ಬಹು ಚರ್ಚೆಗೆ ಅವಕಾಶ ಆಗಿದ್ದ ಹಿಜಾಬ್ ವಿವಾದ ಕೊನೆಗೂ ಹೈಕೋರ್ಟ್ ಅಂಗಳದಲ್ಲಿ ಮುಕ್ತಾಯವಾಗಿದ್ದು, ಶಾಲೆಗೆ ಹಿಜಾಬ್ ಧರಿಸಲು ಹೈಕೋರ್ಟ್ ನಿರಾಕರಿಸಿದೆ.
ಅಲ್ಲದೆ ಶಾಲಾ ಸಮವಸ್ತ್ರ ವೆ ಅಂತಿಮ ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್ ಈ ವಿಷಯದಲ್ಲಿ ತನ್ನ ಅಂತಿಮ ತೀರ್ಪು ನೀಡಿದೆ.
ಕರ್ನಾಟಕ ಹೈಕೋರ್ಟ್ನ ಪೂರ್ಣ ಪೀಠ ಮಹತ್ವದ ತೀರ್ಪು ನೀಡಿದೆ. ಪ್ರತಿ ಪುಟಕ್ಕೂ ಸಹಿ ಹಾಕಿ ಹೇಳಿಕೆ ನೀಡಿದ ಮುಖ್ಯ ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ಕೆಲವು ಪ್ರಶ್ನೆಗಳನ್ನು ರಚಿಸಿದ್ದೇವೆ. ಅವುಗಳಿಗೆ ಉತ್ತರವನ್ನೂ ನೀಡಿದ್ದೇವೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ನಿಗದಿಪಡಿಸುವುದು ಸೂಕ್ತವಾದ ನಿರ್ಬಂಧನೆ. ಸರ್ಕಾರದ ಆದೇಶ ಕಾನೂನುಬದ್ದವಾಗಿದೆ ಎಂದರು. ಉಡುಪಿಯಿಂದ ಶುರುವಾಗಿದ್ದ ಹಿಜಾಬ್ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು. ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು, ನಾವು ಧರಿಸಿಯೇ ಶಾಲೆ- ಕಾಲೇಜಿಗೆ ಬರುತ್ತೇವೆ ಎಂದು ಪ್ರತಿಭಟನೆ ನಡೆಸಿದ್ದರು. ಜೊತೆಗೆ ಹಿಜಾಬ್ ಧರಿಸುವವರೆಗೆ ಕೇಸರಿ ಶಾಲು ಧರಿಸುತ್ತೇವೆ ಅಂತ ಹಲವು ಹಿಂದೂ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದರು.
ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರವರ ಪೂರ್ಣ ಪೀಠ ತೀರ್ಮಾನ ಕೈಗೊಂಡಿದ್ದು, ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ಹೇರುವ ಅಗತ್ಯವಿಲ್ಲ ಅಂತ ಕೋರ್ಟ್ ತಿಳಿಸಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?