ಮುಂಬೈ: ಹಿಂಸೆ ಹೆಚ್ಚುತ್ತಿರುವ ಸಮಾಜವು ಹೆಚ್ಚು ದಿನಗಳು ಉಳಿಯುವುದಿಲ್ಲ. ಇದರಿಂದಾಗಿ ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ದೇಶದ ಹಲವಾರು ಭಾಗಗಳಲ್ಲಿ ಗುಂಪುಗಳ ನಡುವೆ ಘರ್ಷಣೆಗಳು ನಡೆಯುತ್ತಿವೆ. ಈ ರೀತಿಯ ಹಿಂಸಾಚಾರದಿಂದಾಗಿ ಯಾರಿಗೂ ಪ್ರಯೋಜನವಿಲ್ಲ. ಇದರ ಬದಲು ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸುವ ಮತ್ತು ಮಾನವೀಯತೆಯನ್ನು ಕಾಪಾಡುವ ಅಗತ್ಯತೆ ಇದೆ ಎಂದರು.
ಹಿಂಸೆ ಹೆಚ್ಚುತ್ತಿರುವ ಸಮಾಜವು ತನ್ನ ಕೊನೆಯ ದಿನಗಳನ್ನು ಎಣಿಸುತ್ತದೆ. ನಾವು ಎಂದಿಗೂ ಅಹಿಂಸಾತ್ಮಕ ಮತ್ತು ಶಾಂತಿ ಪ್ರಿಯರಾಗಬೇಕು. ಇದಕ್ಕಾಗಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿ ಶಾಂತಿ ಕಾಪಾಡುವುದು ಅತ್ಯಗತ್ಯವಾಗಿದೆ. ಎಲ್ಲರೂ ಇದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?