ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೆದ್ದಾರಿಯಲ್ಲಿ ಗುಡ್ಡ ಕುಸಿತ: 6 ಜನರ ಮೃತದೇಹಗಳು ಪತ್ತೆ, ಉಳಿದವರಿಗಾಗಿ ಮುಂದುವರಿದ ಶೋಧ

Twitter
Facebook
LinkedIn
WhatsApp
ಹೆದ್ದಾರಿಯಲ್ಲಿ ಗುಡ್ಡ ಕುಸಿತ: 6 ಜನರ ಮೃತದೇಹಗಳು ಪತ್ತೆ, ಉಳಿದವರಿಗಾಗಿ ಮುಂದುವರಿದ ಶೋಧ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ಕಾರವಾರ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಗುಡ್ಡ ಕುಸಿತದಲ್ಲಿ ಕನಿಷ್ಠ 10 ಜನ ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 6 ಜನರ ಮೃತದೇಹಗಳು ಪತ್ತೆಯಾಗಿವೆ.

10 ಮಂದಿಯ ಪೈಕಿ ಐವರು ಒಂದೇ ಕುಟುಂಬದ ಸದಸ್ಯರಿದ್ದಾರೆಂದು ಹೇಳಲಾಗಿದ್ದು, ಇವರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೋಟೆಲ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್​ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಹಾಗೂ ಟ್ರಕ್​​​​ ಚಾಲಕನ ಶವ ಪತ್ತೆಯಾಗಿದೆ. ಇನ್ನುಳಿದವರ ಮೃತ ದೇಹಗಳಿಗಾಗಿ ಎನ್​ಡಿಆರ್​ಎಫ್​ ಶೋಧ ಕಾರ್ಯ ಮುಂದುವರೆಸಿದೆ.

ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ ಸಿಲುಕಿಕೊಂಡಿವೆ. ಗುಡ್ಡ ಕುಸಿತದ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಕಾರು ಕಂದಕಕ್ಕೆ ಬಿದ್ದು ಬೆಂಗಳೂರಿನ ಮೂವರು ದುರ್ಮರಣ

ಬೆಂಗಳೂರು: ಪ್ರವಾಸಕ್ಕೆಂದು ತೆರಳಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ಜಮ್ಮು-ಕಾಶ್ಮೀರದಲ್ಲಿ ದುರ್ಮರಣ ಹೊಂದಿದ್ದಾರೆ. ತಂದ್ರ ದಾಸ್(67), ಮೊನಾಲಿಸಾ ದಾಸ್(41) ಸೇರಿದಂತೆ ಮೂವರ  ಮೃತಪಟ್ಟಿದ್ದಾರೆ. ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳಾಗಿದ್ದು, ಅಮರನಾಥ ಯಾತ್ರೆ ಸಮೀಪದ ಝೋಜಿಲ್ ಪಾಸ್ ಬಳಿ ಕಾರು ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ದುರಂತ ಅಂದ್ರೆ ಚಾಲಕ ಹ್ಯಾಂಡ್​ ಬ್ರೇಕ್ ಹಾಕದೇ ಇಳಿದು ಹೋಗಿದ್ದರಿಂದ ಕಾರು ತನ್ನಷ್ಟಕ್ಕೆ ತಾನೇ ಮೂವ್ ಆಗಿ ಕಂದಕಕ್ಕೆ ಉರುಳಿಬಿದ್ದಿದೆ.

ಮೃತಪಟ್ಟ ಕುಟುಂಬ ಜಮ್ಮು-ಕಾಶ್ಮೀರದಲ್ಲಿ ಬಾಡಿಗೆ ಕಾರಿನಲ್ಲಿ ಪ್ರಯಾಣಿಸುತ್ತಿತ್ತು. ಆದ್ರೆ, ಮಾರ್ಗಮಧ್ಯೆ ಅಮರನಾಥ ಸಮೀಪದ ಝೋಜಿಲ್ ಪಾಸ್ ಬಳಿ ಬೇರೊಂದು ಕಾರು ರಸ್ತೆಯಲ್ಲಿ ಕೆಟ್ಟು ನಿಂತಿದೆ. ಅದನ್ನು ನೋಡಲು ಕುಟುಂಬವನ್ನು ಕರೆದುಕೊಂಡು ಹೋಗುತ್ತಿದ್ದ ಚಾಲಕ ಕಾರು ನಿಲ್ಲಿಸಿದ್ದಾನೆ. ಅಲ್ಲದೇ ಏನಾಗಿದೆ ಎಂದು ಕಾರು ಇಳಿದು ಹೋಗಿದ್ದಾರೆ. ಆದ್ರೆ, ಇಳಿದು ಹೋಗುವ ಮುನ್ನ ಕಾರಿನ ಹ್ಯಾಂಡ್​ ಬ್ರೇಕ್ ಹಾಕುವುದನ್ನು ಮರೆತಿದ್ದಾನೆ. ಇದರಿಂದ ಕಾರು ತನ್ನಷ್ಟಕ್ಕೆ ತಾನೇ ಮೂವ್ ಆಗಿ ರಸ್ತೆ ಪಕ್ಕದಲ್ಲಿದ್ದ ಪ್ರಪಾತಕ್ಕೆ ಬಿದ್ದಿದೆ.

ಪರಿಣಾಮ ಘಟನೆಯಲ್ಲಿ ಬೆಂಗಳೂರಿನ ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್​ನ ಕುಟುಂಬ ದುರಂತ ಸಾವು ಕಂಡಿದ್ದಾರೆ. ಇನ್ನು CRPF, ಜಮ್ಮು-ಕಾಶ್ಮೀರ ಪೊಲೀಸರು, ಮೂವರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ 9 ವರ್ಷ ಬಾಲಕಿ ಅದ್ರಿತಾ ದಾಸ್​ ಬದುಕುಳಿದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶೆಡ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು – ತಾಯಿ, ಮಗಳು ಸಜೀವ ದಹನ

ಬಾಗಲಕೋಟೆ: ಸಿಂಟೆಕ್ಸ್ ಟ್ಯಾಂಕ್‌ನಲ್ಲಿ ಪೆಟ್ರೋಲ್ (Petrol) ತುಂಬಿಸಿ ಶೆಡ್ (Shed) ಮೇಲೆ ಸುರಿದು ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ನಡೆದಿದೆ.

ಜೈಬಾನ್ (55), ಶಬಾನ್ (25) ಮೃತ ದುರ್ದೈವಿಗಳು. ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿದ್ದುವ, ಶೆಡ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ದಸ್ತಗೀರಸಾಬ್, ಸುಬಾನ್ ಹಾಗೂ ಸಿದ್ದಿಕಿ ಎಂಬವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಂಡತಿಯ ಕಾಟ ತಾಳಲಾರದೆ ಪತಿ ಆತ್ಮಹತ್ಯೆ..!

ನೆಲಮಂಗಲ(ಜು.16):  ಹೆಂಡತಿಯ ಕಾಟ ತಾಳಲಾರದೆ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. ಗುಲ್ಜಾರ್ ಹುಸೈನ್ ಚೌಧರಿ(20) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ. 

ಮೃತ ಗುಲ್ಜಾರ್ ಹುಸೈನ್ ಚೌಧರಿ ಲಾರಿ ಚಾಲಕನಾಗಿದ್ದನು. ಅಸ್ಸಾಂ ಮೂಲದ ಲಾರಿ ಚಾಲಕ ಗುಲ್ಜಾರ್ ಮದುವೆ ನಂತರ ತೊಣಚಿನಕುಪ್ಪೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಫೋನ್ ಬಳಕೆಯಿಂದ ರೋಸಿ ಹೋಗಿದ್ದನು ಎಂದು ಹೇಳಲಾಗುತ್ತಿದೆ.  

ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ರು ಹೆಂಡತಿ ಶೋಕಿಯಲ್ಲಿದ್ದಳು. ಇದರಿಂದ ಮನನೊಂದ ಗುಲ್ಜಾರ್ ಹುಸೈನ್ ಚೌಧರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಡ ಹೆಂಡತಿ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿದ್ದವು, ಇದರಿಂದ ಮನನೊಂದು ಗುಲ್ಜಾರ್ ಹುಸೈನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ  ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕಾರವಾರ ಡಿಪೋಗೆ ನುಗ್ಗಿದ ನೀರು – 50ಕ್ಕೂ ಹೆಚ್ಚು ಬಸ್ಸುಗಳು ಜಲಾವೃತ

ಕಾರವಾರ: ಉತ್ತರ ಕನ್ನಡದಲ್ಲಿ (Uttara Kannada) ಭಾರೀ ಮಳೆಯಾಗುತ್ತಿದ್ದು (Rain) ನಗರದಲ್ಲಿರುವ ಕೆಎಸ್‌ಆರ್‌ಟಿಸಿ (KSRTC) ಬಸ್‌ ಡಿಪೋ (Bus Depot) ಜಲಾವೃತವಾಗಿದೆ.

50ಕ್ಕೂ ಹೆಚ್ಚು ಬಸ್ಸುಗಳು ನೀರಿನಲ್ಲಿ ಜಲಾವೃತವಾಗಿದ್ದು ವಿವಿಧ ಭಾಗಗಳಿಗೆ ತೆರಳುವ ಬಸ್ಸುಗಳ ಸೇವೆಯಲ್ಲಿ ವ್ಯತ್ಯಯವಾಗಿದೆ. ಹಬ್ಬುವಾಡ ರಸ್ತೆಯಲ್ಲಿ ಡಿಪೋ ಇದ್ದು ಬಸ್ಸುಗಳನ್ನು ಹೊರ ತೆಗೆಯಲು ಚಾಲಕರು ಹರಸಾಹಸ ಪಡುತ್ತಿದ್ದಾರೆ. ಮೂರು ದಿನಗಳಿಂದ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಚರಂಡಿ ನೀರು ಡಿಪೋಗೆ ನುಗ್ಗಿದ ಪರಿಣಾಮ ಸಮಸ್ಯೆಯಾಗಿದೆ.

ಹೊನ್ನಾವರ ಭಾಸ್ಕೇರಿ ವರ್ನಕೇರಿ ಬಳಿ ಮತ್ತೆ ಗುಡ್ಡ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿ 69 ಸಂಚಾರ ತಾತ್ಕಾಲಿಕ ಬಂದ್‌ ಆಗಿತ್ತು. ಹೊನ್ನಾವರ -ಬೆಂಗಳೂರು ರಸ್ತೆಯಲ್ಲಿ ನೂರಾರು ವಾಹನಗಳು ಬೆಳಗ್ಗೆ ನಿಂತಿದ್ದವು. ಗುಡ್ಡ ತೆರವು ಮಾಡಿದ ಬಳಿಕ ಈಗ ವಾಹನಗಳು ಸಂಚರಿಸುತ್ತಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist