭಿನ್ನವಾಗಿದೆ. ಬೈಕ್ ಮೇಲೆ ಬಂದು ಅವರ ಮೇಲೆ ದಾಳಿ ಮಾಡಿದ್ದಾರೆ. ತಲವಾರ್‌ನಿಂದ ಕುತ್ತಿಗೆ ಮತ್ತು ತಲೆಗೆ ಹೊಡೆಯಲಾಗಿದೆ ಎಂದಿದ್ದಾರೆ.

ಮೋದಿ, ಯೋಗಿ ಮಾದರಿಯಲ್ಲಿ ಇವರಿಗೆ ಗಟ್ಸ್ ಇಲ್ಲ: ಪ್ರವೀಣ್ ಹತ್ಯೆಗೆ ಮುತಾಲಿಕ್ ಕಿಡಿ

ಕೊಲೆ ನಡೆದ ಪ್ರದೇಶ ಕೇರಳ ಗಡಿ ಭಾಗ. ಗ್ರಾಮೀಣ ಪ್ರದೇಶ ಆಗಿರುವುದರಿಂದ ಸಿಸಿಟಿವಿ ಇರಲ್ಲ. ಅದಾಗ್ಯೂ ಇದರ ಹಿಂದೆ ಇರುವ ಎಲ್ಲರನ್ನು ಬಂಧಿಸಬೇಕು. ಸ್ಥಳೀಯರ ಕುಮ್ಮಕ್ಕು ಇರುವ ಸಾಧ್ಯತೆಗಳಿದೆ. ಯಾವ ಸಂಘಟನೆ ಕೆಲಸ ಮಾಡಿದೆ ಎಂಬುದನ್ನು ಪತ್ತೆ ಹಚ್ಚಬೇಕು. ಇಂದು ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ. ಎನ್‍ಐಎ ತನಿಖೆ ವಹಿಸಲು ಮನವಿ ಮಾಡುತ್ತೇನೆ. ರಾಷ್ಟ್ರೀಯ ಭದ್ರತೆಗೆ ಸವಾಲಾಗಿರುವವರನ್ನು ಪತ್ತೆ ಹಚ್ಚಬೇಕು ಈ ಬಗ್ಗೆ ಕ್ರಮ ವಹಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಪುತ್ತೂರು, ಸುಳ್ಯ, ಕಡಬ ತಾಲೂಕು ಬಂದ್‌ಗೆ ಕರೆ

ಬೇರೆ ಯಾವುದೇ ಪ್ರಶ್ನೆಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ನಾವು ಅಪರಾಧಿಗಳನ್ನು ಪತ್ತೆ ಹಚ್ಚಬೇಕು. ಅಮಾಯಕರನ್ನು ಹತ್ಯೆ ಮಾಡಲಾಗಿದೆ. ಸಂಘಟನೆಯ ಹುಡುಗ, ಕಳೆದ ಬಾರಿ ಸುಳ್ಯಕ್ಕೆ ಭೇಟಿ ನೀಡಿದಾದ ಭೇಟಿಯಾಗಿದ್ದ. ಕಳೆದ ರಕ್ಷ ಬಂಧನದ ವೇಳೆ ಭೇಟಿ ಮಾಡಿದ್ದ. ವೈಯಕ್ತಿಕವಾಗಿ ತುಂಬಾ ಗೊತ್ತಿರುವ ವ್ಯಕ್ತಿ. ವಿವಾದಗಳಲ್ಲಿ ಸಿಲುಕಿಕೊಳ್ಳದೆ ಇದ್ದಾತ. ಯಾವುದೇ ಗಲಭೆಗಳಲ್ಲಿ ಭಾಗಿಯಾಗುತ್ತಿರಲ್ಲ. ಚುನಾವಣೆ ಸಂದರ್ಭದಲ್ಲಿ ಪಕ್ಷ ಕೊಟ್ಟ ಕೆಲಸ ಮಾಡುತ್ತಿದ್ದ ಎಂದು ಪ್ರವೀಣ್ ಕುರಿತಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ