ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆತ್ತ ಮಗುವನ್ನೇ ಮಾರಿದ ತಾಯಿ – ನಾಲ್ಕೂವರೆ ವರ್ಷದ ಬಳಿಕ ಮತ್ತೆ ತಂದೆಯನ್ನ ಸೇರಿದ ಬಾಲಕ

Twitter
Facebook
LinkedIn
WhatsApp
ಹೆತ್ತ ಮಗುವನ್ನೇ ಮಾರಿದ ತಾಯಿ – ನಾಲ್ಕೂವರೆ ವರ್ಷದ ಬಳಿಕ ಮತ್ತೆ ತಂದೆಯನ್ನ ಸೇರಿದ ಬಾಲಕ

ಆನೇಕಲ್: ಪತಿಯೊಂದಿಗೆ (Husband) ಜಗಳವಾಡಿ ಪತ್ನಿಯೊಬ್ಬಳು ತನ್ನ ಒಂದುವರೆ ವರ್ಷದ ಮಗುವನ್ನು ಬೇರೆಯವರಿಗೆ ಮಾರಾಟ ಮಾಡಿದ್ದು, ನಾಲ್ಕುವರೆ ವರ್ಷದ ತಂದೆಯ (Father) ಬಳಿಕ ತಂದೆಗೆ ಸಿಕ್ಕಿರುವ ಘಟನೆ ಬೆಂಗಳೂರು (Bengaluru) ಹೊರವಲಯದಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಮಮತಾ ಹಾಗೂ ಬಾಲಮಣಿ 2012ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಅದಾದ ಬಳಿಕ ಆನೇಕಲ್‍ನಲ್ಲೇ ತನ್ನ ಪತಿಯೊಂದಿಗೆ ಮನೆ ಮಾಡಿಕೊಂಡು ವಾಸವಿದ್ದಳು. ಆದರೆ 2018ರಲ್ಲಿ ಗಂಡ – ಹೆಂಡತಿ ನಡುವೆ ಜಗಳ ಆಗಿತ್ತು. ಆ ವೇಳೆ ಬಾಲಮಣಿ ಬೆಂಗಳೂರಿನ ಜಯನಗರದ ನಿವಾಸಕ್ಕೆ ಹೋಗಿದ್ದಾನೆ.

ಬಾಲಮಣಿ ಮತ್ತೇ 45 ದಿನಗಳ ಬಳಿಕ ಮರಳಿ ಬಳ್ಳೂರಿಗೆ ಬಂದಾಗ ಮನೆಯಲ್ಲಿ ಹೆಣ್ಣು ಮಗು ಮಾತ್ರ ಇತ್ತು. ಗಂಡು ಮಗು ಇರಲಿಲ್ಲ. ಆಗ ಪತ್ನಿ ಮಮತಾಳನ್ನು ಪ್ರಶ್ನೆ ಮಾಡಿದಾಗ ಹಾಸ್ಟೆಲ್‍ನಲ್ಲಿ ಮಗು ಇರುವುದಾಗಿ ಹೇಳಿದ್ದಾಳೆ. ವಾರ ಕಳೆದರೂ ಕೂಡ ಮಗು ಎಲ್ಲಿದೆ ಎನ್ನುವ ಬಗ್ಗೆ ಸರಿಯಾದ ಮಾಹಿತಿಯನ್ನು ಮಮತಾ ಪತಿಗೆ ನೀಡಲಿಲ್ಲ. ಆಗ ಮಮತಾ ಮಗುವನ್ನು ಏನೋ ಮಾಡಿದ್ದಾಳೆ ಎಂದು ಬಾಲಮಣಿ ಆತಂಕಕ್ಕೆ ಒಳಗಾಗಿದ್ದಾನೆ.

POLICE JEEP

ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದು ಮಮತಾ ಹೊಸೂರು ಸಮೀಪದ ಸಿಪ್‍ಕಾಟ್ ಪೊಲೀಸ್ ಠಾಣೆಯಲ್ಲಿ ಗಂಡನ ವಿರುದ್ಧ ದೂರು ನೀಡಿದ್ದಾಳೆ. ಪೊಲೀಸರು ಠಾಣೆಗೆ ಬಾಲಮಣಿಯನ್ನು ಕರೆದು ಬುದ್ಧಿವಾದ ಹೇಳುತ್ತಿದ್ದಾರೆ. ಆದರೆ ಇನ್ನೊಂದು ಹೆಣ್ಣು ಮಗುವನ್ನು ಪತಿಯನ್ನು ಸಹ ತಾಯಿ ಮಮತಾಳನ್ನು ಬಿಟ್ಟು ಹೋಗಿದ್ದಾಳೆ. ಬಾಲಮಣಿ ಹೆಣ್ಣು ಮಗುವನ್ನು ಹಾಸ್ಟೆಲ್‍ಗೆ ಸೇರಿಸಿ ವಿದ್ಯಾಭ್ಯಾಸ ನೀಡುತ್ತಾ, ಕಳೆದ ನಾಲ್ಕೂವರೆ ವರ್ಷದಿಂದ ತನ್ನ ಮಗನಿಗಾಗಿ ತಮಿಳುನಾಡಿನ ಹಲವಡೆ ಹುಡುಕಾಟ ನಡೆಸಿದ್ದಾನೆ.

ಕೊನೆಗೂ ಮಗು ಇರುವುದು ಗೊತ್ತಾದರೂ ಸಹ ಪೊಲೀಸರು ಸಹಕಾರ ನೀಡದ ಹಿನ್ನೆಲೆ ಕರೆದುಕೊಂಡು ಬರಲು ಸಹಾಯ ಆಗಿರಲಿಲ್ಲ. ಬಳಿಕ ಜಯನಗರದ ಆಮ್ ಆದ್ಮಿ ಪಾರ್ಟಿಯ ಸದಸ್ಯರು ಭಾಸ್ಕರ್ ರಾವ್ ಮೂಲಕ ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ತಿಳಿಸಿದ ಬಳಿಕ ಪೊಲೀಸರು ತಮಿಳುನಾಡಿನ ಈ ರೋಡ್‍ನಲ್ಲಿರುವ ಮಗುವನ್ನು ಅತ್ತಿಬೆಲೆ ಠಾಣೆಗೆ ಕರೆತಂದು ಮಗುವಿನ ತಂದೆಗೆ ಒಪ್ಪಿಸಿದ್ದು, ಮಗನನ್ನು ನೋಡಿದ ಬಾಲಮಣಿ ತಬ್ಬಿಕೊಂಡು ಮಗುವನ್ನು ಮುದ್ದಾಡಿದ್ದಾನೆ. ಇನ್ನೊಂದೆಡೆ ತಮಿಳುನಾಡಿನಲ್ಲಿ ನಾಲ್ಕೈದು ಜನರ ಕೈ ಬದಲಾಗಿ ಹಳ್ಳಿಯೊಂದರಲ್ಲಿ ಸೇರಿದ್ದ ಮಗುವನ್ನು ಮರಳಿ ಸೇರಿಸಲು ಜೊತೆಗೆ ನಿಂತ ಆಮ್ ಆದ್ಮಿ ಪಾರ್ಟಿಯ ಸದಸ್ಯರು ಖುಷಿ ಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ