ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಿರಿಯ ನಟ ಶಿವರಾಂ ನಿಧನ.

Twitter
Facebook
LinkedIn
WhatsApp
ಹಿರಿಯ ನಟ ಶಿವರಾಂ ನಿಧನ .

ಬೆಂಗಳೂರು: ಕನ್ನಡ ಚಿತ್ರರಂಗದ ಮಂದಿಗೆ ಮನೆಯ ಹಿರಿಯಣ್ಣನನ್ನು ಕಳೆದುಕೊಂಡ ಭಾವ. ಶಿವರಾಮಣ್ಣ ಎಂದೇ ಆಪ್ತರಾಗಿದ್ದ ಹಿರಿಯ ನಟ ಶಿವರಾಂ (83) ನಮ್ಮನ್ನಗಲಿದ್ದಾರೆ.
ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಹೊಸಕೆರೆ ಹಳ್ಳಿಯ ಖಾಸಗಿ ಅಸ್ಪತ್ರೆಗೆ ಅವರು ದಾಖಲಾಗಿದ್ದರು . 3 ದಿನಗಳ ಹಿಂದೆ ಕಾರಿನಲ್ಲಿ ತೆರಳುವಾಗ ಅಪಘಾತವಾಗಿತ್ತು. ಚಿಕಿತ್ಸೆಯ ಬಳಿಕ ಮನೆಗೆ ಮರಳಿದ್ದ ಅವರ ಆರೋಗ್ಯ ಹದಗೆಟ್ಟಿತ್ತು.

ಶಿವರಾಂ ಅವರ ನಟನೆಯ ಚಿತ್ರಗಳು:
1958 ರಿಂದ 1965 ವರೆಗೆ ಶಿವರಾಂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಪೋಷಕ ನಟನಾಗಿ ಕಲ್ಯಾಣ್ ಅವರ ಚಿತ್ರ “ಬೆರೆತ ಜೀವ” ದ ಮೂಲಕ ಸಿನಿ ಪಯಣ ಆರಂಭಿಸಿದ ಇವರು, ಸುಮಾರು 6 ದಶಕಗಳಿಂದ ಕಿರಿ ಹಾಗೂ ಹಿರಿ ತೆರೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಶಿವರಾಂ ನಟನೆಯ ಶರಪಂಜರ’, ‘ನಾಗರಹಾವು’ , ‘ಶುಭಮಂಗಳ’, ‘ಚಲಿಸುವ ಮೋಡಗಳು’ , ‘ಶ್ರಾವಣ ಬಂತು’ , ‘ಹಾಲು ಜೇನು’, ‘ಹೊಂಬಿಸಿಲು’, ‘ಹೊಸ ಬೆಳಕು’, ‘ಗುರು ಶಿಷ್ಯರು’ , ‘ಸಿಂಹದಮರಿ ಸೈನ್ಯ’ , ‘ಮಕ್ಕಳ ಸೈನ್ಯ’, ‘ಆಪ್ತಮಿತ್ರ’, ‘ಹುಚ್ಚ’, ಬಜರಂಗಿ, ‘ಹೃದಯವಂತ’ ಮುಂತಾದ ಸಿನಿಮಾಗಳು ಪ್ರಮುಖವಾದವು.
ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ಗೃಹಭಂಗ’, ರವಿಕಿರಣ್ ನಿರ್ದೇಶಿಸಿದ ‘ಬದುಕು’ ಧಾರಾವಾಹಿಯಲ್ಲೂ ಶಿವರಾಂ ಅಭಿನಯಿಸಿದ್ದಾರೆ. ಇದಿಷ್ಟೇ ಅಲ್ಲದೆ, ಶಿವರಾಂ ಅವರು ಸಹೋದರ ಎಸ್.ರಾಮನಾಥನ್‍ ಅವರ ಜೊತೆ ‘ರಾಶಿ ಬ್ರದರ್ಸ್’ ಎಂಬ ಸಂಸ್ಥೆ ಕಟ್ಟಿ, ಈ ಮೂಲಕ ಕನ್ನಡ, ಹಿಂದಿ ಚಿತ್ರಗಳನ್ನು ಕೂಡ ನಿರ್ಮಿಸಿದ್ದಾರೆ. ಇವುಗಳ ಪೈಕಿ ಡಾ. ರಾಜ್ ಕುಮಾರ್ ನಟನೆಯ 175ನೇ ಸಿನೆಮಾ ‘ನಾನೊಬ್ಬ ಕಳ್ಳ’, ರಜನಿಕಾಂತ್ ನಟನೆಯ ‘ಧರ್ಮ ದುರೈ’ ಜನ ಮನ್ನಣೆಗೆ ಪಾತ್ರವಾಗಿವೆ. ರಾಶಿ ಬ್ರದರ್ಸ್ ನಿರ್ದೇಶನದ ‘ ಗೇರಫ್ತರ್’ ಬಾಲಿವುಡ್ ಚಿತ್ರ ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಹಾಗೂ ರಜನಿಕಾಂತ್ ಈ ಮೂರು ದಿಗ್ಗಜರು ಒಟ್ಟಾಗಿ ನಟಿಸಿದ ಏಕೈಕ ಚಿತ್ರವಾಗಿದೆ.

ಪ್ರಶಸ್ತಿಗಳು
2010-11 ರಲ್ಲಿ ಕರ್ನಾಟಕ ಸರ್ಕಾರ ನೀಡುವ ಡಾ. ರಾಜ್ ಕುಮಾರ್ ಲೈಫ್ ಟೈಂ ಆಚಿವ್‌ಮೆಂಟ್ ಅವಾರ್ಡ್ ಹಾಗೂ 2013 ರ ಪದ್ಮಭೂಷಣ ಡಾ. ಸರೋಜಾದೇವಿ ನ್ಯಾಷನಲ್ ಅವಾರ್ಡ್‌ಗೂ ಶಿವರಾಂ ಅವರು ಭಾಜನರಾಗಿದ್ದರು.
ತಮ್ಮ ರಾಶಿ ಬ್ರದರ್ಸ್ ಸಂಸ್ಥೆ ಮೂಲಕ ‘ಗೆಜ್ಜೆಪೂಜೆ’, ‘ಉಪಾಸನೆ’, ‘ನಾನೊಬ್ಬ ಕಳ್ಳ’, ‘ಡ್ರೈವರ್ ಹನುಮಂತು, ‘ಬಹಳ ಚೆನ್ನಾಗಿದೆ’ ಸಿನಿಮಾ ನಿರ್ಮಿಸಿದ್ದಾರೆ. ಸಿಂಗೀತಮ್ ಶ್ರೀನಿವಾಸರಾವ್ ನಿರ್ದೇಶನದ ರಾಜಕುಮಾರ್ ನಟನೆಯ ಏಳು ಚಿತ್ರಗಳಿದ್ದು, ಈ ಏಳರಲ್ಲೂ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು