ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಜೂನ್ 12 ರವರೆಗೆ ಅವಕಾಶ ನೀಡಿದ ಹೈಕೋರ್ಟ್

Twitter
Facebook
LinkedIn
WhatsApp
ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಜೂನ್ 12 ರವರೆಗೆ ಅವಕಾಶ ನೀಡಿದ ಹೈಕೋರ್ಟ್

ರಾಜ್ಯ ಸಾರಿಗೆ ಇಲಾಖೆ ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು ಹೆಚ್ಎಸ್ಆರ್‌ಪಿ ನಂಬರ್ ಪ್ಲೇಟ್ (HSRP Number Plate) ಅಳವಡಿಕೆ ಮಾಡಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ. ಇಂದು ಮಧ್ಯರಾತ್ರಿ 12 ರವರೆಗೆ ಗಡುವು ನೀಡಲಾಗಿತ್ತು, ಆದರೆ ಎರಡ್ಮೂರು ಬಾರಿ ಗಡುವು ವಿಸ್ತರಣೆ ಮಾಡಿದರೂ ಸಹ ನಂಬರ್ ಪ್ಲೇಟ್ ಅಳವಡಿಕೆ ಕಡಿಮೆ ಪ್ರಮಾಣದಲ್ಲಿ ಆಗಿದೆ. ರಾಜ್ಯದ 2 ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ ಕೇವಲ 41 ಲಕ್ಷ ವಾಹನಗಳು ಮಾತ್ರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಕೊಳ್ಳಲು ಮುಂದಾಗಿದ್ದಾರೆ.

ಈಗಾಗಲೇ ಹೈಕೋರ್ಟ್ ಜೂನ್ – 12 ರ ವರೆಗೆ ಹೆಚ್ಎಸ್ಆರ್ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ 12 ರ ವರೆಗೆ ಅವಕಾಶ ನೀಡಬೇಕೆಂದು ಸೂಚನೆ ನೀಡಿದೆ. ಹೈಕೋರ್ಟ್ ಕೊಟ್ಟ ಗಡುವು ಮುಗಿದ ನಂತರವೂ ಅಳವಡಿಸಿಕೊಂಡಿಲ್ಲ ಎಂದರೆ ಮೊದಲ ಬಾರಿ 500 ರುಪಾಯಿ ಎರಡನೇ ಬಾರಿ 1 ಸಾವಿರ ಮೂರನೇ ಬಾರಿ ಗಾಡಿ ಸೀಜ್ ಮಾಡ್ತಿವಿ ಎಂದು ರಾಜ್ಯ ಸಾರಿಗೆ ಇಲಾಖೆ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ್ ಎಚ್ಚರಿಕೆ ನೀಡಿದ್ದಾರೆ.

ಇನ್ನೂ ಈಗಾಗಲೇ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಕೊನೆಯ ದಿನಾಂಕ ಹತ್ತಿರವಾಗ್ತಿದಂತೆ ವಾಹನ ಮಾಲೀಕರು ಮುಗಿಬಿದ್ದು ಆನ್ಲೈನ್ ಮೂಲಕ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಬುಕ್ಕಿಂಗ್ ಮಾಡಲು ಮುಂದಾಗ್ತಿದ್ದಾರೆ. ಇದರಿಂದ ಸಾಕಷ್ಟು ನಕಲಿ‌ ಕಂಪನಿಗಳು ಹುಟ್ಟಿಕೊಂಡಿದ್ದು ಅಸಲಿ ನಕಲಿ ಗೊತ್ತಾಗದೆ ವಾಹನ ಮಾಲೀಕರು ನಕಲಿ ಕಂಪನಿಗಳಲ್ಲಿ ಹಣ ಹಾಕಿ ಹಣ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಆರ್ಟಿಓ ಅಧಿಕಾರಿಗಳು ತನಿಖೆ ಮಾಡಿ ಫ್ಯೂಜನ್ ಅನ್ನೋ ನಕಲಿ ಕಂಪನಿ ವಿರುದ್ಧ ಹನುಮಂತನಗರ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಮಾತಾನಾಡಿದ ಟ್ರಾಫಿಕ್ ಎಕ್ಸ್ಪರ್ಟ್ ಶ್ರೀ ಹರಿ ಎರಡ್ಮೂರು ಬಾರಿ ಅವಕಾಶ ಕೊಟ್ಟರು ನಮ್ಮ ಜನರು ಯಾಕೆ ಅಳವಡಿಸಿಕೊಳ್ಳಲು ಮುಂದಾಗಿಲ್ಲ ಅಂತ ಗೊತ್ತಾಗ್ತಿಲ್ಲ ಅಳವಡಿಸದ ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಒಟ್ನಲ್ಲಿ ರಾಜ್ಯ ಸಾರಿಗೆ ಇಲಾಖೆ ಏನೋ ಬೈಕ್ ಕಳ್ಳತನವನ್ನು ತಡೆಗಟ್ಟಲು ಎಲ್ಲಾ ಹಳೆಯ ವಾಹನಗಳಿಗೂ ಹೆಚ್ಎಸ್ಆರ್ಪಿ ಕಡ್ಡಾಯಗೊಳಿಸಿದೆ. ಆದರೆ ಎರಡ್ಮೂರು ಸಲ ಗಡುವು ನೀಡಿದ್ರು ಇಲ್ಲಿಯವರೆಗೆ ಕೇವಲ 41 ಲಕ್ಷ ವಾಹನ ಮಾಲೀಕರು ಮಾತ್ರ ಹಾಕಿಸಿಕೊಂಡಿದ್ದಾರೆ. ಜೂನ್ 12 ರೊಳಗಾದ್ರು ಮಿಕ್ಕವರು ಹಾಕಿಸಿಕೊಳ್ತಾರ ಎಂದು ಕಾದು ನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist